- Saturday
- March 7th, 2026
ಪೆರಾಜೆ ಕಲ್ಚರ್ಪೆ ಸಮೀಪ ಬೈಕೊಂದು ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಾರ ಐವರ್ನಾಡು ಗ್ರಾಮದ ನಿಡುಬೆ ನಿವಾಸಿ ಗೋಪಿನಾಥ್ ಎಂದು ತಿಳಿದುಬಂದಿದೆ.
ಮಂಗಳೂರು ಜು.02 : “ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ” ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ “ಮಾಧ್ಯಮದ ಸವಾಲುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಇವರು “ಇತ್ತೀಚೆಗೆ...
ಸುಳ್ಯ ನಗರ ಮಹಾ ಯೋಜನೆ ಕುರಿತು ಮಾಸ್ಟರ್ ಪ್ಲಾನ್ ಅನುಷ್ಠಾನ ಬಗ್ಗೆ ಸುಳ್ಯದ ನಾಗರಿಕರ ಸಭೆ ಕರೆದು, ಚರ್ಚೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಪಡೆದು ಸುಳ್ಯದ ನಾಗರಿಕರಿಗೆ ತೊಂದರೆ ಆಗದಂತೆ ಅನುಷ್ಠಾನಗೊಳಿಸಬೇಕು ಎಂಬುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಡಿ.ಎಂ.ಶಾರಿಖ್, ಆಗ್ರಹಿಸಿದ್ದಾರೆ.
“ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಬೇಕು” : ಕು| ಭಾಗೀರಥಿ ಮುರುಳ್ಯ
ಪಂಜ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ
“ನಮ್ಮ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಹಾಗೂ ಆದ್ಯತೆಯನ್ನು ನೀಡುತ್ತಾ ಬಂದಿದ್ದೇವೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಉತ್ತಮ ಆರೋಗ್ಯ ಇರುತ್ತದೆ. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಯೋಜನೆಯಡಿ ಪ್ರತೀ ಮನೆಗಳಿಗೂ ಕಡ್ಡಾಯವಾಗಿ ಶೌಚಾಲಯವನ್ನು ನಿರ್ಮಿಸಲು ಮುಂದಾಗಿದೆ. ಇದರ ಉದ್ದೇಶ ಮನೆಮಂದಿ ಎಲ್ಲೂ ಬಯಲು ಶೌಚಾಲಯಕ್ಕೆ ಹೋಗದೇ ಮನೆಯಲ್ಲಿರುವ ಶೌಚಾಲಯವನ್ನು ಉಪಯೋಗಿಸಿ ಸ್ವಚ್ಛತೆಯೊಂದಿಗೆ ಆರೋಗ್ಯವನ್ನು ಕೂಡ...
ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಹಲವು ಕಡೆಗಳಲ್ಲಿ ಹಾನಿಯಾಗಿದ್ದು, ಅಲ್ಲಲ್ಲಿ ಮರಗಳು ಉರುಳಿ ಬಿದ್ದಿವೆ. ಚೊಕ್ಕಾಡಿ ಶೇಣಿ ಮುಖ್ಯ ರಸ್ತೆಯಲ್ಲಿ ಮರವೊಂದು ಅಡ್ಡಲಾಗಿ ಉರುಳಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ ಲಘು ವಾಹನ ಸಂಚರಿಸುವಷ್ಟು ಮರವನ್ನು ತೆರವುಗೊಳಿಸಲಾಗಿದ್ದು, ಸಂಪೂರ್ಣ ಮರ ತೆರವುಗೊಳಿಸಬೇಕಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪಂಜ ಸಮೀಪದ ಗಾಳಿಕೂಪು ಬಸ್ ನಿಲ್ದಾಣದ ಬಳಿಯಲ್ಲಿರುವ ಮರವೊಂದು ರಸ್ತೆಗೆ ಉರುಳಿಬಿದ್ದು ಬಸ್ ನಿಲ್ದಾಣ ಹಾನಿಗೊಂಡಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದ್ದು, ಮರ ತೆರವುಗೊಳಿಸಬೇಕಾಗಿದೆ.
ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ಧನಂಜಯ ಬಾಳುಗೋಡು ರವರು ಅಲ್ಪಕಾಲದ ಅಸೌಖ್ಯದಿಂದ ಜು.02 ರಂದು ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು.ಭಾರತೀಯ ಭೂಸೇನೆಯಲ್ಲಿ ಸುಮಾರು 18 ವರ್ಷಗಳ ಕಾಲ ಸೇವೆಗೈದು ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಇವರು ಪ್ರಸ್ತುತ ಮಂಗಳೂರಿನ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದರು.ಮೃತರು ಪತ್ನಿ ನಿವೃತ್ತ ಸಿ.ಆರ್.ಪಿ.ಎಫ್ ಉದ್ಯೋಗಿ ಯಶೋಧ, ಪುತ್ರರಾದ ಸೃಜನ್, ಹಾರ್ದಿಕ್,...
ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 03.07.2025 ರಂದು ರಜೆ ಘೋಷಿಸಿ ಸುಳ್ಯ ತಹಶೀಲ್ದಾರರು ಆದೇಶಿಸಿರುತ್ತಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಕಾಲೇಜು ಮಂತ್ರಿಮಂಡಲದ ಉದ್ಘಾಟನಾ ಕಾರ್ಯಕ್ರಮವು ನೇರವೇರಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಹರೂ ಮೆಮೊರಿಯಲ್ ಕಾಲೇಜು ಸುಳ್ಯ ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಮತಾ.ಕೆ ಇವರು ದೀಪ ಬೆಳಗಿಸುವ ಮೂಲಕ ಮಂತ್ರಿ ಮಂಡಲದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ "ಚುನಾವಣೆಗಳಿಂದ ದೇಶದ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಚುನಾವಣೆಗಳ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶಾದ್ಯಂತ ಇಲ್ಲಿಗೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರುಶನ ಪಡೆದು ಪುನೀತರಾಗುತ್ತಾರೆ. ಈ ಕ್ಷೇತ್ರವು ಆದಾಯದಲ್ಲಿ ಕರ್ನಾಟಕ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದ್ದು, ಆದರೂ ಕೂಡ ಇಲ್ಲಿ ಅಗತ್ಯವಾಗಿ ಬೇಕಾಗಿರುವಂತಹ ಅತೀ ಅವಶ್ಯಕವಾದ ವೈದ್ಯಕೀಯ...
Loading posts...
All posts loaded
No more posts
