Ad Widget

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮಾರ್ಚ್ 15 ರಂದು ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು.

. . . . . . . . .


ಶಿಬಿರವನ್ನು ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇದಿಕೆ ಅಧ್ಯಕ್ಷೆ ಸಾವಿತ್ರಿ ಕಣೆಮರಡ್ಕ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ರಿಜಿಸ್ಟ್ರಾರ್ ಡಾ.ಸಂದೇಶ್ ರೈ, ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ.ಸತ್ಯವತಿ ಆರ್ ಆಳ್ವ, ಬ್ಲಡ್ ಬ್ಯಾಂಕ್ ಅಧಿಕಾರಿಗಳಾದ ಡಾ.ನವ್ಯ ಬಿ.ಎನ್, ಡಾ.ಅಂಜಲಿ ರಾವ್, ಯಾದವ ಸಭಾ ಜಿಲ್ಲಾಧ್ಯಕ್ಷರಾದ ಎ.ಕೆ ಮಣಿಯಾಣಿ, ತಾಲೂಕು ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಮಹಿಳಾ ವೇದಿಕೆ ಅಧ್ಯಕ್ಷೆ ಜಯಾಕೃಷ್ಣ, ಯಾದವ ಸಭಾ ತಾಲೂಕು ಕಾರ್ಯದರ್ಶಿ ಕೃಷ್ಣ ಬೆಟ್ಟ, ಕೋಶಾಧಿಕಾರಿ ಕರುಣಾಕರ ಕೇನಾಜೆ, ಕೆ.ವಿ.ಜಿ ಆಸ್ಪತ್ರೆಯ ಸಂಪರ್ಕಾಧಿಕಾರಿ ರಘುಪತಿ ಉಗ್ರಾಣಿಮನೆ, ಯುವ ವೇದಿಕೆ ಪೂರ್ವಾಧ್ಯಕ್ಷರುಗಳಾದ ಸುರೇಶ್‌ ಕಣೆಮರಡ್ಕ, ಪ್ರಕಾಶ್ ಯಾದವ್, ಕ್ಯಾಪ್ಟನ್ ಸುಧಾನಂದ ಬೆಳ್ಳಾರೆ, ಯುವ ವೇಧಿಕೆ ಕಾರ್ಯದರ್ಶಿ ಪ್ರಣೀತ್ ಕಣಕ್ಕೂರು, ಶ್ರೀಧರ ಮೇನಾಲ, ಯುವ ವೇದಿಕೆ ಕೋಶಾಧಿಕಾರಿ ತೀರ್ಥೇಶ್ ನಾರ್ಣಕಜೆ, ಜತೆ ಕಾರ್ಯದರ್ಶಿ ಅಶೋಕ್ ಕಿಲಾರ್ಕಜೆ, ಪ್ರಮುಖರಾದ ರೋಹಿತ್ ಬೆಟ್ಟಂಪಾಡಿ, ನಿತೀಶ್ ಸುಳ್ಯ, ಕೆ.ವಿ.ಜಿ ಸಂಸ್ಥೆಯ ಸಿಬ್ಬಂದಿಗಳು ಹಾಗೂ ರಕ್ತದಾನಿಗಳು ಉಪಸ್ಥಿತರಿದ್ದರು. ಸುರೇಶ್ ಕಣೆಮರಡ್ಕ ಸ್ವಾಗತಿಸಿ, ಪ್ರಣೀತ್ ಕಣಕ್ಕೂರು ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading