
ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತವನ್ನು ನೂತನ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮಾ.14 ರಂದು ನಡೆಯಲಿದೆ. ಸರಕಾರ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿದ್ದು ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆ ಆಯ್ಕೆಗೊಂಡಿದ್ದು ಅವರಿಗೆ ಅಧಿಕಾರ ಹಸ್ತಾಂತರ ನಡೆಯಲಿದೆ. ಹಾಗೂ ಅಂದೇ ವಾರ್ಷಿಕ ಜಾತ್ರೋತ್ಸವ ಸಮಿತಿಯ ರಚನೆಯ ಬಗ್ಗೆ ವಿಶೇಷ ಸಮಿತಿ ಸಭೆಯನ್ನು ಕರೆಯಲಾಗಿದ್ದು ಊರ ಹಾಗೂ ಪರ ಊರಿನ ಎಲ್ಲ ಭಕ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವಂತೆ ವ್ಯವಸ್ಥಾಪನ ಸಮಿತಿಯವರು ವಿನಂತಿಸಿದ್ದಾರೆ.