
ಕಲ್ಮಕಾರು ಗ್ರಾಮದ ತಿರುಮಲೇಶ್ವರ ದಬ್ಬಡ್ಕ ಎಂಬುವವರು ವಿಷ ಸೇವಿಸಿ ಮೃತಪಟ್ಟ ಘಟನೆ ಏ.10 ರಂದು ನಡೆದಿದೆ ಎಂದು ತಿಳಿದುಬಂದಿದೆ.
ಕೃಷಿಗಾಗಿ ತಂದಿದ್ದ ಕ್ರಿಮಿನಾಶಕವನ್ನು ಎರಡು ದಿನಗಳ ಹಿಂದೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಿರುಮಲೇಶ್ವರ ಅವರನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ನಿಧನರಾದರು. ಮೃತರಿಗೆ 52 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಶಶಿಕಲಾ, ಪುತ್ರಿ ಸುಶ್ಮಿತಾ, ಪುತ್ರ ಮನ್ವಿತ್ ಹಾಗೂ ಕುಟುಂಬಸ್ಥರು-ಬಂಧು ಮಿತ್ರರನ್ನು ಅಗಲಿದ್ದಾರೆ.
