Ad Widget

ಚಲನಚಿತ್ರ ನಟಿ ರಕ್ಷಿತಾ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ

ಸುಬ್ರಹ್ಮಣ್ಯ ಜನವರಿ 8 : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ರಕ್ಷಿತಾ ಅವರು ಕುಟುಂಬ ಸಮೇತರಾಗಿ ಇಂದು ಗುರುವಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಮಹಾಪ್ರಸಾದ ಸ್ವೀಕರಿಸಿದರು.
ತದನಂತರ ಕ್ಷೇತ್ರದ ದೈವ ಹೊಸಳ್ಳಿಗಮ್ಮ ಗುಡಿಯಲ್ಲಿ ದರ್ಶನ ಮಾಡಿ ಅಲ್ಲಿಂದ ಮುಂದೆ ಶ್ರೀ ದೇವಳದ ಆಡಳಿತ ಕಚೇರಿಗೆ ತೆರಳಿದರು. ಅಲ್ಲಿ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿಯವರು ರಕ್ಷಿತಾ ಅವರನ್ನು ಶಾಲು ಹೊಂದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಜೊತೆಗಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading