Ad Widget

ಮೇದಿನಡ್ಕ ಧನುರ್ಮಾಸ ಭಜನಾ ಸಂಕೀರ್ತನೆ

ಅಜ್ಜಾವರ : ಮೇದಿನಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ಸುಮಾರು 40 ವರ್ಷಗಳಿಂದ ನಡೆಸಿಕೊಂಡು ಬಂದ ಮನೆ ಮನೆ ಭಜನಾ ಸಂಕೀರ್ತನೆಯು ಇಂದು ಶ್ರೀ ಮಹಾಗಣಪತಿ ಹೋಮದೊಂದಿಗೆ ಚಾಲನೆ ನೀಡಲಾಯಿತು. ಪೂಜಾ ವಿಧಿ ವಿಧಾನಗಳನ್ನು ಗಣೇಶ್ ಭಟ್ ಸುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಊರ ಭಕ್ತವೃಂದ...

ಡಿ.29ರಂದು ಗುತ್ತಿಗಾರಿನಲ್ಲಿ ಆಸರೆ ಇಲೆಕ್ಟ್ರಾನಿಕ್ಸ್ ಹಾಗೂ ಹೋಂ ಅಪ್ಲೆಯನ್ಸ್‌ಸ್ ಶುಭಾರಂಭ

ಗುತ್ತಿಗಾರಿನ ಕೆನರಾ ಬ್ಯಾಂಕ್ ಮುಂಭಾಗದ ದೇವಮಾತ ಕಾಂಪ್ಲೆಕ್ಸ್ ನಲ್ಲಿ ಆಸರೆ ಇಲೆಕ್ಟ್ರಾನಿಕ್ಸ್ ಹಾಗೂ ಹೋಂ ಅಪ್ಲೆಯನ್ಸ್‌ಸ್ ಡಿ.29 ರಂದು  ಶುಭಾರಂಭಗೊಳ್ಳಲಿದೆ. ಆರಿಕೋಡಿ ಧರ್ಮದರ್ಶಿ ಹರೀಶ್ ಆರಿಕೋಡಿರವರು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.ಗಣ್ಯ ಅತಿಥಿಗಳು ಈ ಸಂದರ್ಭ ಉಪಸ್ಥಿತರಿರಲಿದ್ದಾರೆ.ಗುತ್ತಿಗಾರಿನ ಪ್ರಥಮ ಎಲೆಕ್ಟ್ರಾನಿಕ್ಸ್ ಹಾಗೂ ಹೋಂ ಅಪ್ಲೆಯನ್ಸ್‌ಸ್ ಮಳಿಗೆಯಾಗಿ ಆಸರೆ ಸಂಸ್ಥೆ ಶುಭಾರಂಭಗೊಳ್ಳಲಿದ್ದು, ಆ ಪ್ರಯುಕ್ತ ಎಲೆಕ್ಟ್ರಾನಿಕ್ಸ್ ಮತ್ತು ಗೃಹಪಯೋಗಿ...
Ad Widget

ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ

ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ವಿಷ್ಣುನಗರ-ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಒತ್ತೆಕೋಲದ ಅಂಗವಾಗಿ ಡಿ.15ರಂದು ಕೊಳ್ಳಿ ಮುಹೂರ್ತ ನಡೆಯಿತು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮತ್ತು ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

ರಾಜ್ಯ ವಿಪತ್ತು ಉಪಶಮನ ನಿಧಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ 10.82 ಕೋಟಿ ಅನುದಾನ

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸುಳ್ಯ ವಿಧಾನಸಭಾ ಕ್ಷೇತ್ರದ 21 ಕಾಮಗಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 10.82 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ರಸ್ತೆ ಮತ್ತು ಸೇತುವೆಗಳು ಹಾಗೂ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಶಾಸಕರ...

ಬಾಳಿಲದ ವಠಾರದಲ್ಲಿ ಬೀದಿ ನಾಯಿಗಳ ಹಾವಳಿ – ಮಕ್ಕಳು ಭಯದಿಂದಲೇ ಶಾಲೆಗೆ ಹೋಗುವ ಪರಿಸ್ಥಿತಿ ; ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಗ್ರಾಮಸ್ಥರು

ಬಾಳಿಲದ ವಠಾರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಶಾಲೆಗೆ ತೆರಳುವ ಸಂದರ್ಭದಲ್ಲಿ ಭಯದಿಂದಲೇ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಮುಂದುವರೆದಲ್ಲಿ ಮುಂದೆ ಸಾರ್ವಜನಿಕರೂ ಕೂಡ ಭಯದಿಂದಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗುವ ಆತಂಕವಿದ್ದು, ಈ ಬೀದಿ ನಾಯಿಗಳು ಶಾಲಾ ಮಕ್ಕಳ ಮೇಲೆ ಅಥವಾ ಸಾರ್ವಜನಿಕರ ಮೇಲೆ ದಾಳಿ ಮಾಡಿ ಅವಘಡ ಸಂಭವಿಸುವ ಮೊದಲು ಸ್ಥಳೀಯ ಗ್ರಾಮ...

ದೇವ ಗೆಳೆಯರ ಬಳಗದ ವತಿಯಿಂದ ದೇವ ಅಂಗನವಾಡಿ ಕೇಂದ್ರದ ವಠಾರ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ನ.24 ರಂದು ದೇವ ಅಂಗನವಾಡಿ ಕೇಂದ್ರದ ವಠಾರ ಸ್ವಚ್ಚತೆಯನ್ನು ಮಾಡಲಾಯಿತು .‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಗೆಳೆಯರ ಬಳಗದ ಕಾರ್ಯದರ್ಶಿ ಜಯಂತ ದೇವ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಯು ಡಿ.17ರಂದು ಸಂಘದ ಕಛೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ ಮಣಿಯಾನಮನೆ, ನಿರ್ದೇಶಕರಾದ ಶೇಷಪ್ಪ ಗೌಡ ಕಿರಿಭಾಗ, ರೇಗನ್ ಶೆಟ್ಟಿಯಡ್ಕ, ವೇದಾವತಿ ಮುಳ್ಳುಬಾಗಿಲು, ಮೇನಕಾ ಕೊಪ್ಪಡ್ಕ, ಕಮಲಾಕ್ಷ...
error: Content is protected !!