Ad Widget

ಸಂಪಾಜೆ : ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆ – ಆರೋಪಿಗಳ ಬಂಧನ

ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ(ನೋಂದಾಣಿ ಸಂಖ್ಯೆ:ಕೆ.ಎ ೧೩ ಎಎ ೦೭೬೯) ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ. ವಾಹನದ ಮೇಲ್ಬಾಗದಲ್ಲಿ ಟಾರ್ಪಲ್ ಹಾಕಿ ಭತ್ತದ ಹೊಟ್ಟು ಇರುವ ಚೀಲ ಹಾಕಿ ಅದರ ಅಡಿ ಭಾಗದಲ್ಲಿ ಬೀಟಿ ಮರಗಳ ೨೫ ತುಂಡುಗಳನ್ನು ಸಾಗಿಸುತ್ತಿರುವುದನ್ನು ಪತ್ತೆಹಚ್ಚಿ ಆರೋಪಿಗಳನ್ನು ಅರಣ್ಯ ಇಲಾಖೆ ಬಂಧಿಸಿದೆ. ಆರೋಪಿಗಳಾದ ವಾಹನ ಚಾಲಕ ಬಿ.ಎಂ ಸಜನ್, ತಂದೆ ಬಿ.ಎಂ ಮಹೇಶ್, ನಾಪೋಕ್ಲು ಹೋಬಳಿ, ಬಲ್ಲಮಾವಟಿ ಗ್ರಾಮ ಇವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮತ್ತೋರ್ವ ಪ್ರಮುಖ ಆರೋಪಿ ಅಬ್ದುಲ್ ಅಬ್ದುಟ್ಟಿ, ಸಿದ್ದಾಪುರ ಗ್ರಾಮ, ವಿರಾಜಪೇಟೆ ತಾಲ್ಲೂಕು, ತಲೆ ಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಡಿಕೇರಿ ಪ್ರಾದೇಶಿಕ ವಿಭಾಗದ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಸಂರಕ್ಷಣಾಧಿಕಾರಿಗಳು, ಮಡಿಕೇರಿ ಉಪ ವಿಭಾಗ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿಯವರ ನೇತೃತ್ವದಲ್ಲಿ ಖಚಿತ ವರ್ತಮಾನದ ಮೇರೆಗೆ ಜ.೧೫ ರಂದು ರಾತ್ರಿ ಸಂಪಾಜೆ ಅರಣ್ಯ ತನಿಖಾ ಠಾಣೆಯ ಉಪ ವಲಯ ಅರಣ್ಯಾಧಿಕಾರಿಯವರು ಹಾಗೂ ಸಿಬ್ಬಂದಿ ವರ್ಗದವರು  ಸದರಿ ಕಾರ್ಯಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಡಿನ್ನಿ ದೇಚಮ್ಮ, ಉಪ ವಲಯ ಅರಣ್ಯಾಧಿಕಾರಿ. ಸಂಧೀಪ್. ಗೌಡ ಗಸ್ತು ಅರಣ್ಯ ಪಾಲಕರಾದ ಕಾರ್ತಿಕ್.ಡಿ, ನಾಗರಾಜ್.ಎಸ್, ಸಿದ್ದರಾಮ ನಾಟಕರ್ ಮತ್ತು ಇಲಾಖಾ ವಾಹನ ಚಾಲಕ ಭುವನೇಶ್ವರ ತನಿಖಾ ಠಾಣೆಯ ಸಿಬ್ಬಂದಿಯಾದ ರಾಜೇಶ್ ಪಾಲ್ಗೊಂಡಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading