Ad Widget

ಅರಂತೋಡು : ಹೊತ್ತಿ ಉರಿದ ಘನತ್ಯಾಜ್ಯ ಘಟಕ

ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಅರಂತೋಡು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿದ್ದು, ಘಟಕ ಸಂಪೂರ್ಣ ಹೊತ್ತಿ ಉರಿದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ತ್ಯಾಜ್ಯ ಎಲ್ಲವೂ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ  ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.

ದೇವಚಳ್ಳ : ಕರಂಗಲ್ಲು ಎಂಬಲ್ಲಿ ಸೇತುವೆ ಕುಸಿತ

ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿ.ಡಿ.ಓ

ದೇವಚಳ್ಳ ಗ್ರಾಮದ ಕರಂಗಲ್ಲು ಎಂಬಲ್ಲಿ ಸೇತುವೆಯೊಂದು ಕುಸಿತಗೊಂಡಿದ್ದು, ಹರಿಹರ ಪಳ್ಳತ್ತಡ್ಕ-ಮುಳ್ಳುಬಾಗಿಲು-ಕರಂಗಲ್ಲು ಮೂಲಕವಾಗಿ ಕಂದ್ರಪ್ಪಾಡಿ ಸಂಪರ್ಕಿಸುವ ರಸ್ತೆಯಲ್ಲಿರುವ ಸೇತುವೆ ಇದಾಗಿದೆ. ಕರಂಗಲ್ಲು, ದೊಡ್ಡಕಜೆ, ಹೆರ್ಕಜೆ ಸೇರಿದಂತೆ ಆ ಭಾಗದಿಂದ ಜನರು ಹರಿಹರಕ್ಕೆ ಬರಬೇಕಿದ್ದರೆ ಈ ಸೇತುವೆಯ ಮೂಲಕವೇ ಬರಬೇಕಾಗಿದ್ದು, ಸ್ಥಳಕ್ಕೆ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ರವರು...
Ad Widget

ಪದ್ಮಾವತಿ ಗುಡ್ಡೆ ನಾಗನಗದ್ದೆ ನಿಧನ

ದೇವಚಳ್ಳ ಗ್ರಾಮದ ಸುಂದರ ಗೌಡ ಗುಡ್ಡೆ ನಾಗನಗದ್ದೆ ರವರ ಧರ್ಮಪತ್ನಿ ಪದ್ಮಾವತಿ ಅವರು ಅಸೌಖ್ಯದಿಂದ ಜು.09 ರಂದು ಸ್ವಗೃಹದಲ್ಲಿ ನಿಧನರಾದರು.‌

“ಹಾಡಿನೊಂದಿಗೆ ತಿಳಿಸುವ ಜ್ಞಾನ ಮಕ್ಕಳ ಭವಿಷ್ಯದ ಉನ್ನತಿಗೆ ಸೋಪಾನ” –  ಲಕ್ಷ್ಮೀಶ ಗಬ್ಲಡ್ಕ

ಕಲಾವಿದ ಮಣಿ ನಾಲ್ಕೂರು ಅವರಿಗೆ ಸನ್ಮಾನ

ಸುಬ್ರಹ್ಮಣ್ಯ : “ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಬದುಕಿನ ವಿದ್ಯೆ ಅತ್ಯವಶ್ಯಕ. ಜನಪದ ಹಾಡುಗಳೊಂದಿಗೆ ಜೀವನದ ಸಾರವನ್ನು ಯುವ ಜನಾಂಗಕ್ಕೆ ನೀಡುವುದರಿಂದ ಅವರಿಗೆ ಬದುಕಿನ ಅರ್ಥ ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ. ಜೀವನ ಕಟ್ಟಿಕೊಳ್ಳಲು ಬೇಕಾದ ವಿಚಾರಗಳನ್ನು ಹಾಡಿನ ಮೂಲಕ ತಿಳಿಸಿದಾಗ ವಿದ್ಯಾರ್ಥಿಗಳ ಮನಸಿನಲ್ಲಿ ಅವುಗಳು ಅಚ್ಚಳಿಯದೆ ನಿಲ್ಲುತ್ತದೆ. ಇಂತಹ ಕಾರ್ಯಕ್ರಮಗಳು ಮಕ್ಕಳ ಬದುಕಿಗೆ ತಿರುವನ್ನು ಒದಗಿಸುತ್ತದೆ” ಎಂದು ಜಿಲ್ಲಾ ಧಾರ್ಮಿಕ...

