Ad Widget

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್‌ ಸ್ವರ್ಣ ಹಬ್ಬ ಚಿನ್ನಾಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ಅ.18 ರಿಂದ 22ರ ವರೆಗೆ ನಡೆಯಲಿರುವುದು.
ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ.
ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ.
ಷರತ್ತುಗಳ ಅನ್ವಯದೊಂದಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ.400/- ರವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ7,000/- ರವರೆಗೆ ರಿಯಾಯಿತಿ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಪ್ರತಿ ಕೆಜಿಗೆ ರೂ.3,000/- ಫ್ಲ್ಯಾಟ್ ಡಿಸ್ಕೌಂಟ್ ನೀಡಲಾಗುವುದು.
ರೂ.50,000/- ಮೇಲ್ಪಟ್ಟ ಖರೀದಿಗೆ ಖಚಿತ ಉಡುಗೊರೆಯ ಕೂಪನ್ ಹಾಗೂ ಆಕರ್ಷಕ ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶವಿದೆ.
916 ಅಥವಾ ಬೇರೆ ಯಾವುದೇ ಶುದ್ಧತೆಯ ಆಭರಣವನ್ನು ವಿನಿಮಯ ಮಾಡಿಕೊಳ್ಳುವಾಗ, ಚಿನ್ನದ ದರ ಏರಿಕೆಯ ಲಾಭವನ್ನು ಪಡೆಯಿರಿ ಹಾಗೂ ಚಿನ್ನದ ಬೆಲೆ ಏರಿಕೆಯ ಪರಿಣಾಮವನ್ನು ಈ ಆಫರ್ ಮೂಲಕ ಕಡಿಮೆ ಮಾಡಿಕೊಳ್ಳಲು ಇದು ಒಂದು ಸುವರ್ಣಾವಕಾಶವಾಗಿದೆ.
ದಿನದಿಂದ ದಿನಕ್ಕೆ ಏರುವ ಚಿನ್ನದ ದರವನ್ನು ಸರಾಸರಿ ಮಾಡುವ ಸ್ವರ್ಣಧಾರ ಚಿನ್ನದ ಹೂಡಿಕೆ ಯೋಜನೆಯಲ್ಲಿ ಈಗ ಸೇರಿದವರಿಗೆ ದೀಪಾವಳಿ ಸಮಯದಲ್ಲಿ ತಮ್ಮ ನೆಚ್ಚಿನ ಆಭರಣವನ್ನು ಕೊಳ್ಳಲು ಈ ಯೋಜನೆಯು ಒಂದು ಸುವರ್ಣಾವಕಾಶ ಮಾಡಿಕೊಡುತ್ತದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ ಹಾಗೂ ಈ ಜಿ.ಎಲ್. ಸ್ವರ್ಣ ಹಬ್ಬ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading