- Saturday
- March 7th, 2026
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ರಬ್ಬರ್ ಬೆಳೆಗಾರರ ಹಾಗೂ ಉತ್ಪಾದಕರ ಸಂಘದ ಪದಾಧಿಕಾರಿಗಳ ಆಯ್ಕೆ ಶನಿವಾರ ಗ್ರಾಮದ ಅರಿವು ಕೇಂದ್ರದಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷರಾಗಿ ಗಣೇಶ್ ಮಾವಂಜಿ ಹಾಗೂ ಕಾರ್ಯದರ್ಶಿಗಳಾಗಿ ಮುರಳೀಧರ ರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಲ್ಲದೆ ಉಪಾಧ್ಯಕ್ಷರಾಗಿ ರಾಮಚಂದ್ರ ಯದುಗಿರಿ, ಜತೆಕಾರ್ಯದರ್ಶಿಯಾಗಿ ಶಶಿಧರ ಮಾವಜಿ, ಕೋಶಾಧಿಕಾರಿಯಾಗಿ ಭಾರತಿ ಉಗ್ರಾಣಿಮನೆ ಆಯ್ಕೆಯಾದರು....
