
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಮೈದಾನದಲ್ಲಿ ಶ್ರೀಮತಿ ಪದ್ಮಾವತಿ ಉಪೇಂದ್ರ ಕಾಮತ್ ಮತ್ತು ಮನೆಯವರು ಸೇವೆಯಾಗಿ ನೀಡುವ ಅಶ್ವಥ ಕಟ್ಟೆಯ ಭೂಮಿ ಪೂಜೆ ಕಾರ್ಯಕ್ರಮ ಜೂ. 1 ರಂದು ನಡೆಯಿತು.
ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯ ಪೂಜಾ ವಿಧಿ ವಿಧಾನಗಳನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಅಶ್ವತ ಕಟ್ಟೆಯ ದಾನಿ ಶ್ರೀಮತಿ ಪದ್ಮಾವತಿ ಉಪೇಂದ್ರ ಕಾಮತ್ ರವರ ಮಗ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಶ್ರೀಮತಿ ಶುಭಾ ಸುಧಾಕರ್ ಕಾಮತ್, ಶ್ರೀಮತಿ ಸುಮನ್ ಕಾಮತ್, ವಿಕ್ರಂಸಿಂಹ, ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಪುರುಷೋತ್ತಮ ನಂಗಾರು, ಹೇಮಚಂದ್ರ ಕುತ್ಯಾಳ, ವಿಜಯಕುಮಾರ್ ನರಿಯೂರು, ವಿನೋದ್ ಮಹಾಬಲಡ್ಕ, ಶ್ರೀಮತಿ ಸುಮತಿ ಹುಲಿಮನೆ, ಶ್ರೀಮತಿ ಸೌಮ್ಯಲಕ್ಷ್ಮಿ ಬೈತಡ್ಕ, ಶ್ರೀಮತಿ ಪವಿತ್ರ ಭಾರತಿ ಕೊನಡ್ಕಪದವು, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಜಯರಾಮ ರೈ ಜಾಲ್ಪುರು, ಪ್ರಮುಖರಾದ ಗುರುರಾಜ್ ಭಟ್ ಅಡ್ಕಾರು,ನ.ಸೀತಾರಾಮ,ಗಣೇಶ್ ರೈ ಕುಕ್ಕಂದೂರು, ಮೋಹನ್ ನಂಗಾರು, ಭಾಸ್ಕರ ಅಡ್ಕಾರು, ಇಂಜಿನಿಯರ್ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.