
ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಎ.26 ರಂದು ನಡೆಯಿತು. ಬೆಳಿಗ್ಗೆ 108 ತೆಂಗಿನಕಾಯಿ ಗಣಹೋಮ,ಮಧ್ಯಾಹ್ನ ನವಕ,ಪವಮಾನಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು.
ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊತ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ರಾತ್ರಿ ಶ್ರೀ ದೇವರಿಗೆ ರಂಗಪೂಜೆ,ಪ್ರಸಾದ ವಿತರಣೆ ನಡೆಯಿತು.