ಊರುಪಂಜ : ಹೊಳೆಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಚೆಂಬು ಗ್ರಾಮದ ಊರುಪಂಜ ಎಂಬಲ್ಲಿ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಇಂದು ಸಂಜೆ ವರದಿಯಾಗಿದೆ. ಭಾಸ್ಕರ ಬೆಳ್ಚಪ್ಪಾಡ ಎಂಬುವವರು ಮೃತವ್ಯಕ್ತಿ ಎನ್ನಲಾಗಿದೆ. ಮೃತದೇಹವನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೋಲ್ಚಾರು : ಮರಕ್ಕೆ ಗುದ್ದಿದ ಬೈಕ್ – ಸವಾರ ಸ್ಥಳದಲ್ಲೇ ದುರ್ಮರಣ

ಕೋಲ್ಚಾರು ಎಂಬಲ್ಲಿ ದ್ವಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ ಎಂದು ತಿಳಿದುಬಂದಿದ್ದು, ಮೃತ ವ್ಯಕ್ತಿಯನ್ನು ಬಂದಡ್ಕ ಮಾಣಿಮೂಲೆ ಪಾಲಾರು ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಅವರು ಅರಂಬೂರಿನ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ದಿನಪ್ರತಿ ಮನೆಗೆ ಹೋಗಿ ಬರುತ್ತಿದ್ದರು. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು...
Ad Widget

ಜಾಲ್ಸೂರು : ಅಭಿವೃದ್ಧಿ ಇಲ್ಲದೆ ಮತವಿಲ್ಲ – ಚುನಾವಣಾ ಬಹಿಷ್ಕಾರಕ್ಕೆ ನಿರ್ಧರಿಸಿದ ಬೈತಡ್ಕ ನಿವಾಸಿಗಳು

ಜಾಲ್ಸೂರು ಗ್ರಾಮದ ಹೊಸಗದ್ದೆ ರಸ್ತೆ, ಕಾಳಿಗುಂಡಿ‌ ರಸ್ತೆ, ರುದ್ರಚಾಮುಂಡೇಶ್ವರಿ ದೈವಸ್ಥಾನ ರಸ್ತೆಯು ಕಳೆದ 25 ವರ್ಷಗಳಿಂದ ಅಭಿವೃದ್ಧಿಯಾಗಿಲ್ಲ ಎಂದು ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಮುಂದಿನ ಚುನಾವಣೆಗೆ ಮೊದಲು ರಸ್ತೆ ಅಭಿವೃದ್ಧಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹರಿಹರ ಪಳ್ಳತ್ತಡ್ಕ : ಕೃಷಿಕರಿಗೆ ಏಣಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕೃಷಿ ಬೆಳೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ವಿಟ್ಲ, 3ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದೊಂದಿಗೆ ಮಾ.20ರಂದು ಹರಿಹರ ಪಳ್ಳತ್ತಡ್ಕದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನೀರಾ ಅಮೃತ ಯೋಜನೆ 2026-27 ಇದರ ಅಡಿಯಲ್ಲಿ ಕೃಷಿಕರಿಗೆ “ಏಣಿ...

ಉಬರಡ್ಕ : ನಂದಿನಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ – ಸನ್ಮಾನ

ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆಯು ಮಾ.22 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಾನಾತ್ತಿಲ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಾವಿತ್ರಿ ಕಣೆಮರಡ್ಕ ಮಹಿಳಾ ಹಕ್ಕುಗಳು ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ...

ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಏಪ್ರಿಲ್ 10 ರಿಂದ 12ರ ತನಕ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಸುಳ್ಯದ ಯುವ ಉದ್ಯಮಿ ರಾಜೇಶ್ ಶೆಟ್ಟಿ ಮೇನಾಲ, ಅಜ್ಜಾವರ ಗ್ರಾ.ಪಂ ಸದಸ್ಯರಾದ ಪ್ರಸಾದ್ ರೈ ಮೇನಾಲ, ಅಜ್ಜಾವರ ಚೈತ್ರಾ ಯುವತಿ ಮಂಡಲ...

ನಿಧನ : ಪಿ.ಎಸ್ ರಾಜನ್ ತಳೂರು

ದೇವಚಳ್ಳ ಗ್ರಾಮದ ತಳೂರು ಶ್ರೀಧರನ್ ಎಂಬುವವರ ಪುತ್ರ ಪಿ.ಎಸ್ ರಾಜನ್ ರವರು ತೀವ್ರ ಅನಾರೋಗ್ಯದಿಂದ ಇಂದು(ಮಾ.23) ನಿಧನರಾದರು. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಅವಿವಾಹಿತರಾಗಿದ್ದು, ಸಹೋದರಿಯರೊಂದಿಗೆ ವಾಸಿಸುತ್ತಿದ್ದರು.

ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆ

ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆಯು ಮಾರ್ಚ್ 20ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.ಮೊದಲಿಗೆ ಕುಮಾರಿ ಖುಷಿ ಅವರು ಪ್ರಾರ್ಥನೆ ನೆರವೇರಿಸಿದರು.ಗಣ್ಯರಿಂದ ದೀಪಬೆಳಗಿಸಿ ತಾಯಿ ಭಾರತಾಂಭೆಗೆ ಪುಷ್ಫಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಅತಿಥಿಗಳನ್ನು ಯಶೋದರ ಕಡೆಪಾಲ ಅವರು ಸ್ವಾಗತಿಸಿದರು.ಸಭೆಯ ಅದ್ಯಕ್ಷತೆಯನ್ನು ಕಲ್ಲುಗುಂಡಿ ಘಟಕದ ಅದ್ಯಕ್ಷರಾದ ಕೇಶವ...

ಇಂದಿನ(ಮಾರ್ಚ್ 23) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 23 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:23/03/2026 ಸೋಮವಾರ01,🐏ಮೇಷ ರಾಶಿ🐏📃,ಇಂದು ನಿಮ್ಮ ಎಲ್ಲಾ ಕನಸುಗಳು ನನಸಾಗುತ್ತವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಗೆ ಹಲವು ಸುವರ್ಣಾವಕಾಶಗಳು ದೊರೆಯಲಿವೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ಹಣಕಾಸಿನ ಪರಿಸ್ಥಿತಿಯು ಹೆಚ್ಚು ಗೊಂದಲಮಯವಾಗಿರುತ್ತದೆ,ಗಮನಿಸಿ:-ಎಷ್ಟೇ ಕಠಿಣ ಕೆಲಸ ಮಾಡಿದರೂ ಅದಕ್ಕೆ ತಕ್ಕ ಮನ್ನಣೆ ಸಿಗುವುದಿಲ್ಲ,ಪರಿಹಾರ:-ಕಾಳಿಕಾದೇವಿಯ ದರ್ಶನ ಮಾಡಿ,02,🐂ವೃಷಭ ರಾಶಿ🐂📃,ಇಂದು...
Loading posts...

All posts loaded

No more posts

error: Content is protected !!