Ad Widget

ಬೆಳ್ಳಾರೆ ಗ್ರಾ.ಪಂ.ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಭೇಟಿ ನೀಡಿದ ಕೆ.ಪಿ.ಎಸ್ ವಿದ್ಯಾರ್ಥಿಗಳು

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ-ಗ್ರಂಥಾಲಯದಲ್ಲಿ ಫೆ.10 ರಂದು "ಶಾಲಾ ವಿದ್ಯಾರ್ಥಿಗಳು ಒಂದು ದಿನ" ಕಾರ್ಯಕ್ರಮ ನಡೆಯಿತು.  ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಖುಷಿಪಟ್ಟರು.‌ಈ ಸಂದರ್ಭದಲ್ಲಿ ಸಹಶಿಕ್ಷಕರುಗಳಾದ ಅರುಣಾಕ್ಷಿ ಕೆ.ಎಲ್, ಸುಶೀಲ ಹೆಗಡೆ, ಇಳಶ್ರೀ ಸಿ.ಜಿ, ತೃಪ್ತಿ ಎಂ.ಎಂ ಉಪಸ್ಥಿತರಿದ್ದರು.ಗ್ರಂಥಾಪಾಲಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ ವಂದಿಸಿದರು.

ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾದಿಂದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಸುಳ್ಯ ಭಾಗದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಯ ವ್ಯವಸ್ಥೆಗಳ ಮತ್ತು ಬೇಡಿಕೆಗಳ ಬಗ್ಗೆ ಗಮನಿಸಲಾಯಿತು. ಹೊಸ ಕಟ್ಟಡದ ಬೇಡಿಕೆಯಿದ್ದು, ಶಾಸಕರ ಜೊತೆ ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವ ಭರವಸೆ ನೀಡಿದರು.ಈ...
Ad Widget

ಫೆ.15ರಂದು ಎಲಿಮಲೆಯಲ್ಲಿ
ಬೃಹತ್ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಗ್ರಾಮ ಪಂಚಾಯತ್ ದೇವಚಳ್ಳ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ,  ಲಯನ್ಸ್ ಕ್ಲಬ್ ಗುತ್ತಿಗಾರು, ಜೆ.ಸಿ.ಐ ಸುಳ್ಯ ಪಯಸ್ವಿನಿ,  ಶಿವಾಜಿ ಫ್ರೆಂಡ್ಸ್ ಕ್ಲಬ್(ರಿ.) ಹುರುಳಿಯಡ್ಕ, ನುಸ್ರತುಲ್ ಇಸ್ಲಾಂ ಎಸೋಸಿಯೇಷನ್ (ರಿ.) ಎಲಿಮಲೆ ಇವುಗಳ...

ವಳಲಂಬೆ : ಅಡಿಕೆ ಕಳ್ಳರನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಸ್ಥಳೀಯರು

ಅಡಿಕೆಗೆ ಉತ್ತಮ ಬೆಲೆ ಇರುವ ಹಿನ್ನೆಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಫೆ.11 ರಂದು ಸಂಜೆ ವಳಲಂಬೆ ಸಮೀಪ ಅಡಿಕೆ ಕಳ್ಳತನ ನಡೆಸುತ್ತಿದ್ದ ಮೂವರನ್ನು ಹಿಡಿದು ಪೋಲಿಸರು ಒಪ್ಪಿಸಿದ್ದಾರೆ.ಕಳ್ಳತನ ನಡೆಸುತ್ತಿದ್ದಾರೆ ಎಂಬ ಶಂಕೆಯಿಂದ ಸ್ಥಳೀಯರು ಕಾದು ಕುಳಿತು ಕಳ್ಳರನ್ನು ಹಿಡಿದಿದ್ದಾರೆ. ಕಳ್ಳತನ ನಡೆಸಿದ ಸತೀಶ್ ತಳೂರು, ಶಿವ ಅಡ್ಟನಪಾರೆ ಹಾಗೂ ಸರೋಜ ಎಂಬುವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:12-02-2026ಗುರುವಾರ*01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು. ನಿಮ್ಮ ಮುಂದಿನ ಹೊಸ ಕಾರ್ಯಾ ಆರಂಭದ ಬಗ್ಗೆ ಯಾರೊಂದಿಗೂ ಚರ್ಚಿಸಬೇಡಿ,ಪರಿಹಾರ:-ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ...

ಬೆಳ್ಳಾರೆಯ ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕ್ ಸ್ಪೋಟ

ಬೆಳ್ಳಾರೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಶುದ್ಧ ಕುಡಿಯುವ ನೀರಿನಘಟಕದ ಟ್ಯಾಂಕ್ ಇಂದು ಸ್ಪೋಟಗೊಂಡಿದೆ.ತಾಂತ್ರಿಕ ಅಡಚಣೆಗಳಿಂದ ಘಟಕದ ಅನಿಲ ಸಂಪರ್ಕದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಇಲ್ಲಿ ಗಾಜುಗಳು ಪುಡಿ ಪುಡಿಯಾಗಿದೆ.ಹಲವು ವರುಷಗಳಿಂದ ಕಾರ್ಯ ನಿರ್ವಹಿಸುತ್ತಾ ಇದ್ದ ಈ ಟ್ಯಾಂಕ್ ಸ್ಪೋಟದ ಬಗ್ಗೆ ಸುಳ್ಯ ತಾಲೂಕು ಪಂಚಾಯತ್ ಇಒ ರವರು ಸೂಕ್ತ ತನಿಖೆ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ‌.ಈ...

ಹರಿಹರ ಪಳ್ಳತ್ತಡ್ಕ : ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ “ಕಾಫಿ ಬೆಳೆ ಹಾಗೂ ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.) ಹರಿಹರ ಪಳ್ಳತ್ತಡ್ಕ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ಸಹಯೋಗದೊಂದಿಗೆ “ಕಾಫಿ ಬೆಳೆ ಹಾಗೂ ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”ವು ಸಂಘದ ಪ್ರಧಾನ ಕಛೇರಿಯಲ್ಲಿ ಫೆ.11 ರಂದು ನಡೆಯಿತು.ಸಂಘದ ಅಧ್ಯಕ್ಷರಾದ ಡಾ.ಸೋಮಶೇಖರ್ ಕಟ್ಟೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರಗತಿಪರ ಕೃಷಿಕರಾದ ಚಂದ್ರಶೇಖರ ಕಜ್ಜೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ...

“ಕೇಂದ್ರದಲ್ಲಿ ಆಡಳಿತ ಕೈತಪ್ಪಿದ  ಹತಾಶ ಮನೋಭಾವದಲ್ಲಿರುವ  ಕಾಂಗ್ರೆಸ್ಸಿನಿಂದ ನಿರಂತರ ಸುಳ್ಳು ಅಪಪ್ರಚಾರ” ; “ಮಹಾತ್ಮಾ ಗಾಂಧೀಜಿ ಅವರ ಕನಸು ನನಸು ಮಾಡುವ ಕಾಂಗ್ರೆಸ್ ಕರ್ನಾಟಕವನ್ನು  ಕುಡುಕರ ರಾಜ್ಯವಾಗಿಸಿದೆ” ; ಕಾಂಗ್ರೆಸ್ ಸಂಗ್ರಾಮ್ ಪಾದಯಾತ್ರೆ ವಿರುದ್ಧ ಬಿಜೆಪಿ  ಎಂ.ಎಲ್.ಸಿ. ಪ್ರತಾಪ್ ಸಿಂಹ ನಾಯಕ್ ಪತ್ರಿಕಾಗೋಷ್ಠಿ

“ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2047ರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ಉದ್ಯೋಗ ಖಾತರಿ ಯೋಜನೆಯ ಹೆಸರು ಬದಲಾಯಿಸಿ ವಿಬ್ ಜಿ ರಾಮ್ ಜಿ ಯೋಜನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಇದರ ಸತ್ಯಾಸತ್ಯತೆಯನ್ನು ಅರಿಯದೇ, ಜನರ ದಿಕ್ಕಿ ತಪ್ಪಿಸುವ ನಿಟ್ಟಿನಲ್ಲಿ ಪಾದಯಾತ್ರೆ ಮಾಡುತ್ತಿದೆ. ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ಸೋತು ಕಂಗಾಲಾಗಿರುವ ಕಾಂಗ್ರೆಸ್ ಹತಾಶ ಮನೋಭಾವದಿಂದ ಕೇಂದ್ರದಲ್ಲಿ...

ಕುಕ್ಕೆ ಸುಬ್ರಹ್ಮಣ್ಯ : ದೇವಸ್ಥಾನದ ಆಡಳಿತಕ್ಕೊಳಪಟ್ಟ ಪ್ರೌಢಶಾಲೆ ಹಾಗೂ ಕಾಲೇಜುಗಳ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ಎಂಟು ತಿಂಗಳುಗಳಿಂದ ಪಾವತಿಯಾಗದ ವೇತನ ; ವೇತನ ಪಾವತಿಸುವಂತೆ ಆಗ್ರಹಿಸಿ ಶಿಕ್ಷಣ ಸಂಸ್ಥೆಯ ಮುಂದೆ ಮೌನ ಪ್ರತಿಭಟನೆ ; ಮನವಿ ಸ್ವೀಕರಿಸಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟಿರುವಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜಿನ ಬೋಧಕ ಹಾಗೂ ಬೋಧಕೇತರಸಿಬ್ಬಂದಿಗಳಿಗೆ ಕಳೆದ ಎಂಟು ತಿಂಗಳಿನಿಂದ ಬಾಕಿಯಾದವೇತನ ಪಾವತಿಸುವಂತೆ ಆಗ್ರಹಿಸಿ ಪೋಷಕ ವರ್ಗ ಮತ್ತು ಕಾಲೇಜು ಅಭಿಮಾನಿಗಳಿಂದ ಮೌನ ಪ್ರತಿಭಟನೆ ನಡೆಯಿತು.ಪ್ರತಿಭಟನೆಯ ಉದ್ದೇಶ : “ವೇತನ ನೀಡದಿರುವುದು ಮತ್ತು ಇದರ ಬಗ್ಗೆ ಪದೇ ಪದೆ ಪ್ರಯತ್ನ ಪಟ್ಟರೂ ಸಿಬ್ಬಂದಿಗಳಿಗೆ...

ಸುಬ್ರಹ್ಮಣ್ಯ ಹಾಗೂ ಗುತ್ತಿಗಾರು ವಿದ್ಯುತ್ ಉಪಕೇಂದ್ರದ ಈ ಭಾಗಗಳಲ್ಲಿ ನಾಳೆ(ಫೆ.12) ವಿದ್ಯುತ್ ವ್ಯತ್ಯಯ

ನಾಳೆ ಫೆ.12 ಗುರುವಾರದಂದು ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33ಕೆವಿ ಮಾರ್ಗ ಹಾಗೂ 33/11 ಕೆವಿ ಗುತ್ತಿಗಾರು ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 3:00 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದ್ದು, ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ ಪಳ್ಳತ್ತಡ್ಕ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು...
Loading posts...

All posts loaded

No more posts

error: Content is protected !!