
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ತಳೂರು ಹಾಗೂ ಕಂದ್ರಪ್ಪಾಡಿಯಿಂದ ಶ್ರೀ ರಾಜ್ಯದೈವ ಮತ್ತು ಪುರುಷ ದೈವದ ಭಂಡಾರ ಶ್ರೀಕ್ಷೇತ್ರಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ, ಕೇಶವ ಹೊಸೊಳಿಕೆ, ಸಮಿತಿಯ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
ಮಾ.24 ರಂದು ಸಂಜೆ ಭಜನೆ ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ರಾತ್ರಿ ದಿ| ಕೀರ್ತಿಶೇಷ ದೇವಕಿ ಸ್ಮರಣಾರ್ಥ ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಸಾಸ್ತಾನ ಉಡುಪಿ ಇವರಿಂದ “ಸತ್ಯದ ಸ್ವಾಮಿ ಕೊರಗಜ್ಜ” ಯಕ್ಷಗಾನ ನಡೆಯಲಿದೆ. ಮಾ. 25 ಬೆಳಿಗ್ಗೆ ರಾಜ್ಯ ದೈವ ಮತ್ತು ಪುರುಷ ದೈವಗಳ ನೇಮೋತ್ಸವ ನಡೆಯಲಿದೆ.
