Ad Widget

ಸುಳ್ಯ : ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ತರಬೇತಿ ಕಾರ್ಯಾಗಾರ – ಸನ್ಮಾನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಹಾಗೂ ತಾಲೂಕಿನ "ಶೌರ್ಯ" ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರವು ಸುಳ್ಯದ ಲಯನ್ಸ್‌ ಸೇವಾ ಸದನದಲ್ಲಿ ಜು.3 ರಂದು ನಡೆಯಿತು.ಕಾರ್ಯಾಗಾರದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ್ ಅಮೆಚೂರ್ ರವರು ವಹಿಸಿದ್ದರು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ಲಲಿತಕಲಾ ತರಗತಿಗಳ ಉದ್ಘಾಟನೆ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಲಲಿತಕಲಾ ತರಗತಿಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.ಉದ್ಘಾಟನೆಯನ್ನು ಶ್ರೀ ರಾಮಚಂದ್ರ.ಡಿ ಸುಬ್ರಹ್ಮಣ್ಯ ಟಮ್ಕಿ ನುಡಿಸುವುದರ ಮೂಲಕ ಉದ್ಘಾಟಿಸಿದರು.ಲಲಿತ ಕಲೆಗಳಾದ ಭರತನಾಟ್ಯ, ಯಕ್ಷಗಾನ, ಚಿತ್ರಕಲೆ, ಚೆಸ್ ಮುಂತಾದ ತರಗತಿಗಳು ಪ್ರತಿ ಬುಧವಾರ ಸಂಸ್ಥೆಯಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಕುಮಾರಿ ಶ್ರಾವ್ಯ ಹತ್ತನೇ ತರಗತಿ ವಹಿಸಿದ್ದರು.ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ...
Ad Widget

ಜಗತ್ ಪೌoಡೇಷನ್ ವತಿಯಿಂದ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

ಜಗತ್ ಪೌoಡೇಷನ್ (ರಿ )ಸುಳ್ಯ ವತಿಯಿಂದ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಬ್ರಾಂಡೆಡ್ ಕಂಪೆನಿಯ ರೈನ್ ಕೋಟ್ ಹಾಗೂ ಕೊಡೆ ವಿತರಿಸಲಾಯಿತು.  ಸುಳ್ಯ ದ. ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದಲ್ಲಿ ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕರು, ದ. ಕ ಜಿಲ್ಲಾ ಕೃಷಿಕ ಸಮಾಜ ಮಂಗಳೂರು ಇದರ ಉಪಾಧ್ಯಕ್ಷರು ಹಾಗೂ ದ....

ಪೆರಾಜೆ : ಬೈಕ್ ಸ್ಕಿಡ್ – ಸವಾರನಿಗೆ ಗಂಭೀರ ಗಾಯ

ಪೆರಾಜೆ ಕಲ್ಚರ್ಪೆ ಸಮೀಪ ಬೈಕೊಂದು ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಾರ ಐವರ್ನಾಡು ಗ್ರಾಮದ ನಿಡುಬೆ ನಿವಾಸಿ ಗೋಪಿನಾಥ್ ಎಂದು ತಿಳಿದುಬಂದಿದೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ದಿನಾಚರಣೆ ; ಸನ್ಮಾನ ಕಾರ್ಯಕ್ರಮ

“ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ” : ವಾಲ್ಟರ್ ನಂದಳಿಕೆ

ಮಂಗಳೂರು ಜು.02 : “ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ” ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ  ಮಂಗಳೂರು ಪತ್ರಿಕಾ ಭವನದಲ್ಲಿ  ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ “ಮಾಧ್ಯಮದ ಸವಾಲುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಇವರು “ಇತ್ತೀಚೆಗೆ...

ಸುಳ್ಯ ನಗರ ಮಹಾ ಯೋಜನೆಯ ಮಾಸ್ಟರ್ ಪ್ಲಾನ್ ಜನಸ್ನೇಹಿಯಾಗಿ ರೂಪಿಸುವಂತೆ ಡಿ.ಎಂ.ಶಾರಿಖ್ ಒತ್ತಾಯ

ಸುಳ್ಯ ನಗರ ಮಹಾ ಯೋಜನೆ ಕುರಿತು ಮಾಸ್ಟರ್ ಪ್ಲಾನ್ ಅನುಷ್ಠಾನ ಬಗ್ಗೆ ಸುಳ್ಯದ ನಾಗರಿಕರ ಸಭೆ ಕರೆದು, ಚರ್ಚೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಪಡೆದು ಸುಳ್ಯದ ನಾಗರಿಕರಿಗೆ ತೊಂದರೆ ಆಗದಂತೆ ಅನುಷ್ಠಾನಗೊಳಿಸಬೇಕು ಎಂಬುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಡಿ.ಎಂ.ಶಾರಿಖ್, ಆಗ್ರಹಿಸಿದ್ದಾರೆ.

“ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಬೇಕು” : ಕು| ಭಾಗೀರಥಿ ಮುರುಳ್ಯ

ಪಂಜ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ

“ನಮ್ಮ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಹಾಗೂ ಆದ್ಯತೆಯನ್ನು ನೀಡುತ್ತಾ ಬಂದಿದ್ದೇವೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಉತ್ತಮ ಆರೋಗ್ಯ ಇರುತ್ತದೆ. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಯೋಜನೆಯಡಿ ಪ್ರತೀ ಮನೆಗಳಿಗೂ ಕಡ್ಡಾಯವಾಗಿ ಶೌಚಾಲಯವನ್ನು ನಿರ್ಮಿಸಲು ಮುಂದಾಗಿದೆ. ಇದರ ಉದ್ದೇಶ ಮನೆಮಂದಿ ಎಲ್ಲೂ ಬಯಲು ಶೌಚಾಲಯಕ್ಕೆ ಹೋಗದೇ ಮನೆಯಲ್ಲಿರುವ ಶೌಚಾಲಯವನ್ನು ಉಪಯೋಗಿಸಿ ಸ್ವಚ್ಛತೆಯೊಂದಿಗೆ ಆರೋಗ್ಯವನ್ನು ಕೂಡ...

ಚೊಕ್ಕಾಡಿ : ರಸ್ತೆಗೆ ಉರುಳಿಬಿದ್ದ ಮರ

ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಹಲವು ಕಡೆಗಳಲ್ಲಿ ಹಾನಿಯಾಗಿದ್ದು, ಅಲ್ಲಲ್ಲಿ ಮರಗಳು ಉರುಳಿ ಬಿದ್ದಿವೆ. ಚೊಕ್ಕಾಡಿ ಶೇಣಿ ಮುಖ್ಯ ರಸ್ತೆಯಲ್ಲಿ ಮರವೊಂದು ಅಡ್ಡಲಾಗಿ ಉರುಳಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ ಲಘು ವಾಹನ ಸಂಚರಿಸುವಷ್ಟು ಮರವನ್ನು ತೆರವುಗೊಳಿಸಲಾಗಿದ್ದು, ಸಂಪೂರ್ಣ ಮರ ತೆರವುಗೊಳಿಸಬೇಕಾಗಿದೆ.

ಪಂಜ : ಗಾಳಿ-ಮಳೆಗೆ ರಸ್ತೆಗೆ ಉರುಳಿದ ಮರ

ಗಾಳಿಕೂಪು ಬಸ್ ನಿಲ್ದಾಣಕ್ಕೆ ಹಾನಿ..!

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪಂಜ ಸಮೀಪದ ಗಾಳಿಕೂಪು ಬಸ್ ನಿಲ್ದಾಣದ ಬಳಿಯಲ್ಲಿರುವ ಮರವೊಂದು ರಸ್ತೆಗೆ ಉರುಳಿಬಿದ್ದು ಬಸ್ ನಿಲ್ದಾಣ ಹಾನಿಗೊಂಡಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದ್ದು, ಮರ ತೆರವುಗೊಳಿಸಬೇಕಾಗಿದೆ.

ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ಧನಂಜಯ ಬಾಳುಗೋಡು ನಿಧನ

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ ಇನ್ನಿಲ್ಲ

ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ಧನಂಜಯ ಬಾಳುಗೋಡು ರವರು ಅಲ್ಪಕಾಲದ ಅಸೌಖ್ಯದಿಂದ ಜು.02 ರಂದು ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು.ಭಾರತೀಯ ಭೂಸೇನೆಯಲ್ಲಿ ಸುಮಾರು 18 ವರ್ಷಗಳ ಕಾಲ ಸೇವೆಗೈದು ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಇವರು ಪ್ರಸ್ತುತ ಮಂಗಳೂರಿನ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದರು.ಮೃತರು ಪತ್ನಿ ನಿವೃತ್ತ ಸಿ.ಆರ್.ಪಿ.ಎಫ್ ಉದ್ಯೋಗಿ ಯಶೋಧ, ಪುತ್ರರಾದ ಸೃಜನ್, ಹಾರ್ದಿಕ್,...
Loading posts...

All posts loaded

No more posts

error: Content is protected !!