- Wednesday
- May 6th, 2026
ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಭಾನುವಾರ ಸಂಜೆ ಸಂಭವಿಸಿದ ಭಾರೀ ಗಾಳಿ ಮಳೆಗೆ ವಿದ್ಯುತ್ ಸಂಪರ್ಕ ತೊಂದರೆಗೆ ಒಳಗಾದ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿಗಳು ಭಾರೀ ಮಳೆಯ ನಡುವೆಯೇ ಪರಿಶ್ರಮದೊಂದಿಗೆ 11 ಕೆ.ವಿ. ವಿದ್ಯುತ್ ಲೈನ್ನ್ನು ದುರಸ್ತಿಪಡಿಸಿ, ಕುಕ್ಕೆ ಸೇರಿದಂತೆ ಹಲವು ಗ್ರಾಮೀಣ ಭಾಗಗಳಿಗೆ ಮತ್ತೆ ವಿದ್ಯುತ್ ಪೂರೈಕೆ ಮಾಡಲು ಯಶಸ್ವಿಯಾಗಿದ್ದಾರೆ.ಆದಿತ್ಯವಾರ ಸಂಜೆ 4 ಗಂಟೆ ಸುಮಾರಿಗೆ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿಯ ಸಭಾಂಗಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್(ರಿ)ಮಂಗಳೂರು ಇವರ ವತಿಯಿಂದ ನಡೆಸಲ್ಪಡುವ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನಡೆಯಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ ಬಾಳಿಲ ಇದರ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಎನ್ ವೆಂಕಟರಮಣ ಭಟ್ ದೀಪ ಬೆಳಗಿಸಿ ತರಗತಿಯನ್ನು ಉದ್ಘಾಟಿಸಿ,ಯಕ್ಷ ಶಿಕ್ಷಣದ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯುವಂತಾಗಲಿ ಎಂದು ಹಾರೈಸಿದರು....
ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸ್ಥಾಪಕರಾದ ಸ್ವರ್ಗೀಯ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ಶ್ರೀ ನಾರಾಯಣ ಭಟ್ ಕೆ ಇವರು ಭಾಗವಹಿಸಿ ವೆಂಕಟಸುಬ್ಬರಾವ್ ಇವರ ಗುಣಗಾನವನ್ನು ಮಾಡಿದರು, ಅಲ್ಲದೆ ಶ್ರೀಯುತರ ಜೊತೆಗಿನ ಬಾಂಧವ್ಯವನ್ನು ನೆನಪಿಸಿದರು. ಶಾಲೆಯನ್ನು ಸ್ಥಾಪಿಸಿ ಬೆಳೆಸುವಲ್ಲಿ ಅವರು ತೊಡಗಿಕೊಂಡ ರೀತಿಯನ್ನು ತಿಳಿಸಿದರು. ವಿದ್ಯಾಬೋಧಿನೀ...
ಮಾತೃಭೂಮಿ ಯುವ ವೇದಿಕೆ(ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ ಕಾರ್ಯಕ್ರಮದ ಜೊತೆಗೆ ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನವು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ ಮತ್ತು ನೆಡುವಿಕೆ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪರಿಸರದ ಜೀವಿಗಳ ಬದುಕಿನ ಬಗ್ಗೆ ಅದರಲ್ಲೂ ಮುಖ್ಯವಾಗಿ ಉರಗಗಳ(ಹಾವುಗಳ) ಗುಣಲಕ್ಷಣಗಳ ಕುರಿತು ವಿಶೇಷವಾಗಿ...
ದುರ್ಗಾ ಮಾತಾ ಭಜನಾ ಮಂದಿರ, ಮಲ್ಲಿಕಾರ್ಜುನ ಭಜನಾ ಮಂಡಳಿ ಆರಂತೋಡು ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜು.06 ರಂದು ನಡೆಯಿತು. ಕೆ ಆರ್ ಪದ್ಮನಾಭ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ ಆರ್ ಪದ್ಮನಾಭ, ಅಧ್ಯಕ್ಷರಾಗಿ ತೀರ್ಥರಾಮ ಆಡ್ಕಬಳೆ, ಕಾರ್ಯದರ್ಶಿಯಾಗಿ ಸುರೇಶ ಉಳುವಾರು, ಉಪಾಧ್ಯಕ್ಷರಾಗಿ...
ಬೆಳ್ಳಾರೆಯ ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ 2025-30ನೇ ಸಾಲಿಗೆ ಆಡಳಿತ ಮಂಡಳಿಗೆ ಚುನಾವಣೆಯು ಜೂ.29ರಂದು ನಡೆಯಿತು. ನೂತನ ಅಧ್ಯಕ್ಷರಾಗಿ ಎನ್ ಎಸ್ ಡಿ ವಿಠಲದಾಸ್, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಕೊಲ್ಯ ಪೆರುವಾಜೆ, ನಿರ್ದೇಶಕರುಗಳಾಗಿ ಸೇಸಪ್ಪ ಪೂಜಾರಿ, ನಾಗೇಶ್ ಕೊಲ್ಯ, ಬಿ ಕೆ ಧರ್ಮಪಾಲ ಶೇಣಿ, ಅಣ್ಣಿ ಪೂಜಾರಿ, ಮೋಹನ್ ಸಾಲಿಯಾನ್ ಸಾರಕೆರೆ, ದೇರಣ್ಣ ಪೂಜಾರಿ ಆಯ್ಕೆಯಾಗಿದ್ದಾರೆ....
ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘ(ರಿ.) ಬೆಂಗಳೂರು ಸುಳ್ಯ ತಾಲೂಕು ಇದರ ವತಿಯಿಂದ ಜು.05 ರಂದು ಪುತ್ತೂರು ಹಾಗೂ ಸುಳ್ಯ ತಾಲೂಕಿನಲ್ಲಿ ಸುಮಾರು 31 ವರ್ಷಗಳ ಕಾಲ ಅತಿಥಿ ಶಿಕ್ಷಕಿಯಾಗಿ, ಅಂತಿಮವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕ ಇಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ...
ಎಲಿಮಲೆ : ಪೈಲಾರಿನಿಂದ ಪೆರ್ಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ಸಂಚರಿಸುವ ಧರ್ಮಸ್ಥಳ ಡಿಪೋದ ಬಸ್ಸು ಈವರೆಗೆ ಪೈಲಾರಿನಲ್ಲಿ ರಾತ್ರಿ ತಂಗುತ್ತಿತ್ತು. ಪೈಲಾರು-ಎಲಿಮಲೆ ಮಧ್ಯೆ ಸೀಮಿತ ಸಾರಿಗೆ ವ್ಯವಸ್ಥೆ ಇರುವುದನ್ನು ಮನಗಂಡಂತಹ ಚೈತನ್ಯ ದೀಕ್ಷಿತ್ ಕೆಳಪಾರೆ ಮತ್ತು ಬೆಟ್ಟ ಜಯರಾಮ್ ಭಟ್ ಇವರುಗಳು ಸಂಬಂಧಪಟ್ಟ ಇಲಾಖೆಗಳನ್ನು ಸಂಪರ್ಕಿಸಿ ಬಸ್ ಸಂಚಾರದ ವಿಸ್ತರಣೆಯನ್ನು ಮಾಡಿಸಿರುತ್ತಾರೆ. ಜುಲೈ 2ರಂದು ಬಂದಂತಹ ಬಸ್ಸನ್ನು...
