Ad Widget

ಸಂಪಾಜೆ : ಓಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯ

ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಗ್ರಾಮ ವಿಕಾಸ ಯೋಜನೆ ಸಂಪಾಜೆ ಘಟ ಸಮಿತಿ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಂಪಾಜೆ, ಯಶಸ್ವಿ ಯುವಕ ಮಂಡಲ, ಸಂಜೀವಿನಿ ಸ್ವಸಹಾಯ ಸಂಘ, ಗಣೇಶೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಕಲ್ಲುಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್ಎಂ.ಎಸ್.ಎ ಪ್ರೌಢ ಶಾಲೆಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...

ಮಂಡೆಕೋಲು : ಗ್ರಾ.ಪಂ. ಹಾಗೂ ಒಡಿಯೂರು ಗ್ರಾಮ ವಿಕಾಸ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಗ್ರಾಮ ಪಂಚಾಯತ್ ಮಂಡೆಕೋಲು & ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಕ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಮಾಜಿ ಅಧ್ಯಕ್ಷರುಗಳಾದ ವಿನುತಾ ಪಾತಿಕಲ್ಲು, ಮೋಹಿನಿ ಮಂಡೆಕೋಲುಬೈಲು, ಹಿರಿಯರಾದ ಜಯರಾಮ್...
Ad Widget

ಜಯರಾಮ ಗೌಡ ಕಟ್ರಮನೆ ನಿಧನ

ಐನೆಕಿದು ಗ್ರಾಮದ ಕಟ್ರಮನೆ ನಿವಾಸಿ ಜಯರಾಮ ಗೌಡ ಕಟ್ರಮನೆಯವರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 52ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಚಂದ್ರಕಲಾ ಮಕ್ಕಳಾದ ಸಿಂಚನ, ಸ್ನೇಹಿತ್ ಮತ್ತು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಅಡ್ತಲೆ : ನಾಗರಿಕ ಹಿತರಕ್ಷಣಾ ವೇದಿಕೆಯ ವಾರ್ಷಿಕ ಮಹಾಸಭೆ – ಅಧ್ಯಕ್ಷರಾಗಿ ಹರಿಪ್ರಸಾದ್ ಅಡ್ತಲೆ, ಕಾರ್ಯದರ್ಶಿಯಾಗಿ  ರಂಜಿತ್ ಅಡ್ತಲೆ ಪುನರಾಯ್ಕೆ

ನಾಗರಿಕ ಹಿತರಕ್ಷಣಾ ವೇದಿಕೆ ಅಡ್ಯಲೆ ಇದರ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.  ಸಭೆಯಲ್ಲಿ ಮುಂದಿನ  ಅವಧಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಅಧ್ಯಕ್ಷರಾಗಿ ಶ್ರೀ ಹರಿಪ್ರಸಾದ್ ಅಡ್ತಲೆ, ಉಪಾಧ್ಯಕ್ಷರಾಗಿ  ವಿನಯ್ ಬೆದ್ರುಪಣೆ, ಲೋಹಿತ್ ಮೇಲಡ್ತಲೆ,ಶ್ರೀ ಸ್ವಾತಿಕ್ ಕಿರ್ಲಾಯ, ಜೊತೆ ಕಾರ್ಯದರ್ಶಿಯಾಗಿ  ಮೋಹನ ಕಿನಾಲ , ಖಜಾಂಜಿಯಾಗಿ  ಶಶಿಕುಮಾರ್ ಉಳುವಾರು ಆಯ್ಕೆಗೊಂಡರು. ನೂತನ...

ಅಡ್ತಲೆ : ಸ್ಪಂದನ ಗೆಳೆಯರ ಬಳಗದ ಆಶ್ರಯದಲ್ಲಿ (ಆ.17) ಶ್ರೀಕೃಷ್ಣ ಜನ್ಮಾಷ್ಠಮಿ – ಇಂದು ಆಮಂತ್ರಣ ಬಿಡುಗಡೆ

ಸ್ಪಂದನ ಗೆಳೆಯರ ಬಳಗ(ರಿ) ಅಡ್ತಲೆ ಇವರ ಆಶ್ರಯದಲ್ಲಿ ಆ. 17 ಆದಿತ್ಯವಾರದಂದು  7 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ‌ ಸ್ಪರ್ಧೆ ನಡೆಯಲಿದ್ದು,  ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ನಡೆಯಿತು. ಊರ ಹಿರಿಯರಾದ ವೆಂಕಪ್ಪ ಗೌಡ ಮೇಲಡ್ತಲೆ  ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ  ವಿನಯ್...

