Ad Widget

ಸಂಪಾಜೆ : ರೈತರಿಗೆ ಜೇನುಪೆಟ್ಟಿಗೆ ವಿತರಣೆ

ಎನ್.ಬಿ.ಪಿ.ಜಿ.ಆರ್ ನವದೆಹಲಿ, ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ, ಸಂಜೀವಿನಿ ಎನ್.ಆರ. ಎಲ್.ಎಂ ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಸಂಪಾಜೆ,  ಶ್ರೀ ವಿಷ್ಣು ಸಂಜೀವಿನಿ ಒಕ್ಕೂಟ ಸಂಪಾಜೆ ಸಹಯೋಗದಲ್ಲಿ  ಗ್ರಾಮದ ಪರಿಶಿಷ್ಟ ಜಾತಿಯ ರೈತ ಬಾಂಧವರಿಗೆ ಸಂಸಾರ ಸಮೇತ ಜೇನುಪೆಟ್ಟಿಗೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಹನೀಫ್...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ‌.ಜಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಬೆಂಗಳೂರು ಇದರ ಅಧ್ಯಕ್ಷೆ ಶ್ರೀಮತಿ ಪಲ್ಲವಿ.ಜಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ ಮಾಡಿ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಇವರನ್ನು ದೇವಳದ ವತಿಯಿಂದ ವಿಶೇಷವಾಗಿ ಶಾಲು ಹೊದಸಿ ಪ್ರಸಾದ ನೀಡಿ ಗೌರವಿಸಲಾಯಿತು. ಹಾಗೂ ಸ್ಥಳೀಯ ಮಲೆ ಕುಡಿಯ ಸಮುಧಾಯದ ವತಿಯಿಂದ ವಿಶೇಷವಾಗಿ...
Ad Widget

ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸಬೇಕೆಂದು ಆಗ್ರಹಿಸಿ ಸಮಾಲೋಚನಾ ಸಭೆ ; “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುತ್ತಿಗಾರು ಸರ್ಕಾರಿ ಆರೋಗ್ಯ ಕೇಂದ್ರದೊಂದಿಗೆ ವಿಲೀನಗೊಳಿಸುವ ಪ್ರಯತ್ನವನ್ನು ವಿರೋಧಿಸುತ್ತೇವೆ” : ಗ್ರಾಮಸ್ಥರು ; ಈ ಕುರಿತು ಮುಖ್ಯಮಂತ್ರಿಗಳಿಗೆ, ಸಂಬಂಧಪಟ್ಟ ಸಚಿವರುಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ತೀರ್ಮಾನ

ಕೊಲ್ಲಮೊಗ್ರು, ಕಲ್ಮಕಾರು, ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸೇರಿದಂತೆ ಸುತ್ತಲಿನ ಗ್ರಾಮಗಳ ಜನರಿಗೆ ಸಹಕಾರಿಯಾಗುವಂತೆ ಕೊಲ್ಲಮೊಗ್ರದಲ್ಲಿ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಎಲ್ಲಾ ರೀತಿಯ ವ್ಯವಸ್ಥೆಗಳಿದ್ದರೂ ಕೂಡ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ನಿರಂತರ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲದೀಪ್.ಎಂ.ಡಿ ರವರು...

ಪಡ್ಪಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ನಿಧನ

ಪಡ್ಪಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು  ನಿಧನರಾದರು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆದಿತ್ತು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಲ್ಮಡ್ಕ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ,...

ಐವರ್ನಾಡು : ಯುವಕ ಆತ್ಮಹತ್ಯೆ

ಐವರ್ನಾಡಿನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಕರುಣಾಕರ ಕಟ್ಟತ್ತಾರು ( 32) ಎಂಬವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಎರಡು ವರ್ಷಗಳ ಹಿಂದೆ ಅವರಿಗೆ ಮದುಗೆಯಾಗಿದ್ದು ಬಳಿಕ ವಿಚ್ಛೇದನವಾಗಿತ್ತು.ಮೃತರು ತಂದೆ ಹುಕ್ರಪ್ಪ,ತಾಯಿ ಪೊನ್ನಕ್ಕ, ಸಹೋದರಿ ಶ್ರೀಮತಿ ಪವಿತ್ರ ರನ್ನು ಅಗಲಿದ್ದಾರೆ
error: Content is protected !!