Ad Widget

ನಿಧನ : ಗುರುವ ಮೊಗೇರ ಪಳ್ಳಿಮಜಲು

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ನಿವಾಸಿ ಗುರುವ ಮೊಗೇರ ರವರು ಜೂ.23 ರಂದು ರಾತ್ರಿ ನಿಧನರಾದರು.ಮೃತರಿಗೆ 43 ವರ್ಷ ವಯಸ್ಸಾಗಿತ್ತು.ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದೆರಡು ತಿಂಗಳಿನಿಂದ ಡಯಾಲಿಸಿಸ್ ಗೆ ಒಳಗಾಗುತ್ತಿದ್ದರು.ಮೃತರು ಪತ್ನಿ ಸುಶೀಲಾ, ಪುತ್ರರಾದ ತೇಜಸ್, ಶೈಲೇಶ್, ಪುತ್ರಿ ವಿದ್ಯಾ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.(ವರದಿ : ಎಂ.ಎ ಮುಸ್ತಫಾ ಬೆಳ್ಳಾರೆ)

ಕುಲ್ಕುಂದ : ಜು.23 ರಿಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮಿನಾರಾಯಣ ಹೃದಯ ಹೋಮ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಅಣತಿ ದೂರದಲ್ಲಿರುವ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜು.23 ರಿಂದ ಆಗಸ್ಟ್ 01 ರವರೆಗೆ ಭಕ್ತಾದಿಗಳ ಕ್ಷೇಮಕ್ಕಾಗಿ ಶ್ರೇಷ್ಠ ಫಲದಾಯಕವಾಗಿರುವ ಶ್ರೀ “ಲಕ್ಷ್ಮಿನಾರಾಯಣ ಹೃದಯ ಹೋಮ” ಹಾಗೂ ಜಪವನ್ನು ಆಯೋಜಿಸಲಾಗಿದ್ದು, ಭಕ್ತಾದಿಗಳೆಲ್ಲರೂ ಅವರವರ ಆರ್ಥಿಕ ಸಂಕಷ್ಟ, ಆರೋಗ್ಯ ಪ್ರಾಪ್ತಿ, ಸಂತಾನ ಯೋಗ, ಉದ್ಯೋಗದ ತೊಂದರೆ...
Ad Widget

ಅರಂತೋಡು : ಕೆ.ಎಸ್.ಆರ್.ಟಿ.ಸಿ. ಬಸ್ ಭೀಕರ ಅಪಘಾತ – ಮೂವರಿಗೆ ಗಂಭೀರ – ಓರ್ವ ಮಹಿಳೆ ಮೃತ್ಯು

ಅರಂತೋಡಿನ ಕಾಲೇಜು ಬಳಿಯ ತಿರುವಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಒರ್ವ ಮಹಿಳೆ ಮೃತಪಟ್ಟಿದ್ದಾರೆ. ಕುಶಾಲನಗರ ಗುಡ್ಡೆಹೊಸೂರಿನ ಭಾರತಿ (50) ಮೃತಪಟ್ಟವರು..4 ಜನ ಗಾಯಾಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ  ಮತ್ತು 17 ಜನ ಗಾಯಾಳುಗಳನ್ನು ಕೆ ವಿ ಜಿ ಆಸ್ಪತ್ರೆಗೆ ತರಲಾಗಿದೆ. ಇದೀಗ...

ಅರಂತೋಡು : ಸರಕಾರಿ ಬಸ್ಸುಗಳ ನಡುವೆ ಅಪಘಾತ – ಪ್ರಯಾಣಿಕರಿಗೆ ಗಂಭೀರ ಗಾಯ

ಅರಂತೋಡಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಇದೀಗ ಅಪಘಾತ ಸಂಭವಿಸಿದ್ದು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅರಂತೋಡು ಎನ್.ಎಂ.ಪಿ.ಯು ಕಾಲೇಜು ಬಳಿ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಸುಳ್ಯ ಕೆ ವಿ ಜಿ ಆಸ್ಪತ್ರೆಗೆ ತರಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಳ್ಯ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂ.24ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಿ.ಇ.ಒ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಉಜ್ವಲ್.ಯು.ಜೆ, ಉಪಪ್ರಾಂಶುಪಾಲರಾದ ಡಾ.ಶ್ರೀಧರ್.ಕೆ, ಯೋಗಗುರು ಮತ್ತು ಎಂ.ಬಿ.ಎ ವಿಭಾಗ ಮುಖ್ಯಸ್ಥರಾದ ಪ್ರೊ.ಕೃಷ್ಣಾನಂದ.ಎ ಹಾಗೂ ಎನ್.ಎಸ್.ಎಸ್ ಘಟಕಾಧಿಕಾರಿಗಳಾದ ಪ್ರೊ.ಸತ್ಯಜಿತ್.ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ...

