- Saturday
- March 7th, 2026
ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಒಂದು ಕೋಟಿ ಅನುದಾನ ಬಿಡುಗಡೆಗೊಳಿಸಬೇಕೆಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆಯವರಿಗೆ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಎಂ.ಹಮೀದ್ ಬೆಳ್ಳಾರೆಯವರು ಮನವಿ ಸಲ್ಲಿಸಿದ್ದಾರೆ.
ಸುಬ್ರಹ್ಮಣ್ಯ ನ.05 : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವ ರಥೋತ್ಸವ ಪೂರ್ವಭಾವಿ ಸಭೆ ಬುಧವಾರ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ದರ್ಶನ್.ಹೆಚ್.ವಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಚಂಪಾಷಷ್ಠಿ ಮಹೋತ್ಸವದ ಬಗ್ಗೆ ಚರ್ಚೆ ನಡೆಯಿತು. ಜಿಲ್ಲಾಧಿಕಾರಿಗಳಾದ ದರ್ಶನ್ ಮಾತನಾಡಿ “ಬ್ರಹ್ಮರಥೋತ್ಸವ ಎಳೆಯುವ ವೇಳೆ ಯಾವುದೇ ಗೊಂದಲ ಉಂಟಾಗದಂತೆ...
ಕಡಬ ತಾಲೂಕಿನ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನ.05 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಿಂದ ಗೋವುಗಳನ್ನು ಕರೆತಂದು “ಗೋಪೂಜೆ ಮತ್ತು ಗೋಗ್ರಾಸ ಅರ್ಪಣೆ” ಹಾಗೂ ಶ್ರೀ ಕ್ಷೇತ್ರ ಬಸವನಮೂಲದಲ್ಲಿ ನಡೆಯುತ್ತಿದ್ದ “ಗೋಜಾತ್ರೆಯ ಸಾಂಕೇತಿಕ ಆಚರಣೆ” ನಡೆಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಹಾಗೂ ವ್ಯವಸ್ಥಾಪನಾ...
ಸುಬ್ರಹ್ಮಣ್ಯ ನವಂಬರ್ 5 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಡಾ.ಕುರುಂಜಿ ರೇಣುಕಾ ಪ್ರಸಾದ್ ಹಾಗೂ ಮನೆಯವರು ಕೊಡುಗೆಯಾಗಿ ನೀಡಿದ ಎರಡು ಕೋಟಿ ರೂಪಾಯಿ ವೆಚ್ಚದ ಬೆಳ್ಳಿ ರಥವು ಇಂದು ಬುಧವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತಲುಪಿದೆ. ರಥದೊಂದಿಗೆ ಬಂದಿರುವ ಕುರುಂಜಿ ಡಾ.ರೇಣುಕಾ ಪ್ರಸಾದ್ ರವರು ಹಾಗೂ ಮನೆಯವರು, ರಥಶಿಲ್ಪಿಗಳು, ಸುಳ್ಯ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ| ರೇಣುಕಾ ಪ್ರಸಾದ್.ಕೆ.ವಿ ಹಾಗೂ ಮನೆಯವರಿಂದ ಸಮರ್ಪಣೆಯಾಗಲಿರುವ ಬೆಳ್ಳಿರಥ ಮೆರವಣಿಗೆಯಲ್ಲಿ ರಥವನ್ನು ಸ್ವಾಗತಿಸಲಾಯಿತುನಂತರ ಶಿವಾಜಿ ಗೆಳೆಯರ ಬಳಗದ ವತಿಯಿಂದ ಎಲ್ಲರಿಗೂ ತಂಪು ಪಾನೀಯ ವಿತರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ಸಿಹಿತಿಂಡಿ ವಿತರಣೆ ನಡೆಯಿತು. ಸ್ಥಳೀಯ ವರ್ತಕರು, ಸಮಿತಿಯ ಸದಸ್ಯರು, ಯುವ ಮಿತ್ರರು ಸಾರ್ವಜನಿಕರು ಪಾನೀಯ ವಿತರಣೆಗೆ ಸಹಕರಿಸಿದರು.
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪ್ರಯೋಜಿತ ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಸದಸ್ಯರಿಂದ ಹಾಗೂ ಜ್ಞಾನದೀಪ ಶಿಕ್ಷಣ ತರಬೇತಿಯ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಬೆಳ್ಳಾರೆ ಸಾರ್ವಜನಿಕ ಗ್ರಂಥಲಾಯದ ಗ್ರಂಥಪಾಲಕಿ ಬೆಳ್ಳಾರೆ ಸಾರ್ವಜನಿಕ ಗ್ರಂಥಾಲಯ ಬಳಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವರೆಗೆ ಸ್ವಚ್ಛತಾ ಕಾರ್ಯ ನಡೆಸಿದರು. ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಗಗನ್ ಎಂ ಎಸ್, ರೋಟರಿ ಕ್ಲಬ್ ಬೆಳ್ಳಾರೆ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ - 75 ದಿನಗಳ ಸ್ವಚ್ಛತಾ ಅಭಿಯಾನ”ದ ಅಂಗವಾಗಿ ಸಚಿನ್ ಕ್ರೀಡಾ ಸಂಘದ ವತಿಯಿಂದ ಕಲ್ಲೇಮಠ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ "ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025" ಕಾರ್ಯಕ್ರಮದ ಅಂಗವಾಗಿ ನಾಲ್ಕನೆಯ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ ನ.02 ಆದಿತ್ಯವಾರ ಚೆನ್ನಪರಿ ಬಸ್ಸು ತಂಗುದಾಣವನ್ನು ಶುಚಿಗೊಳಿಸಿ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ನಡೆಸಲಾಯಿತು.ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಭಾಗವಹಿಸಿದ್ದರು.
ಕಾಸರಗೋಡಿನ ಮೀಪುಗುರಿಯ ಕನ್ನಡ ಗ್ರಾಮದಲ್ಲಿ ನ-4 ರಂದು ಕನ್ನಡಗ್ರಾಮೋತ್ಸವ-2025(ಕೇರಳ- ಕರ್ನಾಟಕ ರಾಜ್ಯೋತ್ಸವ) ಇದರ ರೀತಿಗಳಿಗಾಗಿ ಬಹುಭಾಷಾ ಕವಿಗೋಷ್ಠಿಯು ಜರುಗಿತು. ಪ್ರಸಿದ್ಧ ಕವಿ ಡಾ| ಸುರೇಶ್ ನೆಗಳಗುಳಿ ಅಧ್ಯಕ್ಷತೆಯಲ್ಲಿ ಜರುಗಿದ ಈ ಕವಿಗೋಷ್ಠಿಯಲ್ಲಿ ಯುವಕವಿ ಹಾಗೂಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಎಂ.ಎ.ಮುಸ್ತಫಾ ಬೆಳ್ಳಾರೆಯವರು ಮಲಾಮೆ ಭಾಷೆಯಲ್ಲಿ “ಞಮಲೆ ಜೀವಿದೊ(ನಮ್ಮ ಜೀವನ)” ಎಂಬ ಶೀರ್ಷಿಕೆಯ ಕವನ ವಾಚಿಸಿದರು....
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಕ್ರೀಡಾಕೂಟ “ಉಡಾನ್ -2025” ನ.04 ರಿಂದ ನ.10 ರ ವರೆಗೆ ನಡೆಯಲಿದ್ದು, ಕ್ರೀಡಾಕೂಟದ ಉದ್ಘಾಟನೆಯನ್ನು ನ.04 ರಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ ಇವರು ದೀಪ ಬೆಳಗಿಸಿ ವಾರ್ಷಿಕ ಕ್ರೀಡಾ ಕೂಟದ ಲಾಂಛನವನ್ನು ಪ್ರಕಟಿಸುವುದರ...
Loading posts...
All posts loaded
No more posts
