Ad Widget

ಹರಿಹರ ಪಳ್ಳತ್ತಡ್ಕ : ಫೆ.26 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ನಡೆಯಲಿದ್ದು, ಆ ಪ್ರಯುಕ್ತ ಮದ್ಯಾಹ್ನ ಏಕಾದಶ ರುದ್ರಾಭಿಷೇಕ ಹಾಗೂ ರಾತ್ರಿ 7:00 ಗಂಟೆಗೆ ಶಿವಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 6:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಹಳೆಕೋಟೆ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಬೋಳಾರ ಮಂಗಳೂರು ಇವರಿಂದ...

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಪ್ರಕರಣ – ಆರೋಪಿಗಳ ದೋಷಮುಕ್ತಿ

ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಮೀರಾ ಬಾಲಕೃಷ್ಣ ಅವರನ್ನು ದಿನಾಂಕ 02/03/2008 ರಂದು ಬೆಳಗ್ಗಿನ ಜಾವಾ ಯಾರೋ ಅಪರಚಿತರು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಮೀರಾ ಬಾಲಕೃಷ್ಣ ರವರ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿ ಮನೆಯಲ್ಲಿದ್ದ ಹಣ ವಡವೆ ದೋಚಲು ಪ್ರಯತ್ನಿಸಿದ್ದರು.‌ಆ ಸಮಯದಲ್ಲಿ ಮನೆ ಕೆಲಸದಾಕೆ ವಿಮಲ ಎಂಬುವರು...
Ad Widget

ಅರಂಬೂರು (ಆಲೆಟ್ಟಿ ಗ್ರಾಮ ಕುದ್ಕುಳಿ) ಮನೆತನದ ದೈವಸ್ಥಾನದಲ್ಲಿ ಶ್ರೀ ದೈವಗಳ ನಡಾವಳಿ ನೇಮೋತ್ಸವ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿರುವ ಅರಂಬೂರು ಮನೆತನದ ಕುದ್ಕುಳಿ ಎಂಬಲ್ಲಿ ಶ್ರೀ ವಿಷ್ಣುಮೂರ್ತಿ ಶ್ರೀ ಧರ್ಮದೈವ ಹಾಗೂ ಶ್ರೀ ಕುಕ್ಕೆತ್ತಿಬಲ್ಲು ಸಪರಿವಾರ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ರುದ್ರ ಚಾಮುಂಡಿ, ಕುಕ್ಕೆತ್ತಿ ಬಲ್ಲು ಹಾಗೂ ಉಪದೈವಗಳ ನಡಾವಳಿ ನೇಮೋತ್ಸವ ಫೆ.22 ಹಾಗೂ 23 ರಂದು ನಡೆಯಿತು. ಫೆ.22 ರಂದು ಬೆಳಿಗ್ಗೆ ಚಾವಡಿಯಲ್ಲಿ ಶ್ರೀ ವೆಂಕಟೇಶ ಶಾಸ್ತ್ರೀ...

ಸುಳ್ಯ ನಗರಕ್ಕೆ ಯೋಜನಾ ಪ್ರಾಧಿಕಾರ ರಚಿಸಿ ಸರಕಾರದ ಆದೇಶ

ಸುಳ್ಯ ಪಟ್ಟಣಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚಿಸಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. 2011 ರಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯಡಿಯಲ್ಲಿ ಸುಳ್ಯ ಪಟ್ಟಣ ಪಂಚಾಯತ್‌ ವ್ಯಾಪ್ತಿಯನ್ನು ಸ್ಥಳೀಯ ಯೋಜನಾ ಪ್ರದೇಶವನ್ನಾಗಿ ಘೋಷಿಸಿ ಸುಳ್ಯ ಪಟ್ಟಣ ಪಂಚಾಯತ್ ಯೋಜನಾ ಪ್ರಾಧಿಕಾರ ಎಂದು ಆದೇಶಿಸಲಾಗಿತ್ತು. ಅದರಂತೆ ಇದನ್ನು ಇದೀಗ ಪ್ರತ್ಯೇಕ ಯೋಜನಾ...

ಕಲ್ಲುಗುಂಡಿ : ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ

ಸುಳ್ಯ ರೈತ ಉತ್ಪಾದಕರ ಕಂಪನಿ ವತಿಯಿಂದ ಕಾಫಿ ಮಂಡಳಿ ಕೊಡಗು ತೋಟಗಾರಿಕೆ ಇಲಾಖೆ ಸುಳ್ಯ ಗ್ರಾಮ ಪಂಚಾಯತ್ ಸಂಪಾಜೆ ದ. ಕ .ಜಂಟಿ ಆಶ್ರಯದಲ್ಲಿ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಮಾಜಿ ಅಧ್ಯಕ್ಷರಾದ ಜಗದೀಶ್ ಕೆ....

ಸಂಚಾರ ಪೊಲೀಸ್‌ ಠಾಣೆಗೆ ಕಂಪ್ಯೂಟರ್ ಕೊಡುಗೆ -ಜಿ.ಎಲ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದನೆ

ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್‌ಾನ್‌ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ...

ತಂಗಮ್ಮ ಕಲ್ಲಾಜೆ ನಿಧನ

ನಾಲ್ಕೂರು ಗ್ರಾಮದ ಕಲ್ಲಾಜೆ ದಿ.ಕರಿಯಪ್ಪ ಇವರ ಪತ್ನಿ ತಂಗಮ್ಮ ಅಲ್ಪಕಾಲದ ಅಸೌಖ್ಯದಿಂದ ಫೆ. 22 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಶ್ರೀಮತಿ ಸೀತಮ್ಮ ಶೀರಾಜೆ, ಶ್ರೀಮತಿ ದುರ್ಗೆಶ್ವರಿ ಕಿರಿಭಾಗ ( ಕೊತ್ನಡ್ಕ) ಹಾಗೂ ಸೊಸೆಯಂದಿರು, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮಾರ್ನಿಂಗ್ ಕ್ರಿಕೆಟ್ ಕ್ಲಬ್ ನ(ಎಂ.ಸಿ.ಸಿ.) ನೂತನ ಪದಾಧಿಕಾರಿಗಳ ಆಯ್ಕೆ – ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ, ಕಾರ್ಯದರ್ಶಿಯಾಗಿ ಬಾಲಕುಮಾರ್, ಕೋಶಾಧಿಕಾರಿಯಾಗಿ ಅಸೀಫ್ ಸ್ಟಾರ್

ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲೆಕ್ಕ ಪತ್ರ ಮಂಡನೆ ಮಾಡಿ ನೂತನ ಯೋಜನೆಗಳ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ರಂಜಿತ್ ಕುಮಾರ್ ಪುನರಾಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಬಾಲಕುಮಾರನ್,...

ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆ‌ರ್ ತಯಾರಿಸಲು ಸರ್ಕಾರದ ಅನುಮೋದನೆ, ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ದೊರೆತ ಫಲ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತ್ರತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ...

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ, ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ...
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