Ad Widget

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ನಶೆಮುಕ್ತ ಭಾರತ ಅಭಿಯಾನ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.13ರಂದು ಕಾಲೇಜಿನ ಎನ್.ಎಸ್.ಎಸ್ ಘಟಕವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕದ ಸಹಯೋಗದೊಂದಿಗೆ ನಶಮುಕ್ತ ಭಾರತ ಅಭಿಯಾನವನ್ನು ನಡೆಸಲಾಯಿತು.ಈ ಕಾರ್ಯಕ್ರಮದ ಪ್ರಯುಕ್ತ ಜನಜಾಗೃತಿ ಜಾಥಾ ಮತ್ತು ಮಾನವ ಸರಪಳಿಯನ್ನು ಸುಳ್ಯ ನಗರದಲ್ಲಿ ದಿನಾಂಕ ಆ.11 ರಂದು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ನಶಮುಕ್ತ ಭಾರತದ ಸಾಮೂಹಿಕ...

ಸಂಪಾಜೆ : ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಮಟ್ಟದ ಎಲ್ಲಾ ಸಂಘಟನೆ, ದಾರ್ಮಿಕ ಮುಖಂಡರು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಅಧಿಕಾರಿಗಳು, ಜನಪ್ರತಿನಿಧಿಗಳು, ವರ್ತಕರು, ಯುವಕ ಮಂಡಲ, ಸಂಜೀವಿನಿ ಯೋಜನೆ ಒಕ್ಕೂಟ, ಆಟೋ ಚಾಲಕ-ಮಾಲಕರು, ಲಯನ್ಸ್ ಕ್ಲಬ್, ಊರ ನಾಗರಿಕರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲಾ...
Ad Widget

ಬೆಳ್ಳಾರೆ :  ಗ್ರಂಥ ಪಾಲಕರ ದಿನಾಚರಣೆ

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಗ್ರಂಥ ಪಾಲಕರ ದಿನಾಚರಣೆ ಆಗಸ್ಟ್ 12 ರಂದು ಜರುಗಿತು.ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್.ರೈ ಇವರು ಕಾರ್ಯಕ್ರಮ ಉದ್ಘಾಟಿಸಿದರು.ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀ ಪಿ.ಎನ್.ಭಟ್ ಜ್ಞಾನದೀಪ ವಿದ್ಯಾಸಂಸ್ಥೆಯ ಶಿಕ್ಷಕಿ ಶ್ರೀಮತಿ ಗೀತಾ ಬಾಲಚಂದ್ರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ...

ಸುಳ್ಯ ನಗರ ಮಹಿಳಾ ಗೌಡ ಘಟಕದ ವತಿಯಿಂದ ನಿವೃತ್ತ ಶಿಕ್ಷಕಿ ಶ್ರೀಮತಿ ಪ್ರೇಮಾವತಿ.ಸಿ ಯವರಿಗೆ ಗೌರವ

ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪ್ರೇಮಾವತಿ.ಸಿ ಯವರು ಜು.31ರಂದು ತಮ್ಮ 28 ವರ್ಷಗಳ ಶಿಕ್ಷಕ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸುಳ್ಯ ನಗರ ಮಹಿಳಾ ಗೌಡ ಘಟಕದ ಸದಸ್ಯರು ಆ.13 ರಂದು ಅವರ ಮನೆಗೆ ತೆರಳಿ ಶಾಲು, ಪೇಟ, ಫಲ ಪುಷ್ಪ ನೀಡಿ ಗೌರವ ಸಲ್ಲಿಸಿದರು. ಶಿಕ್ಷಕಿ ಪ್ರೇಮಾವತಿ ಟೀಚರ್‌...

ಮರ್ಕಂಜ : ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರಮದಾನ

ಮರ್ಕಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.14 ರಂದು ಪಂಚಶ್ರೀ ಸಂಜೀವಿನಿ ಒಕ್ಕೂಟದ ವತಿಯಿಂದ ಶ್ರಮದಾನ ನಡೆಯಿತು.ಈ ಶ್ರಮದಾನದಲ್ಲಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಎಂ.ಬಿ.ಕೆ, ಎಲ್.ಸಿ.ಆರ್.ಪಿ ಗಳು, ಕೃಷಿ ಸಖಿ, ಪಶು ಸಖಿ ಅವರುಗಳು ಭಾಗವಹಿಸಿ ಶಾಲಾ ಆವರಣದ ಮುಂಬಾಗದಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಭಾಗವಹಿಸಿ ತರಕಾರಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು.ಶಾಲಾ...

ಆ.17 ರಂದು ಅಡ್ತಲೆಯಲ್ಲಿ 7ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ‌ ಸ್ಪರ್ಧೆ

ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಇವರ ಆಶ್ರಯದಲ್ಲಿ ಆ.17ನೇ ಆದಿತ್ಯವಾರದಂದು ಅಡ್ತಲೆ ಶಾಲಾ ವಠಾರದಲ್ಲಿ 7ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ‌ ಸ್ಪರ್ಧೆಯು ನಡೆಯಲಿದೆ. ಪುಟಾಣಿಗಳಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ ವಿವಿಧ ಕ್ರೀಡಾ ಹಾಗೂ ಮನರಂಜನಾ ಸ್ಪರ್ಧೆಗಳು ನಡೆಯಲಿವೆ.ಕಾರ್ಯಕ್ರಮವನ್ನು ಅಡ್ತಲೆ- ಬೆದ್ರುಪಣೆ ಉಳ್ಳಾಕುಲು ಹಾಗೂ ಮಲೆ ದೈವಗಳ...

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ “ನಮ್ಮ ನಡೆ-ಪ್ಲಾಸ್ಟಿಕ್ ಮುಕ್ತದೆಡೆಗೆ” ಅಭಿಯಾನಕ್ಕೆ ಚಾಲನೆ

ಪಂಜ: "ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗುವುದು. ಅಲ್ಲದೆ ಈ ಮೂಲಕ 'ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆಗೆ' ಅಭಿಯಾನಕ್ಕೆ ಪುಣ್ಯಕ್ಷೇತ್ರದಲ್ಲಿ ಚಾಲನೆ ನೀಡಲಾಗುವುದು. ಸಾರ್ವಜನಿಕರು ಸರ್ವರೀತಿಯ ಸಹಕಾರ ನೀಡಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ...

ಬೆಳ್ಳಾರೆ : ಕೊಳಂಬಳ-ಚಾಕಟ್ಟೆಮಜಲು ರಸ್ತೆ ಕಾಂಕ್ರಿಟೀಕರಣ

ಬೆಳ್ಳಾರೆ ಗ್ರಾಮದ ಕೊಳಂಬಳ-ಚಾಕಟ್ಟೆಮಜಲು ರಸ್ತೆ ಕಾಂಕ್ರಿಟೀಕರಣಗೊಂಡಿತು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿಯವರ 4 ಲಕ್ಷ ಅನುದಾನ ಮತ್ತು ಸುಳ್ಯ ತಾಲೂಕು ಪಂಚಾಯತಿನ 2 ಲಕ್ಷ ಅನುದಾನ ಸೇರಿದಂತೆ ಒಟ್ಟು 6 ಲಕ್ಷ ಕೂಡಿ ಬಂದು ಈ ರಸ್ತೆಯು ಕಾಂಕ್ರಿಟೀಕರಣ ಕಂಡಿತು. ಈ ಅನುದಾನಗಳ ಬಿಡುಗಡೆಗಾಗಿ ಅನಿಲ್ ರೈ ಚಾವಡಿಬಾಗಿಲು ಬೆಳ್ಳಾರೆ ಹಾಗೂ ಹಮೀದ್ ಹೆಚ್.ಎಂ.ಬೆಳ್ಳಾರೆ...

ಬಾಳಿಲ : ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವುಗಳ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ 17 ವಯೋಮಾನದ ವಿಭಾಗದಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ನಿಶಾಲ್ ಭಾಸ್ಕರ್ ದ್ವಿತೀಯ ಸ್ಥಾನ, ಆಸಿಯತ್ ಶಮ್ನ ಎಂ ದ್ವಿತೀಯ ಸ್ಥಾನ, ವಸಂತ ಮಾಧವ ಭಟ್ 5ನೇ ಸ್ಥಾನ...
error: Content is protected !!