Ad Widget

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಭೆ – ಸಂಘಟನೆ ಬಲಪಡಿಸಲು ತೀರ್ಮಾನ

ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಸಭೆ ಎ. 5ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶುಭಾಶ್ಚಂದ್ರ ಕೊಳ್ನಾಡು ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯನ್ನು...

ಏ.11 ರಿಂದ 15: ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಿಂದ ಸಂಸ್ಕಾರ ವಾಹಿನಿ ಶಿಬಿರ

ಸುಳ್ಯ: ಹಳೆಗೇಟು ವಿದ್ಯಾನಗರದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ 'ಸಂಸ್ಕಾರ ವಾಹಿನಿ' ಮಕ್ಕಳ ಬೇಸಿಗೆ ಶಿಬಿರ ಎ.11ರಿಂದ 15ರ ತನಕ ನಡೆಯಲಿದೆ ಎಂದು ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಂಚಾಲಕಿ ಶ್ರೀದೇವಿ ನಾಗರಾಜ್ ಭಟ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ...
Ad Widget

ಡಾ. ಹರಿಕೃಷ್ಣ ರೈಯವರಿಗೆ ಅಮೆರಿಕಾದಲ್ಲಿ ನಡೆದ “ಜಿ. ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ”ಯಲ್ಲಿ ಪೀಪಲ್ ಚಾಯ್ಸ್ ಅವಾರ್ಡ್ 2025

ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ " ಎಂ.ಆರ್.ಐ ಸ್ಕ್ಯಾನರ್...

ಲಿಂಗಪ್ಪ ಗೌಡ ಮುಂಡಾಜೆ ನಿಧನ

ಹರಿಹರ ಪಳ್ಳತ್ತಡ್ಕ ಗ್ರಾಮದ ಮುಂಡಾಜೆ ಲಿಂಗಪ್ಪ ಗೌಡ ರವರು ಏ.05 ರಂದು ರಾತ್ರಿ 10:00 ಗಂಟೆ ಸುಮಾರಿಗೆ ನಿಧನರಾದರು.ಮೃತರಿಗೆ 95 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಭಾಗೀರಥಿ, ಪುತ್ರ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಪೃಥ್ವಿಚಂದ್ರ ಮುಂಡಾಜೆ, ಪುತ್ರಿ ಶ್ರೀಮತಿ ಪ್ರತಿಮಾ ವಾಸುದೇವ ಗಬ್ಲಡ್ಕ, ಸೊಸೆ ಚಂದ್ರಲತಾ ದಿವಾಕರ ಮುಂಡಾಜೆ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು-ಮಿತ್ರರನ್ನು...

ಜಳಕದಹೊಳೆ ಸೇತುವೆ ದುರಸ್ತಿ ಹಿನ್ನೆಲೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಮಳೆಗೆ ಹಾನಿ – ಸಂಪರ್ಕ ಕಡಿತ

ಪಂಜ ಜಳಕದಹೊಳೆ ಬಳ್ಳಕ್ಕ ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಜಳಕದಹೊಳೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಹೊಳೆಗೆ ಮಣ್ಣು ಹಾಕಿ ಬದಲಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಇದೀಗ ಮಳೆಯಿಂದ ತಾತ್ಕಾಲಿಕ ರಸ್ತೆ ಕೊಚ್ಚಿ ಹೋಗಿದ್ದು ಸೇತುವೆ ಮೇಲೆ ದ್ವಿಚಕ್ರ ವಾಹನ ಹೊರತು ಪಡಿಸಿ ಇತರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಡಾ. ಹರಿಕೃಷ್ಣ ರೈಯವರಿಗೆ ಅಮೆರಿಕಾದಲ್ಲಿ ನಡೆದ “ಜಿ. ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ”ಯಲ್ಲಿ ಪೀಪಲ್ ಚಾಯ್ಸ್ ಅವಾರ್ಡ್ 2025

ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ " ಎಂ.ಆರ್.ಐ ಸ್ಕ್ಯಾನರ್...

ಮೂಲೆಮಜಲು ದೋಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ಸಂಪನ್ನ

ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಕಾಲಾವಧಿ ನಡೆಯುವ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ನಡೆಯಿತು. ಏ.4ರಂದು ಬೆಳಿಗ್ಗೆ ಕೊಡಮಂತಾಯ ದೈವಕ್ಕೆ ನೇಮ, ಬ್ರಹ್ಮರ ಉತ್ಸವ ನಡೆಯಿತು.ಸಂಜೆ ಬೈದರ್ಕಳ ಭಂಡಾರ ತೆಗೆದು ಶ್ರೀ ರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಬಳಿಕ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಬ್ರಹ್ಮ ಬೈದರ್ಕಳ ಗರಡಿ ಇಳಿಯುವುದು, ಮಾನಿ ಬಾಲೆ...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.06ರಂದು ಸಂಜೆ 3.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.06ರಂದು ಆದಿತ್ಯವಾರ ಸಂಜೆ 3.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಕಾಂಗ್ರೆಸ್ ನಾಯಕರ ಒತ್ತಡದಿಂದ ರದ್ದು – ವೆಂಕಟ್ ವಳಲಂಬೆ ಖಂಡನೆ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ನಾಯಕರ ಒತ್ತಡದಿಂದ ರದ್ದುಗೊಳಿಸಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಖಂಡಿಸಿದ್ದಾರೆ. ಆರೋಗ್ಯ ಜನಸಾಮಾನ್ಯರ ಅಗತ್ಯತೆಯಲ್ಲೊಂದು ಈ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನೆಯಾಗಬೇಕಿತ್ತು ಆದರೆ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಕಾಂಗ್ರೆಸ್ ನ ಗ್ಯಾರಂಟಿ ಅನುಷ್ಠಾನ...

ರಶ್ಮಿ ನೆಕ್ಕಿಲರಿಗೆ 3ನೇ ರ‌್ಯಾಂಕ್

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕುಮಾರಿ ರಶ್ಮಿರವರು ಇತಿಹಾಸ ವಿಭಾಗದಲ್ಲಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯಕ್ಕೆ 3ನೇ ರ‌್ಯಾಂಕ್  ಪಡೆದಿದ್ದಾರೆ. ಇವರು ಕಲ್ಲುಗುಂಡಿ ದಂಡೆಕಜೆಯ ನೆಕ್ಕಿಲ ಶ್ರೀ ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ನಳಿನಿ ದಂಪತಿಗಳ ದ್ವಿತೀಯ ಪುತ್ರಿಯಾಗಿದ್ದು, 1ನೇ ತರಗತಿಯಿಂದ 7ನೇ...
Loading posts...

All posts loaded

No more posts

error: Content is protected !!