- Sunday
- April 20th, 2025

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತವನ್ನು ನೂತನ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮಾ.14 ರಂದು ನಡೆಯಲಿದೆ. ಸರಕಾರ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿದ್ದು ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆ ಆಯ್ಕೆಗೊಂಡಿದ್ದು ಅವರಿಗೆ ಅಧಿಕಾರ ಹಸ್ತಾಂತರ ನಡೆಯಲಿದೆ. ಹಾಗೂ ಅಂದೇ ವಾರ್ಷಿಕ ಜಾತ್ರೋತ್ಸವ ಸಮಿತಿಯ ರಚನೆಯ ಬಗ್ಗೆ ವಿಶೇಷ ಸಮಿತಿ ಸಭೆಯನ್ನು ಕರೆಯಲಾಗಿದ್ದು...

ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬಲ ಪಡೆದ ಬಳಿಕ ಪ್ರತಿಷ್ಠೆಯ ಕಣವಾಗಿದ್ದ ಲ್ಯಾಂಪ್ ಸೊಸೈಟಿಯಲ್ಲಿ ಆಪರೇಶನ್ ಕಮಲ ನಡೆದು ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅಧ್ಯಕ್ಷರಾಗಿ ನೀಲಮ್ಮಕೆ. ಕಣಿಪ್ಪಿಲ, ಉಪಾಧ್ಯಕ್ಷರಾಗಿ ಪುಂಡರಿಕ ಕೆ. ಕಾಪುಮಲೆ ಅಲೆಟ್ಟಿ ಇವರು ಆಯ್ಕೆಯಾಗಿದ್ದಾರೆ.ಅಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ನೀಲಮ್ಮ ಹಾಗೂ ಕಾಂಗ್ರೆಸ್ ನಿಂದ ಮಾಧವ ದೇವರಗದ್ದೆ, ಉಪಾಧ್ಯಕ್ಷತೆಗೆ ಬಿಜೆಪಿಯಿಂದ ಪುಂಡರಿಕ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ಕಾರ್ಯದರ್ಶಿಯಾದ ಪೃಥ್ವಿ ಕುಮಾರ್.ಟಿ ರವರು ನಿಯೋಜನೆ ಮೇಲೆ ಶಿಕ್ಷಣ ಇಲಾಖೆಯ ಆಯುಕ್ತಾಲಯ ಬೆಂಗಳೂರು ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ತೆರವಾದ ಸಂಘದ ಕಾರ್ಯದರ್ಶಿ ಹುದ್ದೆಗೆ ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ಪ್ರಸ್ತುತ ಉಪಾಧ್ಯಕ್ಷರಾಗಿರುವ ಶ್ರೀಮತಿ ಪ್ರಮೀಳಾ.ಟಿ ರವರನ್ನು 2024-29 ನೇ ಸಾಲಿನ ಅವಧಿಗೆ ಸಂಘದ ನೂತನ...

ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ ಮಾಲಕತ್ವದ ಶ್ರೀ ಗಣೇಶ್ ಸ್ಟೋರ್ ನ ಒಳಗೆ ರಾತ್ರಿ ಸುಮಾರು 3.30 ಕ್ಕೆ ಜೋರು ಶಬ್ದ ಕೇಳುತ್ತಿತ್ತೆಂದೂ, ಇದು ಸೀತಾರಾಮ ಗೌಡರ ಮಗನಿಗೆ ಕೇಳಿ ಅವರು...

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್(ರಿ.) ವತಿಯಿಂದ ಕರ್ನಾಟಕ ರಾಜ್ಯದಾದ್ಯಂತ ಹೊರಟ “ನಂದಿ ರಥಯಾತ್ರೆ” ಯು ಮಾ.14 ಶುಕ್ರವಾರದಂದು ಸಂಜೆ 4:30 ಕ್ಕೆ ಸುಬ್ರಹ್ಮಣ್ಯಕ್ಕೆ ಪುರಪ್ರವೇಶ ಮಾಡಲಿದ್ದು, ಸಂಜೆ 4:45 ರಿಂದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಇವರಿಂದ ಕಾಶಿಕಟ್ಟೆ...

ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ರಸ್ತೆ ಬದಿಯಲ್ಲಿ ಹುಲ್ಲು, ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಸಂಚರಿಸಲು ಕಷ್ಟಕರವಾಗುತ್ತಿದ್ದು, ಮಾ.09 ರಂದು ಸ್ಥಳೀಯರು ಶ್ರಮದಾನದ ಮೂಲಕ ರಸ್ತೆ ಬದಿಯ ಕಾಡು ಹೆರೆದು ಸ್ವಚ್ಛಗೊಳಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

ಸುಬ್ರಹ್ಮಣ್ಯ : ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಎರಡು ದಿನಗಳ ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಂಡಿರುವರು.ದಕ್ಷಿಣ ಭಾರತದ ಸುಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅನೇಕ ಬಾಲಿವುಡ್, ಹಾಲಿವುಡ್ ನಟ ನಟಿಯರು ಆಗಮಿಸುತ್ತಿದ್ದು, ಸಂತಾನ ಭಾಗ್ಯವಿಲ್ಲದವರು, ಚರ್ಮರೋಗ ವ್ಯಾಧಿ, ಆರೋಗ್ಯ ವೃದ್ಧಿಗಾಗಿ ಸೇವೆಯನ್ನು ಸಲ್ಲಿಸುವಂಥದ್ದು ಸರ್ವೇಸಾಮಾನ್ಯವಾಗಿದೆ.ಅದೇ ರೀತಿ ಕತ್ರಿನಾ ಕೈಫ್...

ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ 10ಮಾರ್ಚ್ 2025 ರಂದು ಪುತ್ತೂರು ಸೆಷನ್ಸ್ ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ...

ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರೊಂದಕ್ಕೆ ಸ್ಕೂಟಿ ಢಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯದಿಂದ ಹರಿಹರಪಲ್ಲತ್ತಡ್ಕದ ಕಡೆಗೆ ಚಲಿಸುತ್ತಿದ್ದ ಕಾರಿಗೆ (KA21 Z 4868) ಪೈಚಾರು ಕಡೆಯಿಂದ ಬರುತ್ತಿದ್ದ ಸ್ಕೂಟಿ (KA21 EA 6591) ಡಿಕ್ಕಿಯಾಯಿತು. ಢಿಕ್ಕಿಯಾದ ರಭಸಕ್ಕೆ ಸವಾರ ಕಾರಿನ ಮೇಲೆ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ರಾಜಿಯಲ್ಲಿ ಇತ್ಯರ್ಥವಾಯಿತೆಂದು...

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My...

All posts loaded
No more posts