ಮಡಪ್ಪಾಡಿ : ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಡಪ್ಪಾಡಿ ಘಟಕ ಸಮಿತಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಬಲ್ಕಜೆ, ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಮಡಪ್ಪಾಡಿ ಅಕ್ಷಯ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಬಲ್ಕಜೆ ಬಸ್ ನಿಲ್ದಾಣದ ಬಳಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.

ಓಡಿಯೂರು ಶ್ರೀಗಳ ಜನ್ಮದಿನೊತ್ಸವ ಮತ್ತು ಗ್ರಾಮೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಓಡಿಯೂರು ಶ್ರೀಗಳ ಜನ್ಮದಿನೊತ್ಸವ ಮತ್ತು ಗ್ರಾಮೋತ್ಸವದ ಅಂಗವಾಗಿ  ಓಡಿಯೂರು ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘ ಸುಳ್ಯ ಶಾಖೆ, ಜೈ ಗುರುದೇವ ಸೇವಾ ಬಳಗ ಸುಳ್ಯ, ಎಂ.ಸಿ.ಸಿ ಕ್ಲಬ್ ಸುಳ್ಯ ಇದರ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ ಜೂನಿಯರ್ ಕಾಲೇಜ್ ಮೈದಾನದ ಪರಿಸರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಹಕಾರಿಯ ನಿರ್ದೇಶಕರಾದ ಶ್ರೀಮತಿ ಶಾರದಾ ಮಣಿ ಎಸ್ ರೈ, ಸೇವಾ...

ಎಸ್.ಕೆ.ಎಸ್.ಎಸ್.ಎಫ್. ಕಲ್ಲುಗುಂಡಿ ಶಾಖೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಎಸ್.ಕೆ.ಎಸ್.ಎಸ್.ಎಫ್. ಕಲ್ಲುಗುಂಡಿ ಶಾಖೆಯ ವತಿಯಿಂದ ಕಲ್ಲುಗುಂಡಿ ಪೇಟೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಂ.ಶಹಿದ್ ತೆಕ್ಕಿಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ ಹನೀಫ್ ಮಾಜಿ ಅಧ್ಯಕ್ಷರಾದ ಜಿ ಕೆ. ಹಮೀದ್ ಗೂನಡ್ಕ, ಜಗದೀಶ್ ರೈ,...

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರಿಗೆ ಉಲ್ಲಾಸ್ ಕಜ್ಜೋಡಿ ರವರ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನದ ಗೌರವ ಪ್ರತಿ ಹಸ್ತಾಂತರ

ಗೌರವ ಪ್ರತಿ ಹಸ್ತಾಂತರಿಸಿದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು

ಬರಹಗಾರರು ಹಾಗೂ ಅಮರ ಸುದ್ದಿ ವಾರಪತ್ರಿಕೆಯ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ರವರ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನದ ಗೌರವ ಪ್ರತಿಯನ್ನು ಆಗಸ್ಟ್ 02 ರಂದು ಸುಳ್ಯದ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆದ “ಸಿಂಧೂರ ವಿಜಯ” ಸಂವಾದ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ...

ಸುಬ್ರಹ್ಮಣ್ಯ: ವರಮಹಾಲಕ್ಷ್ಮೀ ಪೂಜಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಶೀಲಾ ಗಣೇಶ್ ಆಯ್ಕೆ

ಸುಬ್ರಹ್ಮಣ್ಯ : ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಸುಬ್ರಹ್ಮಣ್ಯ ಇದರ 2025ನೇ ಸಾಲಿನ ನೂತನ ಅಧ್ಯಕ್ಷರಾಗಿ ಶೀಲಾ ಗಣೇಶ್ ಆಯ್ಕೆಯಾಗಿದ್ದಾರೆ.  ಕಾರ್ಯದರ್ಶಿಯಾಗಿ ಸುಭಾಷಿಣಿ ಶಿವರಾಮ್ ಮತ್ತು ಕೋಶಾಧಿಕಾರಿಯಾಗಿ ತ್ರಿವೇಣಿ ದಾಮ್ಲೆ ನೇಮಕಗೊಂಡಿದ್ದಾರೆ. 2024ನೇ ಸಾಲಿನ ಸಮಿತಿ ಅಧ್ಯಕ್ಷೆ ಪೂಜಾ ಕಲ್ಲೂರಾಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಾರದಾ...
Loading posts...

All posts loaded

No more posts

error: Content is protected !!