Ad Widget

ಅಡ್ತಲೆ : ಕೆ.ವಿ.ಜಿ ಪಾಲಿಟೆಕ್ನಿಕ್ ನ  ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ – ಬಿ.ಎಸ್.ಎಫ್ ಗೆ  ಆಯ್ಕೆಯಾದ ಕು‌.ಸುಶ್ಮಿತಾ ಅವರಿಗೆ ಸನ್ಮಾನ

ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ದಿನದ ಶಿಬಿರ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ, ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಆಶ್ರಯದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಇವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ ಇಂದು ಅಡ್ತಲೆ...

ಬೆಳ್ಳಾರೆ : ಸಡಗರ ಸಂಭ್ರಮದ ಈದ್ ಮೀಲಾದ್ ಆಚರಣೆ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಬಹ್ಜತು ತುಲಬಾ ದರ್ಸೀನ ವಿದ್ಯಾರ್ಥಿಗಳು, ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದರಸ, ಹಿದಾಯ ಅರೆಬಿಕ್ ಮದರಸಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಿವಿಧ ಸ್ಪರ್ಧೆಗಳು, ಅನ್ನದಾನ, ಬಹುಮಾನ ವಿತರಣೆ, ದಫ್ , ಸ್ಕೌಟ್ ಪ್ರದರ್ಶನ ಅತ್ಯಾಕರ್ಷಕ ಮೆರವಣಿಗೆ, ಮೌಲೀದ್ ಪಾರಾಯಣ ಹಾಗೂ ಭೋಜನಕೂಟದೊಂದಿಗೆ 3 ದಿನಗಳ ದ ಅಲ್ ಮವಾಹಿಬ್ ಟ್ಯಾಲೆಂಟ್...
Ad Widget

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿವೃತ್ತ ಹಿರಿಯ ಶಿಕ್ಷಕ, ಸಾಹಿತಿ, ಕಲಾವಿದರಿಗೆ ಸನ್ಮಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಳೆದೆರಡು ವರ್ಷಗಳಿಂದ ಶಿಕ್ಷಕರ ದಿನಾಚರಣೆಯಂದು ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡು ನಿವೃತ್ತರಾದ ಹಿರಿಯ ಶಿಕ್ಷಕರನ್ನು ಗುರುತಿಸಿ ಗೌರವಿಸುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಇಂದು ಸೆ.5 ರಂದು ಇಬ್ಬರು ಹಿರಿಯ ನಿವೃತ್ತ ಶಿಕ್ಷಕ ಸಾಹಿತಿ ಕಲಾವಿದರನ್ನು ಅವರ ನಿವಾಸದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.ಪೂರ್ವಾಹ್ನ 8.30ಗಂಟೆಗೆ ಜಿಜ್ಞಾಸು ಎಂಬ ಕಾವ್ಯ...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ – ಪ್ರಶಸ್ತಿ ಸ್ವೀಕರಿಸಿದ ಮೋಹನ್ ಎ., ಶ್ರೀಧರ್ ಗೌಡ ಕೆ. ಹಾಗೂ ಲಲಿತ ಕುಮಾರಿ

ಶ್ರಮ, ಕರ್ತವ್ಯ ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಸಂದ ಗೌರವ, ಶಿಕ್ಷಕರೇ ಶಿಕ್ಷಣದ ಆಸ್ತಿ - ಎಸ್.ಎಲ್. ಭೋಜೇಗೌಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಬೆಳ್ತಂಗಡಿ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ವತಿಯಿಂದ ಡಾ....

ಅರಂತೋಡು : ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ – ಶಿಕ್ಷಕರಿಗೆ ಸನ್ಮಾನ

ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಸೆ.05 ರಂದು ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್‌ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ಚೊಕ್ಕಾಡಿ ದಿಕ್ಕೂಚಿ ಭಾಷಣ ಮಾಡಿದರು....

ಮಲೆನಾಡು ಚಾರಿಟೇಬಲ್‌ ಟ್ರಸ್ಟ್ ನಿಂದ ಸುಳ್ಯದ ಐವರು ಶಿಕ್ಷಕರಿಗೆ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿ

ಸುಳ್ಯದ ಮಲೆನಾಡು ಚಾರಿಟೇಬಲ್‌ ಟ್ರಸ್ಟ್  ಪ್ರತಿ ವರ್ಷದಂತೆ ಈ ಬಾರಿ ಕೂಡ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯದ 5 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದೆ. ಈ 'ಮಲೆನಾಡ ಸಿರಿ' ಶಿಕ್ಷಕ ಪ್ರಶಸ್ತಿ 2025 ಪ್ರದಾನ ಸಮಾರಂಭ ಸೆ.06 ರಂದು ನಡೆಯಲಿದೆ.ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್...

ಪಂಜ : ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಶಾರದೋತ್ಸವ ಸಮಿತಿ -2025 ಇದರ ವತಿಯಿಂದ ಪಂಜ ಪರಿಸರದ ನಾಡ ಹಬ್ಬ 16ನೇ ವರುಷದ ಶಾರದೋತ್ಸವ ಅ.1 ರಂದು ವಿಜೃಂಭಣೆಯಿಂದ ಜರುಗಲಿದೆ.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.4 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.ಶಾರದೋತ್ಸವ ಸಮಿತಿ ಪೂರ್ವಾಧ್ಯಕ್ಷ ಕೆ.ಕೃಷ್ಣ ವೈಲಾಯ ಆಮಂತ್ರಣ ಪತ್ರಿಕೆ...

ರವಿ ಕಕ್ಕೆಪದವು ರವರ ಪುತ್ರ ಗಣೇಶ್ ಕಕ್ಕೆಪದವು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ; ರಾಜ್ಯ ಮಟ್ಟಕ್ಕೆ ಆಯ್ಕೆ

ಸುಬ್ರಹ್ಮಣ್ಯದ ರವಿ ಕಕ್ಕೆಪದವು ಹಾಗೂ ಶ್ರೀಮತಿ ಗೀತಾ ರವಿ ಕಕ್ಕೆಪದವು ದಂಪತಿಗಳ ಪುತ್ರ ಗಣೇಶ್ ಕಕ್ಕೆಪದವು ರವರು ಪದವಿಪೂರ್ವ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸುರತ್ಕಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜನ್ನು ಪ್ರತಿನಿಧಿಸಿದ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.(ವರದಿ : ಉಲ್ಲಾಸ್...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ದೇವಚಳ್ಳ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ ಕೆರೆಮೂಲೆ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಬೆಂಡೋಡಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಲಲಿತಾ ಕುಮಾರಿ

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ಬೆಂಡೋಡಿ ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ನಡೆಯಿತು....
Loading posts...

All posts loaded

No more posts

error: Content is protected !!