Ad Widget

ನಾಳೆ(ನ.29) ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನ.29 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 6:00 ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು...

ಚೊಕ್ಕಾಡಿ : ಮಯೂರಿ ಯುವತಿ ಮಂಡಲದ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಆಂದೋಲನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು  ಅಜ್ಜನಗದ್ದೆ ಶಾಲೆಯ ವಠಾರದಲ್ಲಿ ಕಾಡು ಕಡಿದು ತೆರೆಯುವ ಮೂಲಕ ಹಾಗೂ  ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಮಾಡುವ ಮೂಲಕ ನಡೆಸಲಾಯಿತು.ಯುವತಿ ಮಂಡಲದ ಅಧ್ಯಕ್ಷರು ಹೇಮಾವತಿ ತಂಟೆಪ್ಪಾಡಿ,...
Ad Widget

ಐವರ್ನಾಡು : “ಗ್ರಾಮ ಪಂಚಾಯತ್ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025” ಸಮಾರೋಪ ಸಮಾರಂಭ ; “ಅಂಕಗಳು ಯಾವತ್ತೂ ಶಾಶ್ವತವಲ್ಲ, ಭವಿಷ್ಯಕ್ಕಾಗಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು” : ಅಭಿಲಾಷಾ ಮೋಟ್ನೂರು

ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಐವರ್ನಾಡು ಇವುಗಳ ಸಂಯುಕ್ತಾಶ್ರಯದಲ್ಲಿ ಐವರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025” ಕಾರ್ಯಕ್ರಮವು ನ.22 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಐವರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಾವತಿ ಅವರು ಮಾತನಾಡುತ್ತಾ “ಮಕ್ಕಳು...

ಬೆಳ್ಳಾರೆ : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025 ಸಮಾರೋಪ ಸಮಾರಂಭ ;   “ಗ್ರಂಥಾಲಯಗಳು ಜ್ಞಾನ ಕೇಂದ್ರಗಳಾಗಲಿ” : ಬಿ.ವಿ ಸೂರ್ಯನಾರಾಯಣ

“ಓದಿನಿಂದ ಮಾತ್ರ ಮನುಷ್ಯ ಪರಿಪೂರ್ಣನಾಗುತ್ತಾನೆ. ಪ್ರತಿಯೊಂದು ಗ್ರಂಥಾಲಯಗಳು ಜ್ಞಾನ ಪಸರಿಸುವ ಕೇಂದ್ರಗಳಾಗಲಿ” ಎಂದು ವಿಶ್ರಾಂತ ಪ್ರಾಂಶುಪಾಲರಾದ ಬಿ.ವಿ ಸೂರ್ಯನಾರಾಯಣ ಹೇಳಿದರು. ಅವರು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ  ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ...

ಬೆಳ್ಳಾರೆ : ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ಶುಭಾರಂಭ

ಬೆಳ್ಳಾರೆ ಕೆಳಗಿನ ಪೇಟೆಯಲ್ಲಿ ಸುನಿಲ್ ಕುಮಾರ್ ಆಲಂಕಾರು ಮಾಲಕತ್ವದ ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ನ.27 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರದ ಲೈವ್ ಜ್ಯೂಸ್ ಐಟಂಗಳು ಮತ್ತು ದಿನಬಳಕೆಯ ವಸ್ತುಗಳು ದೊರೆಯುತ್ತವೆ ಎಂದು ಮ್ಹಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಡಿ.01 ರಂದು ನಾವೂರಿನಲ್ಲಿ ಭಟ್ಸ್ ಕ್ಯಾಂಟೀನ್ ಶುಭಾರಂಭ

ಸುಳ್ಯ ಗಾಂಧಿನಗರದ ನಾವೂರು ರಸ್ತೆಯ ಬಯಂಬು ಕಾಂಪ್ಲೆಕ್ಸ್ ನಲ್ಲಿ  ಭಟ್ಸ್ ಕ್ಯಾಟರರ್ಸ್‌ ರವರ  ಭಟ್ಸ್ ಕ್ಯಾಂಟೀನ್(ಸಸ್ಯಾಹಾರಿ) ಡಿ.01 ರಂದು ಶುಭಾರಂಭಗೊಳ್ಳಲಿದೆ ಎಂದು  ಕೆ.ಹರೀಶ್ ಭಟ್ (ನಿವೃತ್ತ ಮೈನಿಂಗ್ ಇಂಜಿನಿಯರ್)  ತಿಳಿಸಿದ್ದಾರೆ. ಶುದ್ಧ ಸಸ್ಯಹಾರಿ ಕ್ಯಾಟರಿಂಗ್ ವ್ಯವಸ್ಥೆಗಾಗಿ  9544414805, 7034610444 ಸಂಪರ್ಕಿಸಬಹುದು.

ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ. ತರಗತಿ ಆರಂಭ

ಸಂಪಾಜೆ ಗ್ರಾಮದ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಕೇಂದ್ರದಲ್ಲಿ ಐ ಸಿ.ಡಿ.ಎಸ್ ಯೋಜನೆಯಡಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುಸ್ತಕವನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ.ಕೆ ಹಮೀದ್ ಗೂನಡ್ಕ ವಿತರಿಸಿದರು. ಪಂಚಾಯತ್ ಉಪಾಧ್ಯಕ್ಷರಾದ ಎಸ್.ಕೆ ಹನೀಫ್ ಸಂಪಾಜೆ ಸ್ಮಾರ್ಟ್...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂವಿಧಾನ ದಿನಾಚರಣೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ನ. 26ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಕ್ಯಾಬಿನೆಟ್ ಸಚಿವಾಲಯದ ಸೂಚನೆಯ ಅನುಸಾರ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಭಾರತೀಯ ಸಂವಿಧಾನ ಪ್ರತಿಜ್ಞೆಯನ್ನು ಬೋಧಿಸಲಾಯಿತು.18ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿಯನ್ನು ಎನ್.ಎಸ್.ಎಸ್ ವಿದ್ಯಾರ್ಥಿಯಾದ...

ಹರಿಹರ ಪಳ್ಳತ್ತಡ್ಕ : ಕಳೆದ ಕೆಲವು ತಿಂಗಳುಗಳಿಂದ ಸಾರ್ವಜನಿಕ ಶೌಚಾಲಯದಲ್ಲಿ ನೀರಿನ ಸಮಸ್ಯೆ – ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ; ಸ್ಥಳೀಯರಿಂದ ತಾತ್ಕಾಲಿಕ ನೀರಿನ ವ್ಯವಸ್ಥೆ ; ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಆಗ್ರಹ – ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ ಗ್ರಾಮ ಪಂಚಾಯತ್

(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಮುಖ್ಯ ಪೇಟೆಯಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನೀರಿನ ಸಮಸ್ಯೆ ಇದ್ದು, ಇದರಿಂದಾಗಿ ಪ್ರತಿನಿತ್ಯ ಪೇಟೆಗೆ ಬರುವ ಜನರಿಗೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು, “ಸುಸಜ್ಜಿತ ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಇದ್ದರೂ ಕೂಡ ನೀರಿನ ಸಮಸ್ಯೆಯಿಂದಾಗಿ ನಿರಂತರ ತೊಂದರೆ ಉಂಟಾಗುತ್ತಿದ್ದು,...

ಶುಭ ವಿವಾಹ : ಲತೀಶ್ ಅಲೆಂಗಾರ – ನಮಿತಾ

ಎಣ್ಮೂರು ಗ್ರಾಮದ ಅಲೆಂಗಾರ ಶ್ರೀಮತಿ ಪಾರ್ವತಿ ಮತ್ತು ಮೋನಪ್ಪ ಗೌಡರ ಪುತ್ರ ಲತೀಶ್ ಅವರ ವಿವಾಹವು ಪೆರುವಾಜೆ ಗ್ರಾಮದ ಅಡ್ಯತಕಂಡ ಶ್ರೀಮತಿ ಸಾವಿತ್ರಿ ಮತ್ತು  ಚೆನ್ನಪ್ಪ ಗೌಡರ ಪುತ್ರಿ ನಮಿತಾ ರೊಂದಿಗೆ ನ.27 ರಂದು ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
Loading posts...

All posts loaded

No more posts

error: Content is protected !!