Ad Widget

ಏನೆಕಲ್ಲು : ವಿವೇಕ ಜಾಗೃತ ಬಳಗದ ವತಿಯಿಂದ ರಕ್ತದಾನ ಶಿಬಿರ

ವಿವೇಕ ಜಾಗೃತ ಬಳಗ ಏನೆಕಲ್ಲು ಇದರ ವತಿಯಿಂದ ರೋಟರಿ ಕ್ಯಾಮ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಕಾರದೊಂದಿಗೆ ಏನೆಕಲ್ಲಿನ ಆದಿಶಕ್ತಿ ಭಜನಾಮಂದಿರದಲ್ಲಿ ಫೆ.26 ರಂದು ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸುಬ್ರಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ತ್ರಿಮೂರ್ತಿಯವರು ಉದ್ಘಾಟಿಸಿ ಶಿಬಿರದ ಬಗ್ಗೆ ಮಾಹಿತಿ ನೀಡಿದರು, ವೇದಿಕೆಯಲ್ಲಿ ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ...

ಗುತ್ತಿಗಾರು ಬೃಹತ್ ರಕ್ತದಾನ ಶಿಬಿರ, ಸನ್ಮಾನ ಮತ್ತು ರಕ್ತ ದಾನಿಗಳಿಗೆ ಗೌರವ  – ರಕ್ತದಾನ ಮಾಡುವ ಮೂಲಕ ಮಾದರಿಯಾದ ಠಾಣಾಧಿಕಾರಿ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇದರ ವತಿಯಿಂದ ಗ್ರಾಮ ಪಂಚಾಯತ್ ಗುತ್ತಿಗಾರು, ಅರೋಗ್ಯ ಕೇಂದ್ರ ಗುತ್ತಿಗಾರು, ಜಿಲ್ಲಾ ಮತ್ತು ತಾಲೂಕು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಸುಳ್ಯ ಅಮರ ಸಂಜೀವಿನಿ ಗ್ರಾಮದ ಮಟ್ಟದ ಒಕ್ಕೂಟ ಗುತ್ತಿಗಾರು, ಲಯನ್ಸ್ ಕ್ಲಬ್ ಹಿರಿಯಡ್ಕ, ಸಪ್ತ ಶ್ರೀ ಗುತ್ತಿಗಾರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ...
Ad Widget

ಸುಳ್ಯ : ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಸಂಜೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೃತಿಕಾ ಬಿಜಾಪುರ ಮೂಲದವಳಾಗಿದ್ದು, ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು,. ಸುಳ್ಯ ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ‌.

ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ – ಮಾ.18 ಮತ್ತು 19 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.26 ರಂದು ದೈವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಎ.ವಿ‌. ತೀರ್ಥರಾಮ ಅಂಬೆಕಲ್ಲು, ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಕೃಷ್ಣಪ್ಪಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ಜಗತ್...

ಸುಶೀಲ ಮೇಲಡ್ತಲೆ ನಿಧನ

ಅರಂತೋಡು ಗ್ರಾಮದ ಮೇಲಡ್ತಲೆ ಚಿನ್ನಪ್ಪ ಗೌಡರವರ ಧರ್ಮಪತ್ನಿ ಶ್ರೀಮತಿ ಸುಶೀಲರವರು ಅಲ್ಪ ಕಾಲದ ಅಸೌಖ್ಯದಿಂದ ಫೆ.26ರಂದು ಸಂಜೆ ನಿಧನರಾದರು.ಮೃತರು ಪತಿ ಚಿನ್ನಪ್ಪ ಗೌಡ, ಪುತ್ರ ಲಿಂಗರಾಜ್, ಸೊಸೆ ಶ್ರೀಮತಿ ಶುಭಲಕ್ಷ್ಮಿ, ಪುತ್ರಿ ಶ್ರೀಮತಿ ಯೋಗಲತಾ, ಅಳಿಯ ಕುಮಾರ, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಕೊಲ್ಲಮೊಗ್ರ: ಪಡಿಕಲ್ಲು-ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕೊಲ್ಲಮೊಗ್ರ ಗ್ರಾಮದ ಪಡಿಕಲ್ಲು ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರಾದ ಪರಮೇಶ್ವರ ಗೌಡರು ತೆಂಗಿನಕಾಯಿ ಒಡೆಯುವ ಮೂಲಕ ಫೆ.26 ರಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಮೋಹಿನಿ ಕಟ್ಟ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಬಾಲಸುಬ್ರಮಣ್ಯ ಭಟ್, ಕೊಲ್ಲಮೊಗ್ರ ಶಕ್ತಿ ಕೇಂದ್ರದ ಪ್ರಮುಖರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು. ಬೂತ್ ಅಧ್ಯಕ್ಷರಾದ ಹೂವಪ್ಪ ಸಂಪ್ಯಾಡಿ, ಕಾರ್ಯದರ್ಶಿ...

ಕೊಲ್ಲಮೊಗರು: ಪಡಿಕಲ್ಲು-ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕೊಲ್ಲಮೊಗ್ರ ಗ್ರಾಮದ ಪಡಿಕಲ್ಲು ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರಾದ ಪರಮೇಶ್ವರ ಗೌಡರು ತೆಂಗಿನಕಾಯಿ ಒಡೆಯುವ ಮೂಲಕ ಫೆ.26 ರಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಮೋಹಿನಿ ಕಟ್ಟ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಬಾಲಸುಬ್ರಮಣ್ಯ ಭಟ್, ಕೊಲ್ಲಮೊಗ್ರ ಶಕ್ತಿ ಕೇಂದ್ರದ ಪ್ರಮುಖರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು. ಬೂತ್ ಅಧ್ಯಕ್ಷರಾದ ಹೂವಪ್ಪ ಸಂಪ್ಯಾಡಿ, ಕಾರ್ಯದರ್ಶಿ...

ಕಳೆದ ಐದು ದಿನಗಳಿಂದ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಫೆ.27 ರಂದು ಸಂಜೆ ಶೋ ಲಭ್ಯ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಕಳೆದ ಐದು ದಿನಗಳಿಂದ ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಫೆ. 26 ರಂದು...

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್‌ಕುಮಾರ್‌ ಬಾನಡ್ಕ ಆಯ್ಕೆ

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆದಿದೆ. ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಬಾನಡ್ಕ 2ನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದರು. ಸದಸ್ಯರುಗಳಾಗಿ ವಿನಯ್ ನೆಕ್ರಾಜೆ, ವಿಶ್ವನಾಥ ಪೂಜಾರಿಮನೆ, ಪ್ರಶಾಂತ್ ಕೋಡಿಬೈಲು, ಮಹೇಶ್ ಎನ್.ಕೆ. ನಾಳ, ಲಕ್ಷ್ಮೀ ಜಯರಾಮ ಗೌಡ ಸಂಕಡ್ಕ, ಕುಸುಮಾವತಿ ಪದ್ಮನಾಭ ಪರಮಲೆ...

ಆನೆಗುಂಡಿ : 33 ಕೆ.ವಿ.ವಿದ್ಯುತ್ ಲೈನ್ ಗೆ ಮರ ಬಿದ್ದು ವ್ಯತ್ಯಯ – ವಿದ್ಯುತ್ ವಿಳಂಬ ಸಾಧ್ಯತೆ

ಮಾಡವು ಸುಳ್ಯ 33/11 ವಿದ್ಯುತ್ ಲೈನ್ ಗೆ ಆನೆಗುಂಡಿ ಬಳಿ ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿಯಾದ ಘಟನೆ ಇಂದುಮಧ್ಯಾಹ್ಮ ನಡೆದಿದೆ. ಬೈನೆ ಮರವನ್ನು ಆನೆ ಬೀಳಿಸಿದ್ದರಿಂದ ‌ಲೈನ್ ಗೆ ಹಾನಿಯಾಗಿದೆ ಎನ್ನಲಾಗಿದೆ.
Loading posts...

All posts loaded

No more posts

error: Content is protected !!