- Saturday
- March 7th, 2026
ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಗಣೇಶ್ ರೈ ಪೆರುವಾಜೆ ಇವರ ಪತ್ನಿಯ ಅಂಜಿಯೋಪ್ಲಾಸ್ಟಿ ಚಿಕಿತ್ಸೆಯ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಮುರಳೀಕೃಷ್ಣ ಕೆ.ಎನ್ ಹಾಗೂ ಶ್ರೀಮತಿ ಮಾಲಿನಿ ಪ್ರಸಾದ್ ಇವರು ಡಿ.27ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ...
ಪ್ರಸಿದ್ಧ ನಾಗಾರಾಧನೆಯ ಸಾನಿಧ್ಯವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ “ಶರಣು ಶ್ರೀ ಸುಬ್ರಹ್ಮಣ್ಯಂ” ಎಂಬ ಕನ್ನಡ ಭಕ್ತಿಗೀತೆಯು ಶ್ರೀ ಕ್ಷೇತ್ರದಲ್ಲಿ ಡಿ.26 ರಂದು ಕಿರು ಷಷ್ಠಿಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಭರತ್...
ದೇವಚಳ್ಳ ಗ್ರಾಮದ ಸೇವಾಜೆ ಅಂಗನವಾಡಿ ಕೇಂದ್ರದ ಮಕ್ಕಳ ಉಪಯೋಗಕ್ಕಾಗಿ ಎಲ್.ಐ.ಸಿ ಏಜೆಂಟ್ ಪದ್ಮನಾಭ ಶೆಟ್ಟಿ ಅವರು ಮೈಕ್ರೋಫೋನ್ ಅನ್ನು ಕೊಡುಗೆಯಾಗಿ ನೀಡಿದರು. ಮಕ್ಕಳ ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಕಾರಿಯಾಗುವ ಈ ಕೊಡುಗೆಯನ್ನು ಅಂಗನವಾಡಿ ಕೇಂದ್ರ ಆತ್ಮೀಯವಾಗಿ ಸ್ವೀಕರಿಸಿದೆ.ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಅವರು ಪದ್ಮನಾಭ ಶೆಟ್ಟಿ ಅವರ ಸಾಮಾಜಿಕ ಸೇವಾಭಾವಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು...
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚರಂಡಿ ಮೇಲೆ ಹಾಸಿರುವ ಸಿಮೆಂಟ್ ಸ್ಲಾಬ್ ಗಳು ಸಮರ್ಪಕವಾದ ರೀತಿಯಲ್ಲಿ ಇಲ್ಲದೇ ಸಾರ್ವಜನಿಕರು ನಡೆದಾಡುವ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಮಕ್ಕಳು ಸೇರಿದಂತೆ ಹಲವರ ಕಾಲು ಸಿಲುಕಿ ಬಿದ್ದಿರುವ ಘಟನೆಗಳು ನಡೆದಿವೆ ಎಂದು ತಿಳಿದುಬಂದಿದ್ದು, ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತು ಗಮನಹರಿಸಿ ಈ ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಮಂಗಳೂರು: ಮಂಗಳೂರು ಕೇವಲ ನಮ್ಮ ನೆಲವಲ್ಲ, ಇದು ಸನಾತನ ಸಂಸ್ಕೃತಿಯ ನೆಲೆಬೀಡು ಮತ್ತು ನಮ್ಮ ತುಳುನಾಡಿನ ಅಸ್ಮಿತೆ. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು ಹಾಕುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಜೊತೆಗೆ, ಸ್ಥಳೀಯರ ಪಾಲ್ಗೊಳ್ಳುವಿಕೆಯೊಂದಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನಮ್ಮ ‘ಮಂಗಳೂರು ೨.೦ ಹಾಗೂ ‘ವಿಕಸಿತ ಮಂಗಳೂರು’...
ಕುಕ್ಕೆ ಸುಬ್ರಹ್ಮಣ್ಯನಿಗೆ ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿಯ ದಿನವಾದ ಶುಕ್ರವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ...
ಸುಳ್ಯದ ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆಯು ಸುಳ್ಯದ ಪ್ರಮುಖ ರಸ್ತೆಯಲ್ಲಿ ಡಿ.26ರಂದು ನಡೆಯಿತು.ಕಾಲೇಜಿನ ದಶಮಾನೋತ್ಸವದ ಪೂರ್ವಭಾವಿಯಾಗಿ ಕಾಲೇಜು ಸ್ಥಾಪಕರಾದ ಡಾ.ಕುರುಂಜಿ ವೆಂಕಟರಮಣ ಗೌಡರ 97ನೇ ಜನ್ಮದಿನಾಚರಣೆಯ ಪ್ರಯುಕ್ತ "ಆರೋಗ್ಯಕ್ಕಾಗಿ ಓಟ" ಎಂಬ ಮ್ಯಾರಥಾನ್ ಗೆ ಎ.ಒ.ಎಲ್.ಇ ಕಮಿಟಿ 'ಬಿ' ಅಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ...
ಚೆಂಬು ಗ್ರಾಮದ ಅನ್ಯಾಳದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಜ.04 ರಂದು ಬೈಲುಕೋಲ ನಡೆಯಲಿದೆ.ಇದರ ಅಂಗವಾಗಿ ಡಿ 27 ರಂದು ಬೆಳಿಗ್ಗೆ ಗಣಹೋಮ, ನಂತರ ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಬಾಲಂಬಿ ಸೋಮಣ್ಣ, ಕಾರ್ಯದರ್ಶಿ ಹೊಸೂರು ಕಿರಣ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಿವಾರ ಸೋಮಣ್ಣ, ಕಾರ್ಯದರ್ಶಿ ಕಾಚೇಲು ಸೋಮಣ್ಣ ಹಾಗೂ ಭಕ್ತಾಭಿಮಾನಿಗಳು...
ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಜರುಗಿತು.ಕ್ರೀಡಾಕೂಟದ ಉದ್ಘಾಟನೆ ಯಯನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಉದ್ಘಾಟಿಸಿ ಕ್ರೀಡಾಳುಗಳ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿದ ಟಿ.ಎಂ. ಶಹೀದ್ ರವರು ಮಾತನಾಡಿ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆ ಮಾನಸಿಕ ಮತ್ತು ದೈಹಿಕ ಕ್ಷಮತೆಗೆ ಸಹಕಾರಿ” ಎಂದರು. ಅನ್ಸಾರಿಯಾ...
ಇತ್ತೀಚೆಗೆ ನಿಧನರಾದ ಗಣೇಶ್ ನಾಯರ್ ರವರಿಗೆ ಪರಿವಾರ ಸಂಘಟನೆಗಳ ಕಾರ್ಯಕರ್ತರ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜರಂಗದಳ, ಜಾಗರಣ ವೇದಿಕೆ ಮೂಲಕ ಅವರು ಮಾಡಿದ ಸಾಮಾಜಿಕ ಕಾರ್ಯಗಳನ್ನು ನೆನಪಿಸಿಕೊಂಡು, “ಅವರ ಕುಟುಂಬಕ್ಕೆ ಹಿಂದೂ ಸಮಾಜ ಬೆಂಬಲವಾಗಿ...
Loading posts...
All posts loaded
No more posts
