- Tuesday
- April 1st, 2025

ಕಡಬ ತಾಲೂಕು ಬಳ್ಪ ಗ್ರಾಮದ ಜೋಗಿಮನೆ ಚೆನ್ನಕೇಶವ ಜೋಗಿ ಮಾ.11 ರಂದು ಮನೆಯಿಂದ ತೆರಳಿದವರು ಇದುವರೆಗೆ ಪುನಃ ಹಿಂತಿರುಗಿ ಬಾರದೇ ಇದ್ದುದರಿಂದ ಮನೆಯವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರಿಗೆ 61 ವಯಸ್ಸಾಗಿತ್ತು. ದಿನಾಂಕ 11-03-2025 ಮಂಗಳವಾರದಂದು ಮನೆಯಿಂದ ಕೊಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೋದವರು ಇಲ್ಲಿತನಕ ಮನೆಗೆ ಮರಳಿರುವುದಿಲ್ಲ. ಇವರ ಮೊಬೈಲ್...

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಜ ಚಂದ್ರಶೇಖರ ಎಂಬವರು ಮಾವಿನಕಾಯಿ ಜೊಯ್ಯುವ ವೇಳೆ ಮರದಿಂದ ಬಿದ್ದು ಗಂಬೀರ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಬಡತನದಲ್ಲಿರುವ ಇವರ ಕುಟುಂಬಕ್ಕೆ ಅಘಾತವನ್ನುಂಟು ಮಾಡಿದ್ದು ಚಿಕಿತ್ಸಾ ವೆಚ್ಚ ಭರಿಸಲು ಪರದಾಡುವಂತಾಗಿದೆ. ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಜಳನ್ನು ಹೊಂದಿರುವ ಈ ಬಡ ಕುಟುಂಬಕ್ಕೆ ಸಾರ್ವಜನಿಕ ಸಹೃದಯಿಗಳು...

ಸದೃಢ ಭಾರತ ಕಟ್ಟುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಪೂಜಾ ಎಸ್ ನಾಯಕ ಹೇಳಿದರು. ಅವರು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯ ದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ 20 ಮಾರ್ಚ್ 2025 ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ a ಅವರ ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ...

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಸದಸ್ಯರ ನೇಮಕವಾಗಿದೆ ಎಂದು ಉಸ್ತುವಾರಿ ಸಚಿವರು ಕಳುಹಿಸಿದ್ದು ಎನ್ನಲಾದ ಪಟ್ಟಿಯೊಂದು ವೈರಲ್ ಆಗುತ್ತಿದ್ದು, ಈ ಪಟ್ಟಿಯಲ್ಲಿ ಕಡಬ ತಾಲೂಕಿನ ಅಜಿತ್ ಕುಮಾರ್ ಪೂಜಾರಿ ವಾಲೇರಿ ಗೋಳಿತೊಟ್ಟು ಎಂಬ ಹೆಸರಿದೆ. ಇದರ ಬಗ್ಗೆ ಕಡಬದ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು ಬರಹವೊಂದು ವೈರಲ್ ಆಗುತ್ತಿದೆ. ಈ ಬಗ್ಗೆ...