ಕೊಡಿಯಾಲ : ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತಗುಲಿ ಶಾಕ್ ; ವ್ಯಕ್ತಿ ಮೃತ್ಯು

ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್‌ ಶಾಕ್ ನಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಕಲ್ಲಪಣೆಯ ದಿವಾಕರ ಆಚಾರ್ಯ(45) ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತಾಗಿ ಮೃತಪಟ್ಟ ಘಟನೆ ನಡೆದಿದ್ದು, ಅವರು ವೈರ್ ಅನ್ನು ಕೈಯಲ್ಲಿ ಹಿಡಿಕೊಂಡ ಸ್ಥಿತಿಯಲ್ಲಿದ್ದರು.ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ.

ಜು.13 : ಬೆಳ್ಳಿಪ್ಪಾಡಿಯಲ್ಲಿ ಕೆಸರ್ ಡೊಂಜಿ ದಿನ

ಶಕ್ತಿ ಯುವಕ ಮಂಡಲ (ರಿ) ಬೆಳ್ಳಿಪ್ಪಾಡಿ ಹಾಗೂ ಊರಿನ ಎಲ್ಲ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಇದೇ ಬರುವ ದಿನಾಂಕ 13 - 07- 2025 ನೇ ಭಾನುವಾರ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂದಿರದಿಂದ 150 ಮೀಟರ್ ದೂರದಲ್ಲಿರುವ ಶ್ರೀ ಕೃಷ್ಣ ಪ್ರಸಾದ್ ಬೆಳ್ಳಿಪ್ಪಾಡಿ ಇವರ ಗದ್ದೆಯಲ್ಲಿ ಕೆಸರಗದ್ದೆ ಕ್ರೀಡಾಕೂಟ ನಡೆಯಲಿದೆ.ಬೆಳಗ್ಗೆ ಗಂಟೆ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್

ಸ್ವಾಗತ ಕೋರಿದ ಅಧಿಕಾರಿಗಳು ಹಾಗೂ ಮುಖಂಡರು

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” : ಡಾ| ಜಿ.ಪರಮೇಶ್ವರ್

ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್ ಅವರು ಜು.08 ರಂದು ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ. ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ. ಇತ್ತೀಚೆಗೆ ನಡೆದ ಕಾನ್ಫರೆನ್ಸ್...

ಸುಳ್ಯ : ಶುಭಾಷಿನಿ ಕಾಮತ್ ನಿಧನ

ಸುಳ್ಯ ಹಲವಾರು ಸಂಘ-ಸಂಸ್ಥೆಯಲ್ಲಿ ಗುರುತಿಸಿಕೊಂಡಿರುವ ಜಯನಗರ ನಿವಾಸಿ ಸುರೇಶ್ ಕಾಮತ್ ಇವರ ಪತ್ನಿ ಶುಭಾಷಿನಿ ಕಾಮತ್ ಬೋಳುಗಲ್ಲು ಇಂದು ಮುಂಜಾನೆ ನಿಧನರಾದರು.  ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಇಂದು ಮುಂಜಾನೆ ಸುಳ್ಯದ ಕೆ.ವಿ.ಜಿ ಆಸ್ಪತ್ರೆಯಲ್ಲಿ ನಿಧನರಾದರು.  ಇವರು ಮಂಡೆಕೋಲು ಬೋಳುಗಲ್ಲು ಪದ್ಮಾವತಿ-ಶಶಿಧರ್ ನಾಯಕ್ ದಂಪತಿಗಳ ಪುತ್ರಿಯಾಗಿದ್ದು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
error: Content is protected !!