

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಮೇ 30ರಂದು 2024 -25ನೇ ಎಸ್ ಎಸ್ ಎಲ್ ಸಿ ಬ್ಯಾಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ( ರಿ.) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣರಾವ್ ವಹಿಸಿದ್ದರು. ರಾಜ್ಯಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ ಉತ್ತಮ್ ಕೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿ ನಾರಾಯಣ ರಾವ್ ಶರ್ಮ ಅಧ್ಯಕ್ಷರು ವಿದ್ಯಾಶಂಕರ ಪಬ್ಲಿಕ್ ಸ್ಕೂಲ್ ಮತ್ತು ವಾಸವಿ ಹೈಸ್ಕೂಲು ಅರಸೀಕೆರೆ ಇವರು ಡಿಸ್ಟಿಂಕ್ಷನ್ ಗಳಿಸಿದ 14 ವಿದ್ಯಾರ್ಥಿಗಳನ್ನು ಮತ್ತು 500ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರೊಂದಿಗೆ ವಿಶೇಷ ಬಹುಮಾನಗಳನ್ನು ನೀಡಿದರು. ಎನ್ ಎಂ ಎಂ ಎಸ್ ಸ್ಕಾಲರ್ ಶಿಪ್ ಗಳಿಸಿದ ವಿದ್ಯಾರ್ಥಿನಿ ಗುರುಪ್ರಿಯ ಇವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಇನ್ನೋರ್ವ ಅತಿಥಿ ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿ ಶಶಾಂಕ ಅರ್ನಾಡಿ ಡೈರೆಕ್ಟರ್ ಆಫ್ ಇಂಜಿನಿಯರಿಂಗ್ VISA ಬೆಂಗಳೂರು ಇವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಅಭ್ಯಾಗತರಾಗಿ ನಮ್ಮ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಯಶೋಧರ ಎನ್ ಶಾಲೆಯ ಬಿತ್ತಿ ಪತ್ರಿಕೆ ‘ವಿದ್ಯಾ ಸುಮ’ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವರ್ಷದ ವರದಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರು ಹಿರಿಯ ಪ್ರಾಥಮಿಕ ಶಾಲೆಯ 150 ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್, ನೋಟ್ ಬುಕ್, ಲೇಖನಿ ಸಾಮಗ್ರಿಗಳನ್ನು ನೀಡಿದರು. ಸರಕಾರದ ಉಚಿತ ಪಠ್ಯ ಪುಸ್ತಕಗಳನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಮೇಶ್ ರೈ ಅಗಲ್ಪಾಡಿ ವಿದ್ಯಾರ್ಥಿಗಳಿಗೆ ವಿತರಿಸಿದರು. ವಿದ್ಯಾಸಂಸ್ಥೆಯ ಸಂಚಾಲಕರಾದ ಪಿಜಿಎಸ್ ಎನ್ ಪ್ರಸಾದ್ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು. ದತ್ತಿನಿಧಿ ಬಹುಮಾನದ ಪಟ್ಟಿಯನ್ನು ಸಹ ಶಿಕ್ಷಕಿ ಕವಿತಾ ಎನ್ ವಾಚಿಸಿದರು. ಸಹಶಿಕ್ಷಕಿ ಸಹನಾ ಬಿ ಬಿ ಇವರು ಪುರಸ್ಕಾರಗೊಂಡ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಮುಖ್ಯೋಪಾಧ್ಯಾಯರಾದ ಉದಯಕುಮಾರ್ ರೈ ಎಸ್ ಸ್ವಾಗತಿಸಿದ ಕಾರ್ಯಕ್ರಮವನ್ನು ಹರಿಪ್ರಸಾದ್ ರೈ ಜಿ ವಂದಿಸಿದರು. ಸಹಶಿಕ್ಷಕ ಲೋಕೇಶ್ ಬಿ ಕಾರ್ಯಕ್ರಮ ನಿರೂಪಿಸಿದರು.