- Saturday
- May 17th, 2025

ಸುಬ್ರಹ್ಮಣ್ಯ ಮೇ 16: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಲೀಜನ್ ನ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್.ಎಚ್.ಎಲ್ ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಸೀನಿಯರ್ ಗೋಪಾಲ್ ಎಣ್ಣೆಮಜಲ್, ಕೋಶಾಧಿಕಾರಿಯಾಗಿ ಸೀನಿಯರ್ ಮೋನಪ್ಪ.ಡಿ, ನಿಕಟ ಪೂರ್ವ ಅಧ್ಯಕ್ಷರಾಗಿ ಸೀನಿಯರ್ ರವಿ ಕಕ್ಕೆ ಪದವು, ಉಪಾಧ್ಯಕ್ಷರುಗಳಾಗಿ ಸೀನಿಯರ್ ಪ್ರಕಾಶ್ ಕಟ್ಟೆಮನೆ, ಹಾಗೂ ಸೀನಿಯರ್ ಅಶೋಕ್ ಮೂಲೆ...

ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ ಚಾಳೆಪ್ಪಾಡಿ ಎಂಬಲ್ಲಿ ನೂತನವಾಗಿ ಪುನರ್ ನಿರ್ಮಾಣಗೊಂಡ ನಾಗನ ಕಟ್ಟೆಯ ಪ್ರತಿಷ್ಠಾ ಕಾರ್ಯಕ್ರಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.16 ರಂದು ನೆರವೇರಿತು.ಮೇ.15 ಸಂಜೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಪ್ರಾಸಾದ ಶುದ್ದಿ, ಅಘೋರ ಹೋಮ, ಬಾದಾಕರ್ಷಣೆ, ಉಚ್ಚಾಟನೆ, ವಾಸ್ತುಹೋಮ, ನೂತನಬಿಂಬ, ಜಲಾಧೀವಾಸ ಮೊದಲಾದ ಧಾರ್ಮಿಕ ಕಾರ್ಯಕ್ರಮ ನಡೆದು, ಮೇ.16...

ಸುಳ್ಯದ ಜಾಲ್ಸೂರು ಕದಿಕಡ್ಕ ಬಳಿ 33 ಕೆ.ವಿ.ವಿದ್ಯುತ್ ಲೈನ್ ನ ವೈರ್ ಕಟ್ ಆಗಿದ್ದು ವಿದ್ಯುತ್ ವಿಳಂಬವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಹಗಲಿನಲ್ಲಿ ನಿರ್ಹಹಣಾ ಕೆಲಸಕ್ಕೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಇದೀಗ ಮತ್ತೆ ವಿದ್ಯುತ್ ಕಡಿತದಿಂದ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ಇದರ ವಿದ್ಯಾರ್ಥಿ ಸಂಘ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ದಿನಾಂಕ 13 ಮೇ 2025ರಂದು ನಡೆಸಲಾಯಿತು. ಈ ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ಇವರು ತೆಂಗಿನ ಕಾಯಿ ಒಡೆಯುವುದರ ಮೂಲಕ ಚಾಲನೆಯನ್ನು ನೀಡಿದರು. ಒಟ್ಟು 10 ಪಂದ್ಯಾಟಗಳು...

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 22 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ...