Ad Widget

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಿ-ಸಂಭ್ರಮದಿಂದ ನಡೆದ ಕಿರುಷಷ್ಠಿ ರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯನಿಗೆ ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿಯ ದಿನವಾದ ಶುಕ್ರವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ...

ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು ವತಿಯಿಂದ “ಎಜೆ ಮ್ಯಾರಥಾನ್” ; “ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದು ಕೆವಿಜಿಯವರಿಗೆ ಸಂದ ಗೌರವ” : ಡಾ. ರೇಣುಕಾಪ್ರಸಾದ್ ಕೆ.ವಿ

ಸುಳ್ಯದ ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆಯು ಸುಳ್ಯದ ಪ್ರಮುಖ ರಸ್ತೆಯಲ್ಲಿ ಡಿ.26ರಂದು  ನಡೆಯಿತು.ಕಾಲೇಜಿನ ದಶಮಾನೋತ್ಸವದ ಪೂರ್ವಭಾವಿಯಾಗಿ ಕಾಲೇಜು ಸ್ಥಾಪಕರಾದ ಡಾ.ಕುರುಂಜಿ ವೆಂಕಟರಮಣ ಗೌಡರ 97ನೇ ಜನ್ಮದಿನಾಚರಣೆಯ ಪ್ರಯುಕ್ತ  "ಆರೋಗ್ಯಕ್ಕಾಗಿ ಓಟ" ಎಂಬ ಮ್ಯಾರಥಾನ್ ಗೆ ಎ.ಒ.ಎಲ್.ಇ ಕಮಿಟಿ 'ಬಿ' ಅಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ...
Ad Widget

ಜ.04- ಚೆಂಬು ಅನ್ಯಾಳ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಬೈಲುಕೋಲ – ಇಂದು ಗೊನೆ ಮುಹೂರ್ತ

ಚೆಂಬು ಗ್ರಾಮದ ಅನ್ಯಾಳದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಜ.04 ರಂದು ಬೈಲುಕೋಲ ನಡೆಯಲಿದೆ.ಇದರ ಅಂಗವಾಗಿ ಡಿ 27 ರಂದು ಬೆಳಿಗ್ಗೆ ಗಣಹೋಮ, ನಂತರ ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಬಾಲಂಬಿ ಸೋಮಣ್ಣ, ಕಾರ್ಯದರ್ಶಿ ಹೊಸೂರು ಕಿರಣ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಿವಾರ ಸೋಮಣ್ಣ, ಕಾರ್ಯದರ್ಶಿ ಕಾಚೇಲು ಸೋಮಣ್ಣ ಹಾಗೂ ಭಕ್ತಾಭಿಮಾನಿಗಳು...

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ; “ಕ್ರೀಡೆ ದೈಹಿಕ  ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ” : ಟಿ.ಎಂ ಶಹೀದ್

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಜರುಗಿತು.ಕ್ರೀಡಾಕೂಟದ ಉದ್ಘಾಟನೆ ಯಯನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಉದ್ಘಾಟಿಸಿ ಕ್ರೀಡಾಳುಗಳ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿದ ಟಿ.ಎಂ. ಶಹೀದ್ ರವರು ಮಾತನಾಡಿ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆ ಮಾನಸಿಕ ಮತ್ತು ದೈಹಿಕ ಕ್ಷಮತೆಗೆ  ಸಹಕಾರಿ” ಎಂದರು. ಅನ್ಸಾರಿಯಾ...

ಇತ್ತೀಚೆಗೆ ನಿಧನರಾದ ಗಣೇಶ್ ನಾಯರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಗಣೇಶ್ ನಾಯರ್ ರವರಿಗೆ ಪರಿವಾರ ಸಂಘಟನೆಗಳ ಕಾರ್ಯಕರ್ತರ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜರಂಗದಳ, ಜಾಗರಣ ವೇದಿಕೆ ಮೂಲಕ ಅವರು ಮಾಡಿದ ಸಾಮಾಜಿಕ ಕಾರ್ಯಗಳನ್ನು ನೆನಪಿಸಿಕೊಂಡು, “ಅವರ ಕುಟುಂಬಕ್ಕೆ ಹಿಂದೂ ಸಮಾಜ ಬೆಂಬಲವಾಗಿ...

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಸಹಾಯಾನುದಾನದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ; “ಡಾ. ಕುರುಂಜಿಯವರ ನೆನಪು ಬಡವರ ಸೇವೆಯ ಮೂಲಕ ಅರ್ಥಪೂರ್ಣ” : ಜಯಪ್ರಕಾಶ್ ರೈ

ಡಾ. ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವದ  ಅಂಗವಾಗಿ ಸಮಾಜ ಸೇವಾ ಕಾರ್ಯ ವಿಭಾಗದಲ್ಲಿ ಜಟ್ಟಿಪ್ಪಳ್ಳ ನಿವಾಸಿ ಕಮಲ ರವರಿಗೆ ಮನೆ ನಿರ್ಮಾಣ ಪೂರ್ತಿಗೊಳಿಸಲು ರೂ 1 ಲಕ್ಷ ಸಹಾಯಾನುದಾನ  ನೀಡಲಾಗಿದ್ದು, ಪೂರ್ಣ ಗೊಂಡ ಮನೆಯನ್ನು ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷರಾದ ಎನ್.ಜಯಪ್ರಕಾಶ್ ರೈ ನಾಮಫಲಕ ಅನಾವರಣಗೊಳಿಸಿ ಲೋಕಾರ್ಪಣೆ ಗೊಳಿಸಿದರು. ಹಿರಿಯರಾದ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟು ಹಬ್ಬದ ಅಂಗವಾಗಿ  ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಡಿ.25 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆಯ ಅಂಗವಾಗಿ ಸುಳ್ಯದ ಅಟಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ, ವಿಕ್ರಂ ಅಡ್ಪಂಗಾಯ, ಸುಭೋದ್ ಶೆಟ್ಟಿ ಮೇನಾಲ,...

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಭೇಟಿ – ಮೆಚ್ಚುಗೆ

ಸುಳ್ಯದ ಅಂಬಟೆಡ್ಕದ ಆರೋಹಿ ಎನ್‌ಕ್ಲೇವ್ ನಲ್ಲಿರುವ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಡಿ.26 ರಂದು ಭೇಟಿ ನೀಡಿ ಸಂಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಮಹೇಶ್ ಮೇರ್ಕಜೆ, ಸತೀಶ್ ಹೊದ್ದೆಟ್ಟಿ, ಧನಪಾಲ ಕೆ. ಆರ್, ಮಹೇಶ್ ಉಗ್ರಾಣಿಮನೆ,...

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಭೇಟಿ – ಮೆಚ್ಚುಗೆ

ಸುಳ್ಯದ ಅಂಬಟೆಡ್ಕದ ಆರೋಹಿ ಎನ್‌ಕ್ಲೇವ್ ನಲ್ಲಿರುವ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಮಳಿಗೆಗೆ ಮಡಿಕೇರಿ ಶಾಸಕ ಮಂತರ್‌ ಗೌಡ ಡಿ.26 ರಂದು ಭೇಟಿ ನೀಡಿ ಸಂಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಮಹೇಶ್ ಮೇರ್ಕಜೆ, ಸತೀಶ್ ಹೊದ್ದೆಟ್ಟಿ, ಧನಪಾಲ ಕೆ. ಆರ್, ಮಹೇಶ್ ಉಗ್ರಾಣಿಮನೆ,...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 30,000ಕ್ಕೂ ಅಧಿಕ ಭಕ್ತಾದಿಗಳಿಂದ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕಾರ

ಸುಬ್ರಹ್ಮಣ್ಯ ಡಿಸೆಂಬರ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ  ಮಹೋತ್ಸವದ ಶುಕ್ರವಾರದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದು, ಅಂದಾಜು ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕರಿಸಿದ್ದಾರೆ. ದೂರದ ಊರುಗಳಾದ ಬೆಂಗಳೂರು, ಮೈಸೂರು, ಕೋಲಾರ, ದೊಡ್ಡಬಳ್ಳಾಪುರ, ಕಾರವಾರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡ,...
Loading posts...

All posts loaded

No more posts

error: Content is protected !!