


ಸುಳ್ಯಕ್ಕೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಿವಿಧ ಇಲಾಖೆಯ ಕಛೇರಿ ಕಟ್ಟಡ ಉದ್ಘಾಟಿಸಿದರು.
ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ block public health lab (BPHL) ಮತ್ತು ನೂತನ ಶವಗಾರ, ಅರಂಬೂರಿನಲ್ಲಿ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಛೇರಿ ಕಟ್ಟಡ ಸೇರಿದಂತೆ ನೂತನವಾಗಿ ರಚನೆಗೊಂಡ ಸುಳ್ಯ ನಗರ ಯೋಜನಾ ಪ್ರಾಧಿಕಾರ ಆಡಳಿತ ಕಛೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ ಕೆ.ಎಂ. , ಅರೆಬಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಹಶೀಲ್ದಾರ್ ಮಂಜುಳಾ, ತಾ.ಪಂ. ಇ.ಓ ರಾಜಣ್ಣ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
