Ad Widget

ಡಾ| ಕೆ.ವಿ ರೇಣುಕಾ ಪ್ರಸಾದ್ ದಂಪತಿಗಳಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಆಗಲಿರುವ ಬೆಳ್ಳಿ ರಥದ ನಿರ್ಮಾಣ ಕಾರ್ಯದಲ್ಲಿ ಸುಳ್ಯ ತಾಲೂಕಿನ ಮೂವರು ಯುವಕರು

ಅಮರ ಸುಳ್ಯದ ಶಿಲ್ಪಿ ಶಿಕ್ಷಣ ಕ್ರಾಂತಿಯ ಹರಿಕಾರ ದಿ| ಕುರುಂಜಿ ವೆಂಕಟ್ರಮಣ ಗೌಡರ ಪುತ್ರ ಡಾ| ಕೆ.ವಿ ರೇಣುಕಾ ಪ್ರಸಾದ್ ದಂಪತಿಗಳಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ನ.10 ಬೆಳ್ಳಿರಥ ಸಮರ್ಪಣೆಯಾಗಲಿದ್ದು, ಈ ಬೆಳ್ಳಿ ರಥವು ರಥಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರ ಬಿ.ಲಕ್ಷ್ಮಿನಾರಾಯಣ ಆಚಾರ್ಯರು ಹಾಗೂ ಅವರ ಪುತ್ರರಾದ ರಾಜಗೋಪಾಲ ಆಚಾರ್ಯರಿಂದ ನಿರ್ಮಾಣಗೊಂಡಿದ್ದು, ರಥ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗಲಿರುವ ಬೆಳ್ಳಿರಥಕ್ಕೆ ಗುತ್ತಿಪೂಜೆ – ಇಂದು ಸುಳ್ಯಕ್ಕೆ ಆಗಮನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ. ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರಿಂದ ಸುಮಾರು ಒಂದು ಕೋಟಿ ಮೌಲ್ಯದ ಬೆಳ್ಳಿರಥ ಸಮರ್ಪಣೆ ನ.10 ರಂದು ನಡೆಯಲಿದ್ದು ನ. 3 ರಂದು ಕೋಟೇಶ್ವರದಲ್ಲಿ ಗುತ್ತಿಪೂಜೆ ನಡೆಯಿತು.ರಥ ಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರ ಬಿ. ಲಕ್ಷ್ಮೀನಾರಾಯಣ ಆಚಾರ್ಯರು ಮತ್ತು ಪುತ್ರ ಶ್ರೀ ರಾಜಗೋಪಾಲ ಆಚಾರ್ಯರು ಬೆಳ್ಳಿರಥವನ್ನು ನಿರ್ಮಿಸಿದ್ದು....
Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ನ.01 ರಂದು ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್(ರಿ.) ಸುಳ್ಯ ಇದರ ಕಾರ್ಯದರ್ಶಿಗಳು ಹೇಮನಾಥ...

ಸುಳ್ಯ : ಶ್ರೀ ಗಣಪತಿ ಕಲಾಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

ಸುಳ್ಯದ ಶ್ರೀ ಗಣಪತಿ ಕಲಾಕೇಂದ್ರವು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಗೆ ಸ್ಥಳಾಂತರಗೊಂಡಿದ್ದು, ಎಂಪೋರಿಯಂ ನ ಮೂರನೇ ಮಹಡಿ ವಿಶ್ವಾಸ್ ಸ್ಟೋರ್ ನ ಮುಂಭಾಗದಲ್ಲಿ ಶುಭಾರಂಭಗೊಂಡಿದೆ.ಇಲ್ಲಿ ತಬಲ, ಹಾರ್ಮೋನಿಯಂ, ಮೃದಂಗ, ಚೆಂಡೆ, ಡೋಲಕ್, ಕೀಬೋರ್ಡ್, ಶಾಸ್ತ್ರೀಯ ಸಂಗೀತ, ಕೊಳಲು, ರಿದಂ ಪ್ಯಾಡ್, ವಯೋಲಿನ್, ಸ್ಯಾಕ್ಸೋಫೋನ್, ಗಿಟಾರ್, ಸುಗಮ ಸಂಗೀತ ಹಾಗೂ ಭಜನಾ ತರಬೇತಿಯನ್ನು...

ಕುಕ್ಕೆಯಲ್ಲಿ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ ಉದ್ಘಾಟನೆ – “ಕುಕ್ಕೆಯ ಮಣ್ಣಿನಲ್ಲಿ ಆಡುವುದು ಕ್ರೀಡಾಳುಗಳ ಸೌಭಾಗ್ಯ” : ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅಭಿಮತ

ಸುಬ್ರಹ್ಮಣ್ಯ : “ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವು ರಾಜ್ಯಾದ್ಯಂತ ಅಪಾರ ಭಕ್ತರನ್ನು ಹೊಂದಿದೆ. ಶ್ರೀಕ್ಷೇತ್ರದ ಪಾವನ ಮಣ್ಣಿನಲ್ಲಿ ಆಟವಾಡುವುದು ಕ್ರೀಡಾಳುಗಳ ಸೌಭಾಗ್ಯ. ರಾಜ್ಯದ ಎಲ್ಲಾ ಜಿಲ್ಲೆಗಳ ಕ್ರೀಡಾಳುಗಳು ಕ್ಷೇತ್ರಕ್ಕೆ ಆಗಮಿಸುವ ಮೂಲಕ ಇದೀಗ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ ಹೇಳಿದರು.ಶಾಲಾ ಶಿಕ್ಷಣ...

“ರಾಜ್ಯದಲ್ಲಿ ಸಿ.ಎಂ ಕುರ್ಚಿಗಾಗಿ ಪೈಪೋಟಿಯಿಂದ ಜನ ಪರದಾಡುತ್ತಿದ್ದಾರೆ…”

ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಟೀಕೆ

ಸುಬ್ರಹ್ಮಣ್ಯ ನ.02 : “ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಆಡಳಿತವು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದ್ದು, ಜನ ಪರದಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಮಾಧ್ಯಮದವರೊಂದಿಗೆ  ಮಾತನಾಡಿದರು.“ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಕುರ್ಚಿಗಾಗಿ ಪೈಪೋಟಿ ಬಹಿರಂಗವಾಗಿ ನಡೆಯುತ್ತಿದೆ. ಕೇವಲ ಡಿ.ಕೆ.ಶಿವಕುಮಾರ್ ಅವರಷ್ಟೇ ಅಲ್ಲ, ನನಗೆ ಗೊತ್ತಿರುವ ಪ್ರಕಾರ...

ಸುಳ್ಯ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚುಟುಕು ಕವಿಗೋಷ್ಠಿ ಹಾಗೂ ಸಂಗೀತ ಸಂಭ್ರಮ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿತೇಶ್ ಸಂಗೀತ ಬಳಗ ಐವರ್ನಾಡು, ಸುಳ್ಯ ಇದರ ವತಿಯಿಂದ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ಸಂಭ್ರಮ-2025 ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನ.02 ರಂದು ನಡೆಯಿತು.ಸ್ವಾಗತವನ್ನು ಅಮಿತಾ ಲಾವಂತಡ್ಕ ಮಾಡಿದರು.ಪುಷ್ಪಾವತಿ ಡಿ.ಪ್ರಾರ್ಥನೆ ನೆರವೇರಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿತೇಶ್ ಸಂಗೀತ ಬಳಗ ಐವರ್ನಾಡು, ಸುಳ್ಯ ಇದರ ಸದಸ್ಯರಾದ ಪ್ರಸಾದ್ ಕೆಮ್ಮಿಂಜೆ...

ಕೆಮ್ಮಿನ ಸಿರಪ್ ಜೊತೆ ಸರಸ ಬೇಡ – ✒️ಡಾ| ಮುರಲೀ ಮೋಹನ್ ಚೂಂತಾರು

ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ಬಹಳ ಜಾಸ್ತಿಯಾಗುತ್ತಿದೆ. ವೈದ್ಯರ ಚೀಟಿ ಇಲ್ಲದೆ ಬಹಳ ಸುಲಭವಾಗಿ ಸಿಗುವ ಕಾರಣದಿಂದ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಜನರು ಟಾನಿಕ್‍ನಂತೆ ಎರ್ರಾಬಿರ್ರಿ ಕುಡಿಯುತ್ತಿದ್ದಾರೆ. ವಿಷಾಂಶಯುಕ್ತ ಮತ್ತು ಕೆಟ್ಟು ಹೋದ ಕೆಮ್ಮಿನ ಸಿರಪ್ ಬಳಸಿ ಕೆಲವು ಮಂದಿ ಮಕ್ಕಳು ಸತ್ತು ಹೋಗಿರುವುದು ಕಳೆದೆರಡು ತಿಂಗಳುಗಳಿಂದ ರಾಷ್ಟ್ರೀಯ ಸುದ್ದಿಯಾಗಿ ಜನರಲ್ಲಿ ಆತಂಕ ಮೂಡಿಸಿದೆ. ಈ...

ನ.16 ರಂದು ವಳಲಂಬೆಯಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ – ಆಮಂತ್ರಣ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕದ ನೇತೃತ್ವದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನವು ನವಂಬರ್ 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು, ಸಮ್ಮೇಳನದ ಅಮಂತ್ರಣ ಬಿಡುಗಡೆ ಕಾರ್ಯಕ್ರಮವು ನ.2 ರಂದು ವಳಲಂಬೆ ನಡೆಯಿತು.ಈ ಸಂದರ್ಭದಲ್ಲಿ ಸಮ್ಮೇಳನದ ಸಂಘಟನಾ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕನ್ನಡ ಸಾಹಿತ್ಯ...

ಸುಳ್ಯ : ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಅ.30 ಗುರುವಾರದಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ್ ಅಡ್ಕಾರ್ ವಹಿಸಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ನಂತರ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಸುನಂದಾ ಶೆಟ್ಟಿ ಸರ್ವರನ್ನು ಸ್ವಾಗತಿಸಿದರು.ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪಾರೆಪ್ಪಾಡಿ ಪ್ರಾಸ್ತಾವಿಕ...
Loading posts...

All posts loaded

No more posts

error: Content is protected !!