- Saturday
- March 7th, 2026
“ಬಲಿಷ್ಠ ರಾಷ್ಟ್ರ ನಿರ್ಮಾಣದ ಕನಸು ಕಂಡ ಕ್ರಾಂತಿಕಾರಿ ಸಂತ ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಚಿಂತನೆಗಳನ್ನು ಯುವ ಸಮುದಾಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿದ್ದು ಇತರರಿಗೂ ಜಾಗೃತಿ ಮೂಡಿಸುವ ಕಾರ್ಯ ಮಾಡಿದಾಗ ಯಾವುದೇ ರೋಗದ ನಿಯಂತ್ರಣ ಸಾಧ್ಯ” ಎಂದು ಸುಳ್ಯ ಅರೋಗ್ಯ ಇಲಾಖೆಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ...
ಯುವರಕ್ತ ನಿಧಿ ಬೆಳ್ಳಾರೆ ಇದರ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವು ಬೆಳ್ಳಾರೆ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ಜ.11ರಂದು ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಐ.ಪಿ.ಎಸ್ ಅಧಿಕಾರಿ ಹಾಗೂ ರೆಡ್ ಕ್ರಾಸ್ ಸೊಸೈಟಿ ಕರ್ನಾಟಕ ಇದರ ಉಪಾಧ್ಯಕ್ಷರಾದ ಭಾಸ್ಕರ್ ರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು “ಇಂತಹ ಒಂದು ಗ್ರಾಮೀಣ ಭಾಗದಲ್ಲಿ ಮೊದಲ ಬಾರಿ ರಕ್ತ...
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ವಿಶ್ರಾಂತ ಐ.ಎ.ಎಸ್ ಅಧಿಕಾರಿ ಡಾ. ಟಿ.ಶ್ಯಾಮ್ ಭಟ್ ಅವರಿಗೆ ಪ್ರತಿಷ್ಠಿತ ಮೈಸೂರು ವಿ.ವಿ ಗೌರವ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿದ ಪ್ರಯುಕ್ತ ಅವರ ಸ್ವಗೃಹದಲ್ಲಿ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ದೇವಸ್ಥಾನದ ಮೊಕ್ತೇಸರರು ಹಾಗೂ ಸಮಿತಿಯ ಅಧ್ಯಕ್ಷರಾದ ಎಂ.ಬಿ ಸದಾಶಿವ ರವರು ಸನ್ಮಾನಿತರ...
ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರಕ್ಕೆ ಸುಳ್ಯ ತಾಲೂಕಿನ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿಶೇಷ ಅಗತ್ಯವುಳ್ಳ ಸುಮಾರು 40 ಮಕ್ಕಳು ತಮ್ಮ ಹೆತ್ತವರೊಂದಿಗೆ ಭೇಟಿ ನೀಡಿದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯು ಹಮ್ಮಿಕೊಂಡ ವಿಶೇಷ ಅಗತ್ಯವುಳ್ಳ ಮಕ್ಕಳ ಕ್ಷೇತ್ರ ಭೇಟಿಯ ಅಂಗವಾಗಿ ರಂಗಮನೆಗೆ ಬಂದ ಮಕ್ಕಳು ಅಲ್ಲಿನ ಕಲಾತ್ಮಕ ಶಿಲ್ಪಗಳನ್ನು ಮುಗ್ಧರಾಗಿ ವೀಕ್ಷಿಸಿದರು. ಮನೆಯೊಳಗೆ...
ಸುಳ್ಯದ ಸ್ವಾಮಿ ವಿವೇಕಾನಂದ ಪ್ರತಿಮೆ ನಿರ್ಮಾಣ ಸಮಿತಿ ಇದರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ವಿವೇಕಾನಂದ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಜ.12ರಂದು ನಡೆಯಿತು.ಸುಳ್ಯದ ಹಿರಿಯ ದಂತ ವೈದ್ಯರಾದ ಡಾ.ಎಂ.ವಿ.ಆಚಾರ್ ರವರು ವಿವೇಕಾನಂದರ ಪುತ್ಥಳಿಗೆ ಹಾರಾರ್ಪಣೆಗೈದರು. ಸುಳ್ಯ ಹಿಂದೂ ಸಂಗಮ ಆಯೋಜನಾ ಸಮಿತಿ ಅಧ್ಯಕ್ಷ ಎಂ.ಬಿ.ಸದಾಶಿವ, ಸುಳ್ಯ ಸೇವಾ ಭಾರತಿ ಹೆಲ್ಫ್ ಲೈನ್ ಅಧ್ಯಕ್ಷ ಡಾ.ಮನೋಜ್...
ಸುಳ್ಯದ ರಥಬೀದಿಯಲ್ಲಿ ಹಣ ಹಾಗೂ ಅಮೂಲ್ಯ ದಾಖಲೆಗಳಿದ್ದ ಪರ್ಸ್ ಕಳೆದು ಹೋಗಿದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಬೇಕಾಗಿ ವಿನಂತಿ ಮೊ: 6363287252
ಸುಬ್ರಹ್ಮಣ್ಯ ಜನವರಿ 11 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ದೂರದ ರಾಜ್ಯಗಳಿಂದ ಹಾಗೂ ಊರುಗಳಿಂದ ಅತ್ಯಧಿಕ ಭಕ್ತರು ಬಂದು ದೇವರ ದರ್ಶನ, ಸೇವೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಹೋಗುತ್ತಿದ್ದಾರೆ. ಆದರೆ ಅಷ್ಟೇ ಕಸದ ರಾಶಿ ರಾಶಿಗಳು ಸುಬ್ರಹ್ಮಣ್ಯ ಪಾರ್ಕಿಂಗ್...
ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(ಕ್ರೈಸ್) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ನೆಲ್ಲಿತೀರ್ಥ, ಗುರುಪುರ, ಮೂಲ್ಕಿ ತಾಲೂಕಿನ ಕಮ್ಮಾಜೆ, ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಮಚ್ಚಿನ, ಹೊಸಂಗಡಿ, ಬಂಟ್ವಾಳ ತಾಲೂಕಿನ ವಗ್ಗ, ಪುಂಜಾಲಕಟ್ಟೆ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ...
“ಹೃದಯ ಶ್ರೀಮಂತಿಕೆಯ ಮನಸ್ಸುಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಾಗಾಗಿಯೇ ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಇಂದು ಉನ್ನತ ಮಟ್ಟಕ್ಕೆ ತಲುಪಿದೆ. ಸಹಕಾರಿ ಕ್ಷೇತ್ರದಲ್ಲಿ ಸವಣೂರು ಸೀತಾರಾಮ ರೈ ಅವರು ಒಂದು 'ನಕ್ಷತ್ರ' ವಾಗಿ ಮಿನುಗುತ್ತಿದ್ದಾರೆ” ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು.ಅವರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯನ್ನು...
ಪೆರಾಜೆ ಗ್ರಾಮದ ನಿಡ್ಯಮಲೆ ನಿವಾಸಿ ಯತೀಶ ಎನ್.ಎಂ.ರವರಿಗೆ (45) ಇತ್ತೀಚೆಗೆ ಮೆದುಳಿನಲ್ಲಿ ರಕ್ತದ ಗಟ್ಟಿಕೆ (Brain Blood Clot) ಉಂಟಾಗಿ, ಪ್ರಜ್ಞಾಹೀನತೆ ಬಂದಿದೆ. ಇದರ ಪರಿಣಾಮವಾಗಿ ಅವರ ದೇಹದ ಬಲ ಭಾಗ ಸಂಪೂರ್ಣವಾಗಿ ಬಲಹೀನ ಸ್ಥಿತಿ ಉಂಟಾಗಿದೆ. ಪ್ರಸ್ತುತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಕ್ಷಣ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ....
Loading posts...
All posts loaded
No more posts
