Ad Widget

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎಂ. ದೀಪಬೆಳಗಿಸಿ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು. ಅತಿಥಿಗಳಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಜಯರಾಮ ರೈ , ನಿರ್ದೇಶಕ ಮೋನಪ್ಪ ಎಂ, ಸುಂದರ...

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಅಶ್ವಥ ಕಟ್ಟೆಯ ಭೂಮಿ ಪೂಜೆ ಕಾರ್ಯಕ್ರಮ

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಮೈದಾನದಲ್ಲಿ ಶ್ರೀಮತಿ ಪದ್ಮಾವತಿ ಉಪೇಂದ್ರ ಕಾಮತ್ ಮತ್ತು ಮನೆಯವರು ಸೇವೆಯಾಗಿ ನೀಡುವ ಅಶ್ವಥ ಕಟ್ಟೆಯ ಭೂಮಿ ಪೂಜೆ ಕಾರ್ಯಕ್ರಮ ಜೂ. 1 ರಂದು ನಡೆಯಿತು. ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯ ಪೂಜಾ ವಿಧಿ ವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ...
Ad Widget

ಅರಂತೋಡು : ಪ್ರಾಥಮಿಕ ಶಾಲಾ ಬಳಿ ರಸ್ತೆಗೆ ಬಾಗಿದ್ದ ಅಪಾಯಕಾರಿ ಮರ ತೆರವು

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ಅಪಾಯ ಆಹ್ವಾನಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು  ತೆರವುಗೊಳಿಸುವಂತೆ ಒತ್ತಾಯಿಸಿ ಅಮರ ಸುದ್ದಿ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಆರಣ್ಯ ಇಲಾಖೆ ಅಪಾಯ ಅಹ್ವಾನಿಸುತ್ತಿದ್ದ ಮರವನ್ನು ತೆರಗೊಳಿಸಿದ್ದಾರೆ

ಕೊಲ್ಲಮೊಗ್ರು : ಕೆ.ವಿ.ಜಿ ಪ್ರೌಢಶಾಲೆಯ ಶಿಕ್ಷಕರಾದ ವೆಂಕಟ್ರಮಣ ಕೊಪ್ಪಡ್ಕ ಸೇವಾ ನಿವೃತ್ತಿ

ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕರಾದ ಕೆ.ಕೆ ವೆಂಕಟ್ರಮಣ ಕೊಪ್ಪಡ್ಕ ರವರು ಸೇವಾ ನಿವೃತ್ತಿಯನ್ನು ಹೊಂದಿದ್ದು, ಸುಧೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಕಲ್ಮಕಾರು ಗ್ರಾಮದ ಕೊಪ್ಪಡ್ಕ ದಿ| ಕುಶಾಲಪ್ಪ.ಕೆ.ಎಸ್ ಹಾಗೂ ದಿ| ಹೊನ್ನಮ್ಮ ದಂಪತಿಗಳ ಪುತ್ರ.ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ ಶಾಲೆ ಕಲ್ಮಕಾರು ಇಲ್ಲಿ ಪಡೆದಿದ್ದು, ಪ್ರೌಢಶಾಲಾ ಶಿಕ್ಷಣವನ್ನು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಛಾಯಾ ಮಾನಸ ಗಿಡ ವಿತರಣೆ

ಸುಬ್ರಹ್ಮಣ್ಯ ಮೇ 30 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಛಾಯಾ ಮಾನಸ ಗಿಡಗಳನ್ನು ವಿತರಣೆ ಮಾಡಲಾಯಿತು. ಛಾಯಾ ಮಾನಸ ಪ್ಲಾಂಟ ಗಳನ್ನು ಮಾಡುವುದರಿಂದ ಇದರ ಪ್ರಾಮುಖ್ಯತೆ ಏನೆಂದರೆ ಇದರಲ್ಲಿ ಮ್ಯಾಗ್ನಿಷಿಯಮ್, ಕ್ಯಾಲ್ಸಿಯಂ ಹಾಗೂ ಕಬ್ಬಿನಾಂಶಗಳಿರುತ್ತವೆ. ಇದು ಡಯಾಬಿಟಿಸ್ ರೋಗಿಗಳಿಗೆ ಅತ್ಯುತ್ತಮವಾದ ಔಷಧ. ಅಲ್ಲದೆ ಇದರಲ್ಲಿ ರೋಗ ನಿರೋಧಕ...

ಬಾಳಿಲ:ಪ್ರತಿಭಾ ಪುರಸ್ಕಾರ 2025

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಮೇ 30ರಂದು 2024 -25ನೇ ಎಸ್ ಎಸ್ ಎಲ್ ಸಿ ಬ್ಯಾಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ( ರಿ.) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣರಾವ್ ವಹಿಸಿದ್ದರು. ರಾಜ್ಯಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ ಉತ್ತಮ್ ಕೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಹಿರಿಯ...
error: Content is protected !!