- Tuesday
- April 29th, 2025

ಭಾರತ ದೇಶಕ್ಕೆ ಸಂವಿಧಾನ ನೀಡಿ ದೇಶದ ಸಮಗ್ರ ಜನರ ಏಳಿಗೆಗೆ ಕಾರಣರಾದ ಡಾ ಭೀಮರಾವ್ ಅಂಬೇಡ್ಕರ್ ಸಮಾಜದ ಎಲ್ಲಾ ವರ್ಗದ ಜನರಿಗೆ ಪೂಜನೀಯರು. ಅವರನ್ನು ಕೆಲವೊಂದು ಸಮಾಜಕ್ಕೆ ಸೀಮಿತಗೊಳಿಸುವುದು ದುರಾದೃಷ್ಟ ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯಬೇಕು. ಅಂಬೇಡ್ಕರ್ ಇಲ್ಲದ ಸಮಾಜವನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಇತಿಹಾಸ...

135ನೇ ಜಯಂತಿ ನೂತನ ಅಂಬೇಡ್ಕರ್ ಭವನದಲ್ಲಿ ಆಗುವಂತಾಗಲಿ - ಶಾಸಕಿ ಮುರುಳ್ಯ. ಸುಳ್ಯ : ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಸೋಮವಾರ ಬಂಟರ ಭವನದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಭೆಯ ಅಧ್ಯಕ್ಷತೆಯನ್ನು...

ಗುತ್ತಿಗಾರಿನ ಕಡ್ತಲ್ ಕಜೆ ಸಮೀಪ ಓವರ್ ಟೇಕ್ ಮಾಡಿ ಬರುತ್ತಿರುವ ಬಸ್ ಗೆ ಸೈಡ್ ಕೊಡುವ ಭರದಲ್ಲಿ ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ಐನೆಕಿದು ಕಡೆಯ ಬೊಲೆರೋ ಸುಳ್ಯ ಕಡೆಯಿಂದ ಗುತ್ತಿಗಾರು ಕಡೆಗೆ ಬರುತ್ತಿತ್ತು. ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇಂದು ಸಂಜೆ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ತಾಲೂಕಿನ ವಿವಿಧೆಡೆ ಮರ ಬಿದ್ದು ಹಾನಿಯಾಗಿದೆ. ಉಬರಡ್ಕ ಕಂದಡ್ಕ ರಸ್ತೆಯಲ್ಲಿ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಸ್ಥಳೀಯರ ಸಹಕಾರದಿಂದ ಮೆಸ್ಕಾಂ ಸಿಬ್ಬಂದಿಗಳು ತೆರವು ಕಾರ್ಯ ಆರಂಭಿಸಿದ್ದಾರೆ.

ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಡಾ| ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ,, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ...

ಅಮರ ಸಂಘಟನಾ ಸಮಿತಿ (ರಿ.)ಸುಳ್ಯಇದರ ಆಶ್ರಯದಲ್ಲಿಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ಸಹಕಾರದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂಅಪಘಾತ ವಿಮೆ ನೊಂದಣಿ ಶಿಬಿರ ಏಪ್ರಿಲ್ 13 ರಂದು ನಾರ್ಣಕಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕುಸುಮಾಧರ...