- Saturday
- March 7th, 2026
ಕರ್ನಾಟಕ ಸರ್ಕಾರ ಅತ್ಯುತ್ತಮ ಸಹಕಾರಿಗಳಿಗೆ ನೀಡುವ ಸಹಕಾರ ರತ್ನ ರಾಜ್ಯ ಮಟ್ಟದ ಪ್ರಶಸ್ತಿ ಗೆ ಭಾಜಾನರಾದ ಸುಳ್ಯದ ಹಿರಿಯ ಸಹಕಾರಿ ಧುರೀಣ ಪಿ.ಸಿ ಜಯರಾಂ ರವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ ಸನ್ಮಾನಿಸಿದರು.ಅಭಿನಂದಿಸಿದ ಕೆ.ಎಂ. ಮುಸ್ತಫ ರವರು ಮಾತನಾಡಿ “32 ವರ್ಷಗಳ ಸುಧೀರ್ಘ ಅವಧಿಗೆ ಮಡಪ್ಪಾಡಿ ವ್ಯವಸಾಯ ಸೇವಾ ಸಹಕಾರಿ...
“ಓದುವಿಕೆಯಿಂದ ಮಾತ್ರ ಜ್ಞಾನ ವೃದ್ಧಿಸಿಕೊಳ್ಳಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲೂ ಗ್ರಂಥಾಲಯ ನಿರ್ಮಿಸುವ ಮೂಲಕ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕನಿಷ್ಠ ಒಂದು ಪುಸ್ತಕವಾದರೂ ಓದುವ ಕೆಲಸವಾಗಬೇಕು” ಎಂದು ಹಿರಿಯ ಸಾಹಿತಿ,ನಿವೃತ್ತ ಪ್ರಾಂಶುಪಾಲ ಡಾ| ಪ್ರಭಾಕರ ಶಿಶಿಲ ಹೇಳಿದರು. ಅವರು ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
ಕೊಲ್ಲಮೊಗ್ರ ಗ್ರಾಮದ ಶಿವಾಲ ಎಂಬಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ನ.19 ರಂದು ವರದಿಯಾಗಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಾಗೂ ಭರತ್ ಶಿವಾಲ ಎಂಬವರಿಗೆ ಹಲವು ಸಮಯಗಳಿಂದ ಜಾಗದ ತಕರಾರು ನಡೆಯುತ್ತಿತ್ತು. ನ.17 ರಂದು ಭರತ್ ಶಿವಾಲ ರಸ್ತೆಯನ್ನು ಅಗಲೀಕರಣಗೊಳಿಸಿದ್ದರು. ನ.19 ರಂದು ವಿಶ್ವನಾಥ ರೈ ಅವರು...
ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಹಾಗೂ ಅಹವಾಲು ಸ್ವೀಕರಿಸುವ ಸಲುವಾಗಿ ನ.20 ರಂದು ಬಾಳುಗೋಡು, ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ನಡೆದ...
ಸುಬ್ರಹ್ಮಣ್ಯ ನ.19 : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು. ಸಾಲು ಸಾಲು ಹಣತೆ ದೀಪಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವವು ಭಕ್ತಿ-ಸಡಗರದಿಂದ ನಡೆಯಿತು. ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ಶ್ರೀ ದೇವಳದ ಅರ್ಚಕರು ಉತ್ಸವದ ವಿದಿ...
ಬೆಳ್ಳಾರೆ ಗ್ರಾಮದ ಗೌರಿಹೊಳೆಯ ಹತ್ತಿರ ನಿವಾಸಿಯಾದ ಶ್ರೀಮತಿ ಕುಂಞಿಯವರು ನ 21ರಂದು ಬೆಳಿಗ್ಗೆ ನಿಧನರಾದರು.ಇವರಿಗೆ 100 ವರುಷ ಪ್ರಾಯವಾಗಿತ್ತು.ಇವರ ಪುತ್ರ ಬ್ಯಾಂಕ್ ಆಫ್ ಬರೋಡ ದೊಡ್ಡತೋಟ ಶಾಖೆಯಲ್ಲಿ ಉದ್ಯೋಗಿಯಾಗಿರುವ ಕುಶಲ ಸೇರಿದಂತೆ ಮೂರು ಗಂಡು, ಎರಡು ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ.
ನವೆಂಬರ್ 20 ರಂದು ಹಾವೇರಿಯಲ್ಲಿ ನಡೆದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಪದವಿಪೂರ್ವ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ–ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕ್ಷಮಾ ತೃತೀಯ ಸ್ಥಾನ ಗಳಿಸಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ.ಅಜ್ಜಾವರ ಗ್ರಾಮದ ಶ್ರೀ ತೀರ್ಥರಾಮ ಮುಡೂರು ಮತ್ತು ಶ್ರೀಮತಿ ಪೂರ್ಣಿಮಾ ಎ.ಜೆ...
ಕುಕ್ಕೆ ಸುಬ್ರಹ್ಮಣ್ಯ ಲಕ್ಷದೀಪೋತ್ಸವದಂದು ಕಳೆದ ಹಲವಾರು ವರ್ಷಗಳಿಂದ ತಬಲ, ಹಾರ್ಮೋನಿಯಂ, ಯಕ್ಷಗಾನ ತರಬೇತಿ ನೀಡುತ್ತಿರುವ ಗಣೇಶ ಪರ್ವತಮುಖಿ ಅವರನ್ನು ಸನ್ಮಾನಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಸನ್ಮಾನ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸದ್ಯರು ಹಾಗೂ ಮಾಸ್ಟರ್ ಪ್ಲಾನರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
