Ad Widget

ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜೆ

ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಆ.08ರಂದು ವರಮಹಾಲಕ್ಷ್ಮೀ ಪೂಜೆ ನಡೆಯಿತು. ವಿದ್ಯಾನಿಕೇತನ ಶಿಶುಮಂದಿರದ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಊರಿನ ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿದ್ದರು.

ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನಲ್ಲಿ ಹರಿದ್ವರ್ಣ ಕಿರುಚಿತ್ರ ಪ್ರದರ್ಶನ

ಸುಬ್ರಹ್ಮಣ್ಯ ಆಗಸ್ಟ್ 9 : ತಸ್ವಿ  ಹಸಿರು ದಿಬ್ಬಣ ಸಂಸ್ಥೆ ರಾಮಕುಂಜ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕಾಲೇಜಿನಲ್ಲಿ ಶನಿವಾರ ಪರಿಸರದ ಬಗ್ಗೆ ಇರುವ ಕಿರುಚಿತ್ರ ಹರಿದ್ವರ್ಣ ವನ್ನ ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಪ್ರಾಯೋಜಕರಾದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆಪದವು ಅವರು ತುಳಸಿ ಗಿಡಕ್ಕೆ ನೀರು ಎರೆಯುವುದರ ಮೂಲಕ...
Ad Widget

ಸುಳ್ಯ : ಆಟೋ ರಿಕ್ಷಾ ಚಾಲಕರ ಸಂಘದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

ಸುಳ್ಳ ತಾಲೂಕು ಆಟೋರಿಕ್ಷಾ ಚಾಲಕರ ಸಂಘ ಬಿ.ಎಂ.ಎಸ್ ಸಂಯೋಜಿತ ಇದರ ಇದರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಪುರೋಹಿತ್ ನಾಗರಾಜ್ ಭಟ್   ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ರಕ್ಷಾಬಂಧನದ ಮಹತ್ವವನ್ನು ವಿವರಿಸಿದರು.  ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ನ ಅಧ್ಯಕ್ಷ ಪಿ.ಗೋಪಾಲಕೃಷ್ಣ ಭಟ್ ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ತಾಲೂಕು ಆಟೋ...

ಸುಬ್ರಹ್ಮಣ್ಯ : ಆಟೋರಿಕ್ಷಾ ಚಾಲಕರ ಸಂಘದ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ

ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘದ(ಬಿ.ಎಂ.ಎಸ್ ಸಂಯೋಜಿತ) ಸುಬ್ರಹ್ಮಣ್ಯ ಘಟಕದ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಆ.09 ರಂದು ನಡೆಯಿತು. ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಇಂಜಾಡಿ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಘಟಕದ ಅಧ್ಯಕ್ಷರಾದ ಸುಬ್ಬಪ್ಪ ಕುಲ್ಕುಂದ, ಕಾರ್ಯದರ್ಶಿ...

ಅಡ್ಡನಪಾರೆ : ರಕ್ಷಾಬಂಧನ ಕಾರ್ಯಕ್ರಮ

ರಾಷ್ಟ್ರೀಯ ಸ್ವಯಂ ಸೇವಿಕಾ ಸಮಿತಿ ಅಡ್ಡನಪಾರೆ ಇದರ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಆ.09 ರಂದು ನಡೆಯಿತು. ಅನಿತಾ ನವೀನ್ ಪೈಕ ಬೌದ್ಧಿಕ್ ನೀಡಿ ರಕ್ಷಾ ಬಂಧನದ ಮಹತ್ವ ವಿವರಿಸಿದರು. ಧರ್ಮದ ರಕ್ಷಣೆಯ ಬಗ್ಗೆ ಹಿರಿಯರ ಕೊಡುಗೆಗಳ ನೆನಪಿಸಿದರು. ಶೋಭಾವತಿ ಅಡ್ಡನಪಾರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪರಸ್ಪರ ರಾಖಿ ಕಟ್ಟಿ ಶುಭಹಾರೈಸಿದರು.ರಾಷ್ಟ್ರೀಯ ಸ್ವಯಂ ಸೇವಿಕಾ ಸಮಿತಿಯ ಸಂಘಟನೆಗಾಗಿ...

ಅರಂಬೂರು : 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಹಾಗೂ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅರಂಬೂರು, ಶ್ರೀ ಮೂಕಾಂಬಿಕಾ ಭಜನಾ ಮಂದಿರ ಅರಂಬೂರು ಇದರ ಸಹಯೋಗದೊಂದಿಗೆ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಶುಭಾಶಿರ್ವಾದಗಳೊಂದಿಗೆ ಹಾಗೂ ಪುರೋಹಿತ ಅಭಿರಾಮ್ ಭಟ್ ಸರಳಿಕುಂಜರ ನೇತೃತ್ವದಲ್ಲಿ ಅರಂಬೂರು ಶ್ರೀ ಗೋಪಾಲಕೃಷ್ಣ...

ಕೊಲ್ಲಮೊಗ್ರು : ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಟವರ್ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು ; ಗ್ರಾಮಸ್ಥರಿಂದಲೇ ಹೊಸ ಬ್ಯಾಟರಿ ಅಳವಡಿಕೆ

(ವರದಿ : ಉಲ್ಲಾಸ್ ಕಜ್ಜೋಡಿ)ಕಳೆದ ಕೆಲವು ಸಮಯಗಳಿಂದ ಕೊಲ್ಲಮೊಗ್ರು ಗ್ರಾಮದಲ್ಲಿರುವ ಬಿ.ಎಸ್.ಎನ್.ಎಲ್ ಟವರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ, ಪರಿಣಾಮವಾಗಿ ಗ್ರಾಮಸ್ಥರಿಗೆ ನೆಟ್ ವರ್ಕ್ ಸಮಸ್ಯೆ ಉಂಟಾಗುತ್ತಿತ್ತು. ನೆಟ್ ವರ್ಕ್ ಸಮಸ್ಯೆಯನ್ನು ಸರಿಪಡಿಸಲು ಜನರೇಟರ್ ಗೆ ಬ್ಯಾಟರಿ ಅಳವಡಿಕೆ ಮಾಡಬೇಕಾಗಿತ್ತು. ಈ ಬಗ್ಗೆ ಸಂಬಂಧಪಟ್ಟ ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ತಿಳಿಸಿದರೂ ಕೂಡ ಅವರು ಹೊಸ ಬ್ಯಾಟರಿ ಅಳವಡಿಕೆ ಮಾಡಲಿಲ್ಲ ಎಂದು...

ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ.ಶ್ರೀಲತಾ ಕಮಿಲ ಆಯ್ಕೆ

ಮಂಗಳೂರು ವಿಶ್ವವಿದ್ಯಾನಿಲಯದ 2025-26ನೇ ಸಾಲಿನ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ.ಶ್ರೀಲತಾ ಕಮಿಲ ಆಯ್ಕೆಯಾಗಿರುತ್ತಾರೆ. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ  ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಯುವಕನ ತುರ್ತು ಚಿಕಿತ್ಸೆಗೆ ಬೇಕಿದೆ ನೆರವಿನ ಹಸ್ತ

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಯುವಕನ ತುರ್ತು ಚಿಕಿತ್ಸೆಗೆ ಸಾರ್ವಜನಿಕರ ಸಹಾಯಹಸ್ತ ಬೇಕಿದೆ. ಅರಂತೋಡು ಗ್ರಾಮದ ಕಿರ್ಲಾಯ ಎಂಬಲ್ಲಿ ವಾಸವಿರುವ ಲೋಲಜಾಕ್ಷ.ಎ.ಕೆ ಮೇಲಡ್ತಲೆ ಅವರಿಗೆ ಆ.05 ರಂದು ಮಿದುಳಿನ ರಕ್ತಸ್ರಾವದಿಂದಾಗಿ ಪ್ರಜ್ಞೆ ಕಳೆದುಕೊಂಡು ಮಂಗಳೂರಿನ ಯೇನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಹೆಚ್ಚಿನ ಚಿಕೆತ್ಸೆಗೆ ತಕ್ಷಣಕ್ಕೆ ಐದು ಲಕ್ಷ ರೂಪಾಯಿಗಳ ಅವಶ್ಯಕತೆ ಇರುತ್ತದೆ ಎಂದು ವೈದ್ಯರು ತಿಳಿಸಿರುತ್ತಾರೆ. ಕೂಲಿ...
error: Content is protected !!