
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಯಲ್ಲಿ 6 ಮೇ 2025 ರಂದು ಪ್ರಾರಂಭ ಗೊಂಡು ದಿನಾಂಕ 12 ಮೇ 2025 ರಂದು ಸಮಾರೋಪ ಗೊಂಡಿತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್ ರೈ ಅಧ್ಯಕ್ಷತೆ ವಹಿಸಿದ್ದರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಮುಖ್ಯ್ಯೊಪಾಧ್ಯಾಯರಾದ ಮಾಯಿಲಪ್ಪ ಜಿ, ಸಹ ಶಿಕ್ಷಕ ದಿನೇಶ್ ಮಾಚಾರ್ , ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ ವಿ, ಗ್ರಂಥಪಾಲಕಿ ಶಶಿಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಕು. ಶ್ರೇಯಾ ಮತ್ತು ಕು.ಧೃತಿ ಪ್ರಾರ್ಥಿಸಿ, ಕು. ಪ್ರತೀಕ್ಷಾ ಸ್ವಾಗತಿಸಿ, ಕು. ಶಿವಾನಿ ವಂದಿಸಿದರು. ಕು. ತನುಶ್ರೀ ಕಾರ್ಯಕ್ರಮ ನಿರೂಪಿಸಿದರು.