Ad Widget

ಬೆಂಗಳೂರು : ಗಾಯಕ ವಿಜಯಕುಮಾರ್ ಅವರಿಗೆ ಕರ್ನಾಟಕ ಕಲಾ ರತ್ನ ಪ್ರಶಸ್ತಿ ಪ್ರದಾನ

ಸ್ವರ ಸಂಗಮ ಕಲಾವೃಂದ (ರಿ) ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಬೆಂಗಳೂರು ಇಲ್ಲಿ ನಡೆದ ಸಂಗೀತ ಸಾಹಿತ್ಯ ಸಮಾಜಸೇವೆ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಚಲನಚಿತ್ರದ , ಹಾಗೂ ಕಲಾವಿದ ಶಶಿಧರ ಕೋಟೆ ನಟರಾದ ಅಡಿಗೋಡಿ ಶ್ರೀನಿವಾಸ, ಶ್ರೀಮತಿ ಭಾಗ್ಯಶ್ರೀ ಹಾಗೂ ಸಂಚಾಲಕರಾದ...

ಅರಂತೋಡು: ಅರಣ್ಯಕ್ಕೆ ಬೆಂಕಿ – ವರುಣನ ಕೃಪೆ ಹಾಗೂ ಸ್ಥಳೀಯರ ಸಹಕಾರದಿಂದ ನಂದಿದ ಬೆಂಕಿ

ಅರಂತೋಡು ಗ್ರಾಮದ ಕಲ್ಲುಗುಡ್ಡೆ, ಚೀಮಾಡು ಬಳಿ ಅರಣ್ಯಕ್ಕೆ ಬಿದ್ದ ಬೆಂಕಿಯನ್ನು ಊರವರು ಸಕಾಲದಲ್ಲಿ ಆಗಮಿಸಿ ಬೆಂಕಿ ನಂದಿಸಿದರು. ವರುಣ ದೇವರ ಕೃಪೆಯಿಂದ ಸಕಾಲ ಮಳೆಬಂದು ಸಂಪೂರ್ಣ ಬೆಂಕಿ ನಂದಿಹೋಯಿತು.
Ad Widget

ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಸಮಾರೋಪ

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ ನಾರ್ಕೋಡು ಇಲ್ಲಿ ಮಾರ್ಚ್ ೦8ರಿಂದ 1೦ರವರೆಗೆ ನಡೆದಿದ್ದು, ಇದರ ಸಮಾರೋಪ ಸಮಾರಂಭವು ಮಾ-1೦ರಂದು ಶಾಲಾ ರಂಗಮಂದಿರದಲ್ಲಿ ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್...

ಸುಳ್ಯದಲ್ಲಿ ತಂಪೆರೆದ ಮಳೆ

https://youtu.be/brDpSjsSTqg?si=IlprEAySjK_ioyuA ಸುಳ್ಯದಲ್ಲಿ ಇಂದು ಸಂಜೆ 3.30 ರ ವೇಳೆಗೆ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದ ಬೆಂದು ಹೋಗಿದ್ದ ಪೇಟೆಯಲ್ಲಿ ತಂಪೆರೆದಿದೆ. ಅರಂತೋಡು ಭಾಗದಲ್ಲಿ ಹೆಚ್ಚಿನ ಮಳೆ ಸುರಿದಿದೆ.

ಆರ್ಥಿಕ ವರ್ಷ ಮುಕ್ತಾಯದ ಹಿನ್ನೆಲೆ – ಬಾಕಿ ಬಿಲ್ ಪಾವತಿಗೆ ಮೆಸ್ಕಾಂ ಸೂಚನೆ

ಆರ್ಥಿಕ ವರ್ಷ ಮಕ್ತಾಯದ (ಮಾರ್ಚ್) ಹಿನ್ನೆಲೆಯಲ್ಲಿ ಗ್ರಾಹಕರು ತಮ್ಮ ಸ್ಥಾವರಗಳ ಬಾಕಿ ಇರುವ ಪೂರ್ಣ ಪ್ರಮಾಣದ ವಿದ್ಯುತ್ ಬಿಲ್ಲನ್ನು ಪಾವತಿ ಮಾಡುವಂತೆ ಮನವಿ ಮಾಡಿದ್ದು, ವಿದ್ಯುತ್ ಬಿಲ್ ಬಾಕಿ ಇರಿಸಿದ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಚಿಲ್ತಡ್ಕ ಜತ್ತಪ್ಪ ಮಾಸ್ಟರ್ ರಿಗೆ ತಾರಸಿ ಕೃಷಿಕ ಡಾ| ಕೃಷ್ಣಪ್ಪಗೌಡ ಪಡ್ಡಂಬೈಲ್ ಅವರಿಂದ ಸನ್ಮಾನ

ಗುತ್ತಿಗಾ‌ರು ಗ್ರಾಮದ ಚಿತ್ತಡ್ಕ ಜತ್ತಪ್ಪ ಮಾಸ್ಟ‌ರ್ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇತ್ತೀಚೆಗೆ ಅವರ ಚಿಲ್ತಡ್ಕ ನಿವಾಸದಲ್ಲಿ ನಡೆಯಿತು. ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕಾಗಿ ತೊಡಗಿಸಿಕೊಂಡು ಬಂದಿರುವ ಹಿರಿಯ ನಾಗರಿಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಂಗಳೂರಿನ ಮರೋಳಿ ಬಳಿಯ ನಿವಾಸಿ ತಾರಸಿ ಕೃಷಿಕ ಡಾ| ಕೃಷ್ಣಪ್ಪಗೌಡ ಪಡ್ಡಂಬೈಲ್ ರವರು ಕಳೆದ ಹಲವಾರು ವರ್ಷಗಳಿಂದ ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದಾರೆ. ಈ...

ಮಾ.14 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ನೂತನ ಸಮಿತಿಗೆ ಹಸ್ತಾಂತರ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತವನ್ನು ನೂತನ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮಾ.14 ರಂದು ನಡೆಯಲಿದೆ. ಸರಕಾರ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿದ್ದು ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆ ಆಯ್ಕೆಗೊಂಡಿದ್ದು ಅವರಿಗೆ ಅಧಿಕಾರ ಹಸ್ತಾಂತರ ನಡೆಯಲಿದೆ. ಹಾಗೂ ಅಂದೇ ವಾರ್ಷಿಕ ಜಾತ್ರೋತ್ಸವ ಸಮಿತಿಯ ರಚನೆಯ ಬಗ್ಗೆ ವಿಶೇಷ ಸಮಿತಿ ಸಭೆಯನ್ನು ಕರೆಯಲಾಗಿದ್ದು...

ಲ್ಯಾಂಪ್ ಸೊಸೈಟಿ ಆಡಳಿತ ಬಿಜೆಪಿ ತೆಕ್ಕೆಗೆ – ಯಶಸ್ವಿಯಾದ ಆಪರೇಶನ್ ಕಮಲ – ಅಧ್ಯಕ್ಷರಾಗಿ ನೀಲಮ್ಮಕೆ. ಕಣಿಪ್ಪಿಲ, ಉಪಾಧ್ಯಕ್ಷರಾಗಿ ಪುಂಡರಿಕ ಕೆ. ಕಾಪುಮಲೆ

ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬಲ ಪಡೆದ ಬಳಿಕ ಪ್ರತಿಷ್ಠೆಯ ಕಣವಾಗಿದ್ದ ಲ್ಯಾಂಪ್ ಸೊಸೈಟಿಯಲ್ಲಿ ಆಪರೇಶನ್ ಕಮಲ ನಡೆದು ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಧ್ಯಕ್ಷರಾಗಿ ನೀಲಮ್ಮಕೆ. ಕಣಿಪ್ಪಿಲ, ಉಪಾಧ್ಯಕ್ಷರಾಗಿ ಪುಂಡರಿಕ ಕೆ. ಕಾಪುಮಲೆ ಅಲೆಟ್ಟಿ ಇವರು ಆಯ್ಕೆಯಾಗಿದ್ದಾರೆ.ಅಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ನೀಲಮ್ಮ ಹಾಗೂ ಕಾಂಗ್ರೆಸ್ ನಿಂದ ಮಾಧವ ದೇವರಗದ್ದೆ, ಉಪಾಧ್ಯಕ್ಷತೆಗೆ ಬಿಜೆಪಿಯಿಂದ ಪುಂಡರಿಕ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆಯ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಪ್ರಮೀಳಾ.ಟಿ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ಕಾರ್ಯದರ್ಶಿಯಾದ ಪೃಥ್ವಿ ಕುಮಾರ್.ಟಿ ರವರು ನಿಯೋಜನೆ ಮೇಲೆ ಶಿಕ್ಷಣ ಇಲಾಖೆಯ ಆಯುಕ್ತಾಲಯ ಬೆಂಗಳೂರು ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ತೆರವಾದ ಸಂಘದ ಕಾರ್ಯದರ್ಶಿ ಹುದ್ದೆಗೆ ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ಪ್ರಸ್ತುತ ಉಪಾಧ್ಯಕ್ಷರಾಗಿರುವ ಶ್ರೀಮತಿ ಪ್ರಮೀಳಾ.ಟಿ ರವರನ್ನು 2024-29 ನೇ ಸಾಲಿನ ಅವಧಿಗೆ ಸಂಘದ ನೂತನ...

ಕನಕಮಜಲು : ಅಂಗಡಿ ಅಂಗಡಿಯಿಂದ ಕಳ್ಳತನಕ್ಕೆ ಯತ್ನ – ಇಬ್ಬರು ಕಳ್ಳರನ್ನು ಸೆರೆ ಹಿಡಿದ ಊರವರು

ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು...
Loading posts...

All posts loaded

No more posts

error: Content is protected !!