Ad Widget

ಬಾಳಿಲ: ಪ್ರತಿಭಾ ಪ್ರದರ್ಶನ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಜು.11ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿ ಜೀವನದಲ್ಲಿ ಬದುಕು ಕ್ರಿಯಾತ್ಮಕವಾಗಿರಬೇಕು. ತಮ್ಮಲ್ಲಿರುವ ಪ್ರತಿಭೆ ಇಮ್ಮಡಿಗೊಳಿಸಲು ಶಾಲೆಗಳಲ್ಲಿ ಅವಕಾಶಗಳಿರಬೇಕು. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತರುವಂತ ಕಾರ್ಯವೇ ಪ್ರತಿಭಾ ಪ್ರದರ್ಶನ. ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ. ಪಠ್ಯಧಾರಿತ ಶಿಕ್ಷಣದಿಂದ ಮಾತ್ರ ಬದುಕಿನ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ, ಬದಲಾಗಿ ಬಾಲ್ಯದಿಂದಲೇ...

ಗುತ್ತಿಗಾರು : ಬಿಜೆಪಿ ಬೂತ್ ಸಮಿತಿ  ವತಿಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಗುರು ಪೂರ್ಣಿಮೆ ಅಂಗವಾಗಿ ಗುತ್ತಿಗಾರು ಗ್ರಾಮದ 123 ನೇ ಬೂತ್ ನ ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಅಧ್ಯಾಪಕರಾದ ಧ್ರುವ ಕುಮಾರ್ ಹಾಗೂ ಶ್ರೀಮತಿ ಭುವನೇಶ್ವರಿಯವರಿಗೆ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರು ಆಗಿರುವ ವೆಂಕಟ್ ದಂಬೆಕೋಡಿ ಹಾಗೂ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Ad Widget

ನಿಧನ : ಆಯಿಷಾ ಬೆಳ್ಳಾರೆ

ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇದರ ಪ್ರಧಾನ‌ ಕಾರ್ಯದರ್ಶಿ ದಾವೂದ್ ಸಅದಿಯವರ ತಾಯಿ ಆಯಿಷಾ ಅವರು ಅಲ್ಪಕಾಲದ ಅಸೌಖ್ಯದಿಂದ ಜು 10ರಂದು ನಿಧನರಾದರು.ಅವರಿಗೆ 80 ವರುಷ ವಯಸ್ಸಾಗಿತ್ತು.ಅವರು ದಾವೂದ್ ಸಅದಿ‌ ಸೇರಿದಂತೆ ಐದು ಗಂಡು ಹಾಗೂ ಆರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)

“ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ” : ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಸುಬ್ರಹ್ಮಣ್ಯದಲ್ಲಿ ಪರಿಸರ ಉಳಿಸಿ ಅಭಿಯಾನಕ್ಕೆ ಚಾಲನೆ

ಸುಬ್ರಹ್ಮಣ್ಯ ಜುಲೈ 11: ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ದೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಆರೋಗ್ಯ ಕೇಂದ್ರ, ಶ್ರೀ ಸುಬ್ರಹ್ಮಣ್ಯ ಮಠ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಸೀನಿಯರ್ ಚೇಂಬರ್, ಡಾl ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಅರಣ್ಯ ಇಲಾಖೆ,...

ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ಮುರಲೀ ಮೋಹನ್ ಚೂಂತಾರು

ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಮಿತಿಯಲ್ಲಿ ಕುಲಪತಿಗಳು ಅಧ್ಯಕ್ಷರಾಗಿದ್ದು,...

ಕೆಂಪು ಕಲ್ಲು, ಮರಳು ಅಭಾವದ ಬಗ್ಗೆ ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ  ಜು.14 ರಂದು ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ – ವೆಂಕಟ್ ವಳಲಂಬೆ

ರಾಜ್ಯ ಸರ್ಕಾರದ ಅವಿವೇಕಿ ನಡವಳಿಕೆಗಳಿಂದಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಂಪುಕಲ್ಲು ಮತ್ತು ಹೊಯ್ಗೆ ಅಲಭ್ಯವಾದ ಪರಿಣಾಮವಾಗಿ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕಟ್ಟಡ ನಿರ್ಮಾಣ ಕಾರ್ಮಿಕರು, ಲಾರಿ ಚಾಲಕ ಮಾಲಕರು, ಸ್ವಂತ ಸೂರು ಕಟ್ಟಿಕೊಳ್ಳಲು ಹೊರಟಿರುವ ಬಡ ಜನರು ತೀರ ಸಂಕಷ್ಟಕ್ಕೊಳಗಾಗಿದ್ದು ಮಳೆಗಾಲದ ಈ ದಿನಗಳಲ್ಲಿ ಜನತೆ ಹಾಗೂ ಕಾರ್ಮಿಕರು ಬೀದಿಗೆ...

ಐವರ್ನಾಡು : ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುವಂದನಾ ಕಾರ್ಯಕ್ರಮ

ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನೆ ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕ ಉಮೇಶ್ ಮಾಸ್ತರ್ ಪಲ್ಲತ್ತಡ್ಕ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ನೀಲಮ್ಮ ಅಚಪ್ಪಾಡಿ ಯವರಿಗೆ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಐವರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ನಂದಕುಮಾರ್ ಬಾರೆತ್ತಡ್ಕ, ಬೆಳ್ಳಾರೆ ಬಿಜೆಪಿ ಮಹಾ ಶಕ್ತಿ ಕೇಂದ್ರ...

ಐವರ್ನಾಡು : ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜು. 14 ಸೋಮವಾರ ಪೂ.ಗಂ.10.00 ರಿಂದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ಅಂಚೆ ಜನ ಸಂಪರ್ಕ ಅಭಿಯಾನ ಅಂಚೆ...

ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ : ಇಂದಿನಿಂದ ವಿತರಣೆ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ.ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ), ಚಂದ್ರನ್ ಕೂಟೇಲ್ ಮೊದಲಾದವರು ಇದ್ದರು.ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ನೀಡಲಾಗುತ್ತಿತ್ತು....

ಸುಬ್ರಹ್ಮಣ್ಯ : ಜು.14 ರಂದು “ನಾಯಿಗಳಿಗೆ ಹುಚ್ಚು ನಾಯಿ ರೋಗನಿರೋಧಕ ಉಚಿತ ಲಸಿಕಾ ಶಿಬಿರ”

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಡಬ, ಪಶು ಆಸ್ಪತ್ರೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.14 ಸೋಮವಾರದಂದು ಬೆಳಿಗ್ಗೆ 10:00 ಗಂಟೆಯಿಂದ “ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್...
Loading posts...

All posts loaded

No more posts

error: Content is protected !!