
ಅರಣ್ಯ ಇಲಾಖೆ ಮಂಗಳೂರು ವಿಭಾಗ, ಸುಬ್ರಹ್ಮಣ್ಯ ಉಪವಿಭಾಗ, ಪಂಜ ವಲಯ, ಬಳ್ಪ ಶಾಖೆ ಏನೆಕಲ್ಲು ಗ್ರಾಮದ ಕಲ್ಲಾಜೆ ದೇವರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.06 ರಂದು ವನಮಹೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಬಳ್ಪ ಶಾಖೆ ಉಪ ವಲಯ ಅರಣ್ಯಾಧಿಕಾರಿ ಮಹಮ್ಮದ್ ಮೆಹೆಬೂಬೆಇಲಾ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಾಣಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಏನೆಕಲ್ಲು ಗಸ್ತು ವನಪಾಲಕರಾದ ಧನಂಜಯ, ಗುತ್ತಿಗಾರು ಗಸ್ತು ವನಪಾಲಕರಾದ ಧರ್ಣಪ್ಪ.ಕೆ.ಎ, ಅರಣ್ಯ ವೀಕ್ಷಕರಾದ ಗಣೇಶ್ ಹೆಗ್ಡೆ, ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನವರು ಉಪಸ್ಥಿತರಿದ್ದು ಸಹಕರಿಸಿದರು.