ರಾಷ್ಟ್ರೀಯ ಬಿಲ್ಲವ ಮಹಾಮಂಡಳಿ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬೇಟಿ

ಸುಬ್ರಹ್ಮಣ್ಯ ಜೂನ್ 25 : ಅಖಿಲ ಭಾರತ ಬಿಲ್ಲವ ಮಹಾಮಂಡಳಿಯ ಅಧ್ಯಕ್ಷರಾದ ಚಲನಚಿತ್ರ ನಟ ನಿರ್ಮಾಪಕ ರಾಜಶೇಖರ್ ಕೋಟ್ಯಾನ್ ರವರು ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು ಕಚೇರಿಯಲ್ಲಿ ರಾಜಶೇಖರ್...

ಬಿಜೆಪಿ ಅಧಿಕಾರದಲ್ಲಿದ್ದಾಗ ಸುಳ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯಾಗಿದೆ – ಕಾಂಗ್ರೆಸ್ ಶಾಸಕರುಗಳೇ ಅನುದಾನ ಬರುತ್ತಿಲ್ಲವೆಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಏನಂತೀರಿ? ಕಾಂಗ್ರೆಸ್ ಮುಖಂಡರಿಗೆ ವೆಂಕಟ್ ವಳಲಂಬೆ ಪ್ರಶ್ನೆ

ಸುಳ್ಯ:ಗ್ರಾಮ ಪಂಚಾಯತ್ ಮಟ್ಟದಲ್ಲಿ ಸರ್ಕಾರದ ಯಾವುದೇ ಅಭಿವೃದ್ಧಿ ಕಾರ್ಯಗಳು ಕಾಂಗ್ರೇಸ್ ಸರ್ಕಾರ ಬಂದ ನಂತರ ನಡೆಯುತ್ತಿಲ್ಲ ಜನಸಾಮಾನ್ಯರಿಗೆ ಆಕ್ರೋಶಿತರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಗ್ರಾಮ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದೇವೆ.ಯಾವುದೇ ಚುನಾವಣೆ ದೃಷ್ಟಿಯಿಂದ ಅಲ್ಲವೆಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೇಸ್ ಮುಖಂಡರು ಸುಳ್ಯ ಕ್ಷೇತ್ರವನ್ನು ಬಿಜೆಪಿ ಅಭಿವೃದ್ಧಿ ನಡೆಸಿಲ್ಲವೆಂದು ಆರೋಪ ಮಾಡಿದ್ದಾರೆ ಸುಳ್ಯ ಕ್ಷೇತ್ರ ಅಭಿವೃದ್ಧಿಯಲ್ಲಿ...

ಸುಬ್ರಹ್ಮಣ್ಯ : ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಧನಸಹಾಯ ಹಸ್ತಾಂತರ

ಸುಬ್ರಹ್ಮಣ್ಯ ಜೂನ್ 24 : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕ ಪಡೆದ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವನ್ನು ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಯಿತು.ಪ್ರಾಥಮಿಕ ಕೃಷಿ ಪತ್ತಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ...

ಮಂಡೆಕೋಲು ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವಾಧ್ಯಕ್ಷರಾದ ಕೇಶವಮೂರ್ತಿ ಹೆಬ್ಬಾರ್ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. ನಿವೃತ್ತ ಯೋಧ ಶೇಖರ ಮಣಿಯಾಣಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಅತ್ಯಾಡಿ, ಎಸ್‌ ಡಿ...

ಕೊಡಿಯಾಲ : ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಗ್ರಾ. ಪಂ. ಕಛೇರಿ ಎದುರು ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕೊಡಿಯಾಲ ಗ್ರಾಮ ಪಂಚಾಯತ್ ಎದುರು ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಯತೀಶ್ ಆರ್ವಾರ ಮಾತನಾಡಿದರು. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರವು ಜನಸಾಮಾನ್ಯರಿಗೆ ನೀಡುತ್ತಿರುವ ಸರಕಾರಿ ಸೇವೆಗಳನ್ನು ಕಠಿಣಗೊಳಿಸಿರುವುದನ್ನು ತಕ್ಷಣದಿಂದಲೇ ಕೈ ಬಿಡುವಂತೆ ಸರಕಾರವನ್ನು ಒತ್ತಾಯಿಸಿ ರಾಜ್ಯಪಾಲರಿಗೆ ಪಂಚಾಯತ್...
Loading posts...

All posts loaded

No more posts

error: Content is protected !!