
ಸದೃಢ ಭಾರತ ಕಟ್ಟುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಪೂಜಾ ಎಸ್ ನಾಯಕ ಹೇಳಿದರು. ಅವರು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯ ದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಹಿಳಾ ರಕ್ಷಣೆ, ಸೈಬರ್ ಅಪರಾಧಗಳು ಎಂಬ ವಿಷಯದ ಬಗ್ಗೆ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಅಧ್ಯಕ್ಷೆ ಪೂರ್ಣಿಮಾ ಪಡ್ಪು ಅಧ್ಯಕ್ಷತೆ ವಹಿಸಿದ್ದರು, ಶ್ರೀ ರಕ್ತೇಶ್ವರಿ ಮಹಿಳಾ ಮಂಡಳಿ ಕೊಳಂಬಳ ಬೆಳ್ಳಾರೆ ಅಧ್ಯಕ್ಷೆ ಸುಲೋಚನಾ ವಿಶ್ವನಾಥ ಕೆ ಕಾರ್ಯಕ್ರಮ ಉದ್ಘಾಟಿಸಿದರು. ಭಾವೈಕ್ಯ ಮಹಿಳಾ ಮಂಡಲ ಪೆರುವಾಜೆ ಅಧ್ಯಕ್ಷೆ ಅನಸೂಯ ಬಿ ಎ, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಅಧ್ಯಕ್ಷೆ ಚಂಚಲಾಕ್ಷಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು. ಸ್ನೇಹಶ್ರೀ ಮಹಿಳಾ ಮಂಡಲ ಜತೆಕಾರ್ಯದರ್ಶಿ ಶ್ರೀಮತಿ ಶೋಭನಾ ಪನ್ನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮಹಿಳಾ ಸ್ನೇಹಶ್ರೀ ಮಹಿಳಾ ಮಂಡಲದ ಕೋಶಾಧಿಕಾರಿ ಶ್ರೀಮತಿ ಕುಸುಮಾ ಕುರುoಬುಡೇಳು ಸ್ವಾಗತಿಸಿ, ಸ್ನೇಹಶ್ರೀ ಮಹಿಳಾ ಮಂಡಲ ಉಪಾಧ್ಯಕ್ಷೆ ಪೂರ್ಣಿಮಾ ನೆಟ್ಟಾರು ವಂದಿಸಿದರು. ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯೆ ಭಾರತಿ ಕೆ ಕಾರ್ಯಕ್ರಮ ನಿರೂಪಿಸಿದರು.