Ad Widget

ಕುಮಾರ್ ಪೆರ್ನಾಜೆ, ಸೌಮ್ಯ ದಂಪತಿಗಳು ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿಗೆ ಆಯ್ಕೆ

ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ. ಆ.03 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು...

ಬೆಳ್ಳಾರೆ : ಸ್ನೇಹಿತರ ಕಲಾಸಂಘದವರಿಂದ ಅಟ್ಟಿ ಮಡಿಕೆ, ಮೊಸರು ಕುಡಿಕೆ ಹಾಗೂ ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ನೇಹಿತರ ಕಲಾಸಂಘ  ಬೆಳ್ಳಾರೆ ಇವರ ವತಿಯಿಂದ ಆಗಸ್ಟ್ 15ರಂದು ನಡೆಯಲಿರುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಆಗಸ್ಟ್ 17ರಂದು ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು  ಜುಲೈ 30ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ  ಪದ್ಮನಾಭ ಬೀಡು, ಕಾರ್ಯದರ್ಶಿ...
Ad Widget

ರಕ್ಷಾ ನಾಗರಿಕ ಬಳಗ ಮೊಗ್ರ ಇವರಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಹಾಗೂ ಆರ್ಥಿಕ ನೆರವು

ಮೊಗ್ರ ಕಿನ್ನಿಕುಮೇರಿ ಪರಿಸರದಲ್ಲಿ ಸೇವಾ ಸಂಘಟನೆಯಾಗಿ ಕಾರ್ಯ ನಿರ್ವಹಿಸುತ್ತಿರುವ ರಕ್ಷಾ ನಾಗರಿಕ ಬಳಗದ ವತಿಯಿಂದ ಮೊಗ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.ಸಂಘಟನೆಯ ಅಧ್ಯಕ್ಷರಾದ ಲಯನ್ ನಾಗೇಶ್ ತೆಂಕಪ್ಪಾಡಿಯವರು ಸಮವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯದರ್ಶಿ ಜೇಸಿ ಜೀವನ್ ಮಲ್ಕಜೆ, ಕೋಶಾಧಿಕಾರಿ ದಯಾನಂದ ಕಿನ್ನಿಕುಮೇರಿ, ಪದಾಧಿಕಾರಿಗಳಾದ ಲಯನ್ ಕರುಣಾಕರ ಎಣ್ಣೆಮಜಲು, ಉಮೇಶ್ ಮಕ್ಕಿ,...

ಅರಂತೋಡು : ಅಗ್ನಿ ದುರಂತಕ್ಕೆ ತುತ್ತಾದ ಪಂಚಾಯತ್ ಘನ ತ್ಯಾಜ್ಯ ವಿಲೇವಾರಿ ಘಟಕದ ಪುನರ್ ನಿರ್ಮಾಣಕ್ಕೆ ಸಹಕಾರಿ ಸಂಘದಿಂದ 1 ಲಕ್ಷ ರೂಪಾಯಿ ಧನ ಸಹಾಯ ಘೋಷಣೆ

ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರಂತೋಡು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜು.09 ರಂದು ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಇದರ ಪುನರ್ ನಿರ್ಮಾಣಕಾಗಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಹಾಗೂ  ಜನಪ್ರತಿನಿಧಿಗಳ ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಆರಂತೋಡು -ತೊಡಿಕಾನ...

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮವು ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ ”ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಆಟಿ ಎನ್ನುವಂತದ್ದು ಹಿಂದೆ ಬಹಳ ಕಷ್ಟಕರವಾದ ದಿನವಾಗಿತ್ತು.  ಇಂತಹ ಕಷ್ಟಕರವಾದ ದಿನಗಳಲ್ಲೂ...

ಬೆಳ್ಳಾರೆ : ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಸ್ವೀಕಾರ ಸಮಾರಂಭ

“ಸಾಮಾಜಿಕ ಸೇವೆಯಿಂದ ಮಾನಸಿಕ ನೆಮ್ಮದಿ” : ಪುರಂದರ ರೈ

“ಇಂಟರ್ಯಾಕ್ಟ್ ಕ್ಲಬ್ ಮೂಲಕ ಮಕ್ಕಳಿಗೆ ಎಳವೆಯಲ್ಲಿಯೇ ಸಾಮಾಜಿಕ ಸೇವೆಯನ್ನು ಕಲಿಸಿಕೊಡಲಾಗುತ್ತದೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಆಲೋಚನೆಗಳು ಬೆಳೆಯಲು ಸಹಕಾರಿಯಾಗುತ್ತದೆ, ಜೊತೆಗೆ ಮಾನಸಿಕ ನೆಮ್ಮದಿಯೂ ಸಿಗುತ್ತದೆ” ಎಂದು ರೋಟರಿ ಕ್ಲಬ್ ನ ಜಿಲ್ಲಾ ಪೂರ್ವ ಸಹಾಯಕ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ...

ದಿವ್ಯ ಪಿ.ಜಿ. ಅವರಿಗೆ ಪದವಿ ಪರೀಕ್ಷೆಯಲ್ಲಿ ಉತ್ತಮ ಅಂಕ

ಮಂಗಳೂರು ಯೂನಿವರ್ಸಿಟಿ ನಡೆಸಿದ 2025 ನೇ ಸಾಲಿನ ಬಿ. ಎ ಅಂತಿಮ ಪರೀಕ್ಷೆಯಲ್ಲಿ ಸುಳ್ಯ ಸ.ಪ್ರ.ದರ್ಜೆ ಕಾಲೇಜು ಕೊಡಿಯಾಲಬೈಲ್ ಇಲ್ಲಿನ ವಿದ್ಯಾರ್ಥಿ ದಿವ್ಯ ಪಿ.ಜಿ. ಶೇಕಡ 88% ಪಡೆದು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ನಾಲ್ಕೂರು ಗ್ರಾಮದ ಸಾಲ್ತಾಡಿ ಪೊಡಿಯಾ ಜಿ. ಮತ್ತು ಗಿರಿಜಾ ಕೆ. ದಂಪತಿಗಳ ಪುತ್ರಿ.
error: Content is protected !!