Ad Widget

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು (ಜು.17) ರಜೆ ಘೋಷಣೆ

ದ.ಕ.ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಇದೆ ಹವಾಮಾನ ಮುಂದುವರಿಯುವ ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿರುವುದರಿಂದ  ಜುಲಾಯಿ 17(ಗುರುವಾರ) ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರಾಥಮಿಕ,ಪ್ರೌಡ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮಡಪ್ಪಾಡಿ : ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಕಛೇರಿಯ ಸಭಾಂಗಣದಲ್ಲಿ ಜು.19 ರಂದು ಶನಿವಾರ ಪೂ.ಗಂ.09.30 ರಿಂದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ಆಧಾರ್ ಇ ಕೆವೈಸಿ ಆಗದೇ ಉಳಿದಿರುವ ಫಲಾನುಭವಿಗಳ ಇ...
Ad Widget

ಅರೆಲ್ತಡಿ ಉಳ್ಳಾಕುಲು ದೇವಸ್ಥಾನಕ್ಕೆ ಭೇಟಿ ನೀಡಿದ ಜನಾರ್ಧನ ರೆಡ್ಡಿ

ಸವಣೂರು ಗ್ರಾಮದ ಅರೆಲ್ತಡಿ ಉಳ್ಳಾಕುಲು ದೇವಸ್ಥಾನಕ್ಕೆ  ಗಂಗವತಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿಯವರು ಭೇಟಿ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರನ್ನು ಸ್ವಾಗತಿಸಿದರು.ನಂತರ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮಾಜಿ ಸಂಸದರರಾದ ನಳಿನ್ ಕುಮಾರ್ ಕಟೀಲು, ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಸಹಿತ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು...

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ನೇಜಿ ನಾಟಿ

ಸುಬ್ರಹ್ಮಣ್ಯ ಜು.16: ಸದಾ ಸಮವಸ್ತ್ರ ಧರಿಸಿ ಕಾಲೇಜಿನಲ್ಲಿ ಪಾಠ ಕೇಳುವ ವಿದ್ಯಾರ್ಥಿಗಳು ಕೆಸರು ತುಂಬಿದ ಗದ್ದೆಗೆ ಇಳಿದು ರೈತರಂತೆ ಕೈಯಲ್ಲಿ ನೇಜಿ ಹಿಡಿದು ನೇಜಿ ನಾಟಿ ಮಾಡಿ ಖುಷಿಪಟ್ಟರು.ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ, ಐಕ್ಯೂಎಸಿ ಘಟಕ ಆಶ್ರಯದಲ್ಲಿ "ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನತೆಯ ಪಾತ್ರ" ಕಾರ್ಯಕ್ರಮದ ಅಂಗವಾಗಿ ನೇಜಿ...

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಹಾವು ದಿನಾಚರಣೆ

ವಿಶ್ವ ಹಾವುಗಳ ದಿನಾಚರಣೆಯ ಪ್ರಯುಕ್ತ ಪರಿಸರ ಹಾಗೂ ವಿವಿಧ ರೀತಿಯ ಉರಗಗಳ ಸಂರಕ್ಷಣೆಯ ಕುರಿತು ಮಾಹಿತಿ ಕಾರ್ಯಗಾರವು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಜು.16 ರಂದು ನಡೆಯಿತು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅರಣ್ಯ ಸಂರಕ್ಷಣಾಕಾರ ಭುವನೇಶ್ ಕೈಕಂಬ ಇವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ, ಪ್ರಕೃತಿಯ ಸಮತೋಲನದಲ್ಲಿ ಉರಗಗಳ ಮಹತ್ವ, ವಿವಿಧ ಉರಗಗಳ ಪರಿಚಯ ಹಾಗೂ...

ಆಲೆಟ್ಟಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕಾರ್ಯಕರ್ತರ ಅಹವಾಲು ಸ್ವೀಕಾರ

ದ.ಕ. ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಜು.15 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರ ಭೇಟಿಯಾಗಿ ಅಹವಾಲು ಸ್ವೀಕರಿಸಿದರು. ಆಲೆಟ್ಟಿಗೆ ಆಗಮಿಸಿದ ಸಂಸದರು ಸೊಸೈಟಿ ಸಭಾಂಗಣದಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದಕು| ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮಂಡಲ...

ಎ.ಬಿ.ವಿ.ಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ತಾಲೂಕು ಘಟಕದಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನು ಜ್ಞಾನದೀಪ ಶಾಲೆಯಲ್ಲಿ ಜು.14 ರಂದು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಗದಾಧರ್ ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ "ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ" ದ ಮಹತ್ವದ ಕುರಿತು ಮಾತನಾಡಿದರು. ತಾಲೂಕಿನ ಸಂಚಾಲಕರಾದ ನಂದನ್ ಪವಿತ್ರಮಜಲು ಸದಸ್ಯತ್ವದ ಮಹತ್ವವನ್ನು ವಿವರಿಸಿದರು. ಎಬಿವಿಪಿಯ ಸಕ್ರಿಯ...

ಅರಂತೋಡು : ಸ್ನೇಹ ಹೋಟೆಲ್ ಮಾಲಕ ಯೋಗೀಶ್ ಗೂನಡ್ಕ ನಿಧನ

ಅರಂತೋಡು ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಸುಮಾರು 24 ವರ್ಷ ಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದ ಯೋಗೀಶ್(42) ರವರು ಜು.16 ರಂದು ನಿಧನರಾದರು. ಮೃತರು ತಾಯಿ ಮೀನಾಕ್ಷಿ, ಪತ್ನಿ ಲಲಿತಾ(ರೇಶ್ಮಾ), ಪುತ್ರರಾದ ಧನುಷ್ ಹಾಗೂ ಗೌಶಿಕ್ ರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ : ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿ

ಸುಬ್ರಹ್ಮಣ್ಯ ಸಮೀಪ 33 ಕೆವಿ. ಹಾಗೂ 11 ಕೆವಿ ವಿದ್ಯುತ್ ಲೈನ್ ಮೇಲೆ ಮರವೊಂದು ಬಿದ್ದು ಕಂಬಗಳಿಗೆ ಹಾನಿಯಾದ ಘಟನೆ ಇಂದು ನಡೆದಿದೆ. ಸ್ಥಳಕ್ಕೆ ಮೆಸ್ಕಾಂ ಎಇ ಚಿದಾನಂದ ಹಾಗೂ ಸಿಬ್ಬಂದಿಗಳು ಆಗಮಿಸಿ ದುರಸ್ತಿ ಕಾರ್ಯ ಆರಂಭಿಸಿದ್ದಾರೆ.

ಬೆಳ್ಳಾರೆ-ನಾಯಕರ ಶಿಬಿರ ಮತ್ತು ಖುರ್ರತ್ ತಂಙಲ್ ಅನುಸ್ಮರಣೆ

ಎಸ್ಸೆಸ್ಸೆಫ್ ಬೆಳ್ಳಾರೆ ಘಟಕದ ವತಿಯಿಂದ ನಾಯಕರ ಶಿಬಿರ ಮತ್ತು ಖುರ್ರತ್ ಸಾದಾತ್ ಖುರ್ರತ್ ತಂಙಲ್ ಅನುಸ್ಮರಣೆ ಸಮಾರಂಭವು ಜು 15ರಂದು ಬೆಳ್ಳಾರೆ ಸುನ್ನೀ ಸೆಂಟರ್ನಲ್ಲಿ ನಡೆಯಿತು.ಸುನ್ನೀ ಜಂಇಯತ್ತುಲ್ ಉಲಮಾ ಬೆಳ್ಳಾರೆ ವಲಯಾಧ್ಯಕ್ಷ ಹಸನ್ ಸಖಾಫಿ ಉದ್ಘಾಟಿಸಿದರು.ಈ ಸಮಾರಂಭದಲ್ಲಿ ಸುನ್ನೀ ತರಗತಿಯನ್ನು ನಡೆಸಿದ ಕೇರಳ ಎಸ್ಸೆಸ್ಸೆಫ್ಫಿನ ಹಣಕಾಸು ಕಾರ್ಯದರ್ಶಿ ಅನಸ್ ಅಮಾನಿ ಪುಷ್ಪಗಿರಿಯವರು ಸುನ್ನೀ ಮುಸ್ಲಿಮರು ಪಾಲಿಸಿ...
Loading posts...

All posts loaded

No more posts

error: Content is protected !!