
ಇತ್ತೀಚೆಗೆ ಪುತ್ತೂರು ಉಪ ವಿಭಾಗದ ಸಹಾಯಕ ಕಮಿಶನರ್ ಆಗಿ ಅಧಿಕಾರ ಸ್ವೀಕರಿಸಿದ ಸ್ಟೆಲ್ಲ. ವಿ. ಯವರನ್ನು ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಎಂ
ಮುಸ್ತಫ ಪುತ್ತೂರು ಎಸಿ ಕಚೇರಿ ಯಲ್ಲಿ ಭೇಟಿಯಾದರು.
ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರಿಗೆ ನಿವೇಶನ ಮಂಜೂರಾಗದೆ ಗೃಹ ಭಾಗ್ಯ ಯೋಜನೆ ವಿಳಂಬವಾಗುತ್ತಿದ್ದು ಎಸಿ ಕಚೇರಿಯಲ್ಲಿರುವ ಪ್ರಸ್ತಾವನೆಗೆ ಮಂಜೂರಾತಿ ನೀಡಿ ಜಮೀನು ಸ್ವಾಧೀನತೆ ನೀಡುವಂತೆ ವಿನಂತಿಸಿದರು. ಕೂಡಲೇ ಮಂಜೂರಾತಿಗೆ ಕ್ರಮ ಕೈಗೊಳ್ಳುವುದಾಗಿ ಈ ವೇಳೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ಉಪಸ್ಥಿತರಿದ್ದರು.
