Ad Widget

ಕೊಲ್ಲಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಸಾಶನ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಬರುವ ನಿರ್ಗತಿಕರ ಮಾಸಾಶನ ಮಂಜೂರಾತಿ ಪತ್ರವನ್ನು ಡಿ.02 ರಂದು ಕೊಲ್ಲಮೊಗ್ರು ಕಾರ್ಯಕ್ಷೇತ್ರದ ಗಿರಿಜಾ ಇವರಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ವಲಯ ಅಧ್ಯಕ್ಷರಾದ ತೀರ್ಥರಾಮ ಧೋನಿಪಳ್ಳ, ಜನಜಾಗೃತಿ ವಲಯದ ಅಧ್ಯಕ್ಷರಾದ ಮಾಧವ ಚಾಂತಾಳ, ಭಜನಾ ಪರಿಷತ್ ವಲಯ ಅಧ್ಯಕ್ಷರಾದ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಮರಣ ಸಾಂತ್ವನ ನಿಧಿ ವಿತರಣೆ

ಇತ್ತೀಚೆಗೆ ಮರಣ ಹೊಂದಿದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯತನ ಹೊಂದಿದ್ದ ಕಮಲ ದೇವರುಳಿಯ ಮನೆಯವರಿಗೆ ಮರಣ ಸಾಂತ್ವನ ನಿಧಿಯನ್ನು ಡಿ.02ರಂದು ಸಂಘದ ಕಚೇರಿಯಲ್ಲಿ ವಿತರಿಸಲಾಯಿತು.ನಾಮಿನಿ ಪುಂಡರೀಕ ಅವರಿಗೆ ರೂ.15,000 ಚೆಕ್ ಹಸ್ತಾಂತರಿ ಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳ್ಯಪ್ಪ...
Ad Widget

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರದಲ್ಲಿರುವ ದೇವರ ಮೀನುಗಳಿಗೆ ನೈವೇದ್ಯ ಅರ್ಪಿಸಿದ ದೈವ – ಜಾತ್ರೋತ್ಸವ ಸಂಪನ್ನ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರಂತೆ ಮೀನುಗಳು ಜಾತ್ರೆ ನೋಡಲು ಬರುವುದು ಇಲ್ಲಿನ ವಿಶಿಷ್ಠತೆಯಾಗಿದೆ, ಪ್ರತಿವರ್ಷದಂತೆ  ಕುಮಾರಧಾರ ಸ್ನಾನ ಘಟ್ಟಕ್ಕೆ ಮೀನುಗಳು ಅತಿಥಿಗಳಾಗಿ ಬರುವುದು ಅವುಗಳಲ್ಲಿ ಒಂದಾಗಿದೆ. ದೇವಸ್ಥಾನದಲ್ಲಿ ಜಾತ್ರೆಯ ಸಂದರ್ಭ ಕೊಪ್ಪರಿಗೆ ಏರುವ ದ್ವಾದಶಿಯಿಂದ, ದೂರದ ಏನೆಕಲ್ಲು-ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮೀನುಗಳು ಇಲ್ಲಿಗೆ ಬರುತ್ತದೆ. ಜಾತ್ರೆ ಮುಗಿಯುವವರೆಗೂ ಇಲ್ಲೇ ಕಂಡು ಬರುವ ಈ ಮೀನುಗಳು ದೇವಸ್ಥಾನದ ಜಾತ್ರೋತ್ಸವದ...

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನವರ 2026ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ

ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸುಂತೋಡು ಎಂಪೋರಿಯಂ ಲ್ಲಿರುವ ಸ್ವರ್ಣಂ ಜ್ಯುವೆಲ್ಲರ್ ನಲ್ಲಿ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಿ.02ರಂದು ನಡೆಯಿತು.ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭ ಬಿಲ್ಡಿಂಗ್ ಮಾಲಕ ಸೂರಯ್ಯ ಸುಂತೋಡು, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ...

ಗುತ್ತಿಗಾರು : ಡಿ.07 ರಂದು “ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ-2025 ಹಾಗೂ ಸನ್ಮಾನ ಸಮಾರಂಭ”

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.) ಸುಳ್ಯ ಹಾಗೂ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಇದರ ನೇತೃತ್ವದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ಕೆ.ವಿ.ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇವುಗಳ ಸಹಭಾಗಿತ್ವದೊಂದಿಗೆ ಹಾಗೂ...

ಪ್ರತಿಷ್ಠಿತ ಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಎರಡನೇ ಬಾರಿಗೆ ಆಯ್ಕೆ – ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆ

ಪ್ರತಿಷ್ಠಿತ ಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಪದ್ಮರಾಜ ಪಟ್ಟಾಜೆಯವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಒಟ್ಟು 19 ನಿರ್ದೇಶಕರ ಪೈಕಿ 13 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 6 ಸ್ಥಾನಗಳಿಗೆ ನ.23 ರಂದು  ಚುನಾವಣೆ ನಡೆದು ಸಹಕಾರ ಭಾರತಿ ಬೆಂಬಲಿತ ಎಲ್ಲಾ 6  ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.ಇಂದು ನಡೆದ ಆಡಳಿತ ಮಂಡಳಿ...

ವೈದ್ಯಕೀಯ ಸಾಧನೆಗಾಗಿ ಸ್ತ್ರೀ ರೊಗ ತಜ್ಞೆ ಡಾ. ಶಾಲಿನಿ ಅವರಿಗೆ ಸನ್ಮಾನ

ತಾಲೂಕು ಸರ್ಕಾರಿ ಆಸ್ಪತ್ರೆ ಸುಳ್ಯ ಇಲ್ಲಿಯ ಅರೋಗ್ಯ ರಕ್ಷಾ ಸಮಿತಿ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಅತಿ ಹೆಚ್ಚು ಹೆರಿಗೆಯನ್ನು ಯಶಸ್ವಿಯಾಗಿ ಮಾಡಿಸಿದ ಸ್ತ್ರೀ ರೊಗ ತಜ್ಞೆ ಡಾ. ಶಾಲಿನಿ ವಿ.ಎಲ್ ಸನ್ಮಾನಿಸಲಾಯಿತು‌. 25 ಶಸ್ತ್ರ ಚಿಕಿತ್ಸೆ ಸೇರಿದಂತೆ 60 ಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿಸಿದ್ದಾರೆ. ವೈದ್ಯ ಲೋಕದ ಸೇವೆಯ ಜತೆಗೆ ಸುಮಾರು 18ಕ್ಕೂ ಹೆಚ್ಚೂ ಕಾದಂಬರಿ...

ಪುತ್ತೂರು : ಪತ್ರಕರ್ತರಿಗಾಗಿ “ಜೈ” ಸಿನೆಮಾದ ವಿಶೇಷ ಪ್ರದರ್ಶನ

ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ ತುಳು ಸಿನಿಮಾ “ಜೈ” ಯ ವಿಶೇಷ ಪ್ರದರ್ಶನ ಅತ್ಯಂತ ಭವ್ಯವಾಗಿ ಆಯೋಜಿಸಲಾಯಿತು.ಈ ವಿಶೇಷ ಪ್ರದರ್ಶನಕ್ಕೆ MG Motors Mangalore ಪ್ರಾಯೋಜಕತ್ವ ವಹಿಸಿಕೊಂಡಿದ್ದು, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ...

ಡಿ.7 ರಂದು ಮಂಡೆಕೋಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಹಾಗೂ ಕುಣಿತ ಭಜನಾ ಸ್ಪರ್ಧೆ

ಅಜ್ಜಾವರ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಮತ್ತು ತತ್ವಮಸಿ ಗ್ರೂಪ್ಸ್ ಮಂಡೆಕೋಲು ಇದರ ಆಶ್ರಯದಲ್ಲಿ ದಾಸ ಸಂಕೀರ್ತನಾ ನಡೆಯಲಿದೆ.ಕಾಸರಗೋಡು ಮತ್ತು ದ.ಕ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಡಿ.7 ರಂದು ಮಂಡೆಕೋಲಿನ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಲಿದೆ. ಹಿರಿಯರ ವಿಭಾಗ ಮತ್ತು ಕಿರಿಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ ಮತ್ತು ನಗದು ಬಹುಮಾನಗಳಿವೆ...

ಕಳಂಜ ಗ್ರಾಮ ಪಂಚಾಯತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಕಳಂಜ ಗ್ರಾಮ ಪಂಚಾಯತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಡಿ.01ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಬೇರಿಕೆ ಹಾಗೂ ಕಾರ್ಯದರ್ಶಿ ಪದ್ಮಯ್ಯ ಅವರು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
Loading posts...

All posts loaded

No more posts

error: Content is protected !!