
ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ ಯವರು ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆಂಚಪ್ಪ ಗೌಡ, ಇನ್ನೋರ್ವ ಉಪಾಧ್ಯಕ್ಷರಾದ ಶ್ರೀನಿವಾಸ್, ನಿರ್ದೇಶಕರಾದ ಸಿ.ಜೆ.ಗಂಗಾಧರ್ ಹಾಗೂ ಇತರರು ಉಪಸ್ಥಿತರಿದ್ದರು.
ಡಾ.ಬಿ.ಸಿ.ಭಗವಾನ್ ರವರು ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಅಧೀನ ಸಂಸ್ಥೆಯಾಗಿರುವ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